ಬ್ರೇಕಿಂಗ್ ನ್ಯೂಸ್
22-05-24 04:36 pm HK News Desk ಕ್ರೈಂ
ಹಾಸನ, ಮೇ 22: ಸಿನಿಮೀಯ ರೀತಿಯಲ್ಲಿ ಹಾಸನದ ಡಿವೈಎಸ್ಪಿ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿದ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ ನಡೆದಿದೆ.
ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಅವರ ಖಾತೆಯಿಂದಲೇ 15,98,761 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಂಡು ಸೈಬರ್ ಖದೀಮರು ವಂಚನೆ ಮಾಡಿದ್ದಾರೆ. ಈ ಸಂಬಂಧ ಹಾಸನ ನಗರದ ಸಿಇಎನ್ ಪೊಲೀಸ್ ಠಾಣೆಗೆ ಮುರಳೀಧರ್ ಅವರು ದೂರು ನೀಡಿದ್ದಾರೆ.
ಮಡಿಕೇರಿಯ ಕೆನರಾ ಬ್ಯಾಂಕ್ ಬ್ರಾಂಚ್ ಹಾಗೂ ಭಾಗಮಂಡಲದ ಕೆನರಾಬ್ಯಾಂಕ್ನ ಬ್ಯಾಂಕ್ ಗಳಲ್ಲಿ ಮುರಳೀಧರ್ ಅಕೌಂಟ್ ಗಳನ್ನು ಹೊಂದಿದ್ದಾರೆ. ಮೇ 20 ರಂದು ಮಧ್ಯಾಹ್ನ 1:30ರ ವೇಳೆಗೆ ಡಿವೈಎಸ್ಪಿ ಅವರ ಮೊಬೈಲ್ ಸಂಖ್ಯೆಗೆ ಖಾಲಿ ಮೆಸೇಜ್ಗಳು ಬಂದಿವೆ. ಇದಾದ ನಂತರ ತಮ್ಮ ಗಮನಕ್ಕೇ ಬಾರದೇ ಬೇರೆ ಬೇರೆ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ.
ಮಡಿಕೇರಿ ಅಕೌಂಟ್ ನಿಂದ 12,10,711 ರೂ. ಹಾಗೂ ಭಾಗಮಂಡಲದ ಅಕೌಂಟ್ ನಿಂದ 3,88,050 ರೂ. ಸೇರಿದಂತೆ ಒಟ್ಟು 15,98,761 ರೂ. ಅನ್ನು ಅಪರಿಚಿತ ಬ್ಯಾಂಕ್ ಖಾತೆಗಳಿಗೆ ಟ್ರಾನ್ಸ್ಫರ್ ಮಾಡಲಾಗಿದೆ.
ಸದ್ಯ ಖದೀಮರನ್ನು ಪತ್ತೆ ಮಾಡಿ ತಮ್ಮ ಹಣ ವಾಪಸ್ ಕೊಡಿಸುವಂತೆ ಸೆನ್ ಪೊಲೀಸ್ ಠಾಣೆಗೆ ಡಿವೈಎಸ್ಪಿ ಮುರುಳಿಧರ್ ದೂರು ನೀಡಿದ್ದಾರೆ. ಏನೋ ಸಾಹೇಬ್ರು ಸ್ಟೇಷನ್ ವಿಸಿಟ್ ಗೆ ಬಂದಿರಬಹುದು ಅನ್ಕೊಂಡ ಸೈಬರ್ ಸಿಬ್ಬಂದಿಗಳು ಅಧಿಕಾರಿಯೇ ಸ್ವತಃ ಹಣ ಕಳ್ಕೊಂಡ ವಿಷಯ ಕೇಳಿ ಬೆಚ್ಚಿಬಿದ್ದಿದ್ದಾರೆ.
Hassan Miscreants allegedly hacked bank accounts of Hassan DySP P K Muralidhar. Miscreants allegedly hacked the bank accounts of Hassan sub-division DySP P K Muralidhar and transferred Rs 15.98 lakh to various accounts.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm