ಬ್ರೇಕಿಂಗ್ ನ್ಯೂಸ್
04-12-20 12:02 pm Headline Karnataka News Network ಕ್ರೈಂ
ಶಿವಮೊಗ್ಗ, ಡಿಸೆಂಬರ್ 03: ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ನಗರದ ಕೆಲವೆಡೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 3 ಗುರುವಾರ ಮಧ್ಯಾಹ್ನದಿಂದ ಶನಿವಾರ, ಡಿ. 5ರ ಬೆಳಿಗ್ಗೆ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.ಗುರುವಾರ ಬೆಳಿಗ್ಗೆ ನೆಹರೂ ಕ್ರೀಡಾಂಗಣಕ್ಕೆ ವಾಕಿಂಗ್ ಗೆಂದು ಹೊರಟಿದ್ದ ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲೆ ದುಷ್ಕರ್ಮಿಗಳು ಲಷ್ಕರ್ ಮೊಹಲ್ಲಾದಲ್ಲಿ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಈ ವಿಷಯ ಹರಡುತ್ತಿದ್ದಂತೆ ಬಜರಂಗದಳದ ಮುಖಂಡರು, ಕಾರ್ಯಕರ್ತರು ಆಸ್ಪತ್ರೆ ಮುಂದೆ ಸೇರಿದ್ದರು. ಹಲ್ಲೆ ಪ್ರಕರಣ ಸಂಬಂಧ ಗುರುವಾರ ಮಧ್ಯಾಹ್ನ ಶಿವಮೊಗ್ಗ ನಗರ ಕೋಟೆ ಠಾಣಾ ವ್ಯಾಪ್ತಿಯಲ್ಲಿ ಎರಡು ಕೋಮಿನ ನಡುವೆ ಜಗಳವಾಗಿದ್ದು, ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ಶಾಂತಿ ಕಾಪಾಡುವ ಸಲುವಾಗಿ ನಿಷೇಧಾಜ್ಞೆ ಜಾರಿಗೊಳಿಸಿರುವುದಾಗಿ ತಹಶೀಲ್ದಾರ್ ಆದೇಶದಲ್ಲಿ ತಿಳಿಸಿದ್ದಾರೆ.
ಜಿಲ್ಲಾಡಳಿತದ ಆದೇಶದ ಮೇರೆಗೆ ನಗರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಿದ್ದು, ಜನರು ಗುಂಪುಗೂಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಮೆರವಣಿಗೆ, ಸಭೆ ಸಮಾರಂಭಗಳನ್ನು ನಡೆಸದಂತೆ ನಿಷೇಧ ಹೇರಲಾಗಿದೆ.
Communal Violence in Shivamogga, Prohibitory orders imposed to be in force from Thursday, December 3 till Saturday, December 5
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am