ಬ್ರೇಕಿಂಗ್ ನ್ಯೂಸ್
30-05-24 04:00 pm HK News Desk ಕ್ರೈಂ
ಶಿವಮೊಗ್ಗ, ಮೇ 30: ಶಿವಮೊಗ್ಗದಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆದಿದ್ದು, ಮನೆಯಮುಂದೆ ನಿಲ್ಲಿಸಿದ್ದ ವಾಹನಗಳ ಗಾಜುಗಳನ್ನು ದುಷ್ಕರ್ಮಿಗಳು ಗಾಂಜಾ ಮತ್ತಿನಲ್ಲಿ ಪುಡಿಗೈದಿದ್ದಾರೆ.
ದೊಡ್ಡಪೇಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು ಕಾರು, ನಾಲ್ಕು ದ್ವಿಚಕ್ರ ವಾಹನ ಹಾಗೂ ಎರಡು ಆಟೋಗಳ ಗಾಜುಗಳನ್ನು ರಾತ್ರೋ ರಾತ್ರಿ ಪುಂಡರ ತಂಡ ಹಾನಿ ಮಾಡಿದೆ.



ಅಷ್ಟು ಮಾತ್ರವಲ್ಲದೆ ಜಗದೀಶ್ ಅವರಿಗೆ ಸೇರಿದ ಅಂಗಡಿ ಬೀಗ ಮಚ್ಚಿನಿಂದ ಹಾನಿಗೊಳಿಸಲಾಗಿದೆ. ಸಂದೇಶ್ ಅವರಿಗೆ ಸೇರಿದ ಹುಂಡೈ ಸ್ಯಾಂಟ್ರೋ ಕಾರು ಜಖಂಗೊಂಡಿದೆ. ಮಂಜು, ಲಿಂಗರಾಜು ಅವರಿಗೆ ಸೇರಿದ ಎರಡು ಆಟೋಗಳೂ ಕೂಡ ಜಖಂಗೊಂಡಿದೆ. ಅಲ್ಲದೆ ಸಿದ್ದಪ್ಪ, ಜಗದೀಶ್, ಚಂದ್ರಪ್ಪ ಸೇರಿದಂತೆ ನಾಲ್ವರ ಬೈಕ್ ಜಖಂಗೊಂಡಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪುಂಡರ ಪತ್ತೆಗೆ ಬಲೆ ಬಿಸಿದ್ದಾರೆ.
ವಾಹನಗಳನ್ನು ಜಖಂಗೊಳಿಸಲಾದ ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯರು ಪೊಲೀಸ್ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದರು.
ಹೊಸಮನೆ ಬಡಾವಣೆಯಲ್ಲಿ ಈ ರೀತಿಯ ಘಟನೆ ನಡೆದಿರುವುದು ಇದೇ ಮೊದಲಲ್ಲ. ಕಳೆದ ಒಂದು ವರ್ಷದಲ್ಲಿ ಇದು ಎರಡನೇ ಘಟನೆ. ಗಾಂಜಾ ಸೇವಿಸುವ ಪುಂಡರ ಗುಂಪು ಈ ಭಾಗದಲ್ಲಿ ಪದೇ ಪದೇ ಇಂತಹ ದುಷ್ಕೃತ್ಯಗಳನ್ನು ಎಸಗುತ್ತಿದೆ. ನಶೆಯಲ್ಲಿ ಮನಸೋಇಚ್ಛೆ ಬೈಕ್ನಲ್ಲಿ ಸುತ್ತುವುದು, ಬೆದರಿಸುವುದು, ಸಿಕ್ಕ ಸಿಕ್ಕ ವಾಹನಗಳನ್ನು ಜಖಂಗೊಳಿಸುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
Miscreants vandalise car bike auto glass in Shivamogga after being intoxicated with drugs. MLA channabasappa visiting the spot slam the police officers for showing negligence in arresting such miscreants
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm