ಬ್ರೇಕಿಂಗ್ ನ್ಯೂಸ್
22-05-24 04:36 pm HK News Desk ಕ್ರೈಂ
ಹಾಸನ, ಮೇ 22: ಸಿನಿಮೀಯ ರೀತಿಯಲ್ಲಿ ಹಾಸನದ ಡಿವೈಎಸ್ಪಿ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿದ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ ನಡೆದಿದೆ.
ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಅವರ ಖಾತೆಯಿಂದಲೇ 15,98,761 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಂಡು ಸೈಬರ್ ಖದೀಮರು ವಂಚನೆ ಮಾಡಿದ್ದಾರೆ. ಈ ಸಂಬಂಧ ಹಾಸನ ನಗರದ ಸಿಇಎನ್ ಪೊಲೀಸ್ ಠಾಣೆಗೆ ಮುರಳೀಧರ್ ಅವರು ದೂರು ನೀಡಿದ್ದಾರೆ.
ಮಡಿಕೇರಿಯ ಕೆನರಾ ಬ್ಯಾಂಕ್ ಬ್ರಾಂಚ್ ಹಾಗೂ ಭಾಗಮಂಡಲದ ಕೆನರಾಬ್ಯಾಂಕ್ನ ಬ್ಯಾಂಕ್ ಗಳಲ್ಲಿ ಮುರಳೀಧರ್ ಅಕೌಂಟ್ ಗಳನ್ನು ಹೊಂದಿದ್ದಾರೆ. ಮೇ 20 ರಂದು ಮಧ್ಯಾಹ್ನ 1:30ರ ವೇಳೆಗೆ ಡಿವೈಎಸ್ಪಿ ಅವರ ಮೊಬೈಲ್ ಸಂಖ್ಯೆಗೆ ಖಾಲಿ ಮೆಸೇಜ್ಗಳು ಬಂದಿವೆ. ಇದಾದ ನಂತರ ತಮ್ಮ ಗಮನಕ್ಕೇ ಬಾರದೇ ಬೇರೆ ಬೇರೆ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ.
ಮಡಿಕೇರಿ ಅಕೌಂಟ್ ನಿಂದ 12,10,711 ರೂ. ಹಾಗೂ ಭಾಗಮಂಡಲದ ಅಕೌಂಟ್ ನಿಂದ 3,88,050 ರೂ. ಸೇರಿದಂತೆ ಒಟ್ಟು 15,98,761 ರೂ. ಅನ್ನು ಅಪರಿಚಿತ ಬ್ಯಾಂಕ್ ಖಾತೆಗಳಿಗೆ ಟ್ರಾನ್ಸ್ಫರ್ ಮಾಡಲಾಗಿದೆ.
ಸದ್ಯ ಖದೀಮರನ್ನು ಪತ್ತೆ ಮಾಡಿ ತಮ್ಮ ಹಣ ವಾಪಸ್ ಕೊಡಿಸುವಂತೆ ಸೆನ್ ಪೊಲೀಸ್ ಠಾಣೆಗೆ ಡಿವೈಎಸ್ಪಿ ಮುರುಳಿಧರ್ ದೂರು ನೀಡಿದ್ದಾರೆ. ಏನೋ ಸಾಹೇಬ್ರು ಸ್ಟೇಷನ್ ವಿಸಿಟ್ ಗೆ ಬಂದಿರಬಹುದು ಅನ್ಕೊಂಡ ಸೈಬರ್ ಸಿಬ್ಬಂದಿಗಳು ಅಧಿಕಾರಿಯೇ ಸ್ವತಃ ಹಣ ಕಳ್ಕೊಂಡ ವಿಷಯ ಕೇಳಿ ಬೆಚ್ಚಿಬಿದ್ದಿದ್ದಾರೆ.
Hassan Miscreants allegedly hacked bank accounts of Hassan DySP P K Muralidhar. Miscreants allegedly hacked the bank accounts of Hassan sub-division DySP P K Muralidhar and transferred Rs 15.98 lakh to various accounts.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm