ಬ್ರೇಕಿಂಗ್ ನ್ಯೂಸ್
30-05-24 04:00 pm HK News Desk ಕ್ರೈಂ
ಶಿವಮೊಗ್ಗ, ಮೇ 30: ಶಿವಮೊಗ್ಗದಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆದಿದ್ದು, ಮನೆಯಮುಂದೆ ನಿಲ್ಲಿಸಿದ್ದ ವಾಹನಗಳ ಗಾಜುಗಳನ್ನು ದುಷ್ಕರ್ಮಿಗಳು ಗಾಂಜಾ ಮತ್ತಿನಲ್ಲಿ ಪುಡಿಗೈದಿದ್ದಾರೆ.
ದೊಡ್ಡಪೇಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು ಕಾರು, ನಾಲ್ಕು ದ್ವಿಚಕ್ರ ವಾಹನ ಹಾಗೂ ಎರಡು ಆಟೋಗಳ ಗಾಜುಗಳನ್ನು ರಾತ್ರೋ ರಾತ್ರಿ ಪುಂಡರ ತಂಡ ಹಾನಿ ಮಾಡಿದೆ.
ಅಷ್ಟು ಮಾತ್ರವಲ್ಲದೆ ಜಗದೀಶ್ ಅವರಿಗೆ ಸೇರಿದ ಅಂಗಡಿ ಬೀಗ ಮಚ್ಚಿನಿಂದ ಹಾನಿಗೊಳಿಸಲಾಗಿದೆ. ಸಂದೇಶ್ ಅವರಿಗೆ ಸೇರಿದ ಹುಂಡೈ ಸ್ಯಾಂಟ್ರೋ ಕಾರು ಜಖಂಗೊಂಡಿದೆ. ಮಂಜು, ಲಿಂಗರಾಜು ಅವರಿಗೆ ಸೇರಿದ ಎರಡು ಆಟೋಗಳೂ ಕೂಡ ಜಖಂಗೊಂಡಿದೆ. ಅಲ್ಲದೆ ಸಿದ್ದಪ್ಪ, ಜಗದೀಶ್, ಚಂದ್ರಪ್ಪ ಸೇರಿದಂತೆ ನಾಲ್ವರ ಬೈಕ್ ಜಖಂಗೊಂಡಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪುಂಡರ ಪತ್ತೆಗೆ ಬಲೆ ಬಿಸಿದ್ದಾರೆ.
ವಾಹನಗಳನ್ನು ಜಖಂಗೊಳಿಸಲಾದ ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯರು ಪೊಲೀಸ್ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದರು.
ಹೊಸಮನೆ ಬಡಾವಣೆಯಲ್ಲಿ ಈ ರೀತಿಯ ಘಟನೆ ನಡೆದಿರುವುದು ಇದೇ ಮೊದಲಲ್ಲ. ಕಳೆದ ಒಂದು ವರ್ಷದಲ್ಲಿ ಇದು ಎರಡನೇ ಘಟನೆ. ಗಾಂಜಾ ಸೇವಿಸುವ ಪುಂಡರ ಗುಂಪು ಈ ಭಾಗದಲ್ಲಿ ಪದೇ ಪದೇ ಇಂತಹ ದುಷ್ಕೃತ್ಯಗಳನ್ನು ಎಸಗುತ್ತಿದೆ. ನಶೆಯಲ್ಲಿ ಮನಸೋಇಚ್ಛೆ ಬೈಕ್ನಲ್ಲಿ ಸುತ್ತುವುದು, ಬೆದರಿಸುವುದು, ಸಿಕ್ಕ ಸಿಕ್ಕ ವಾಹನಗಳನ್ನು ಜಖಂಗೊಳಿಸುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
Miscreants vandalise car bike auto glass in Shivamogga after being intoxicated with drugs. MLA channabasappa visiting the spot slam the police officers for showing negligence in arresting such miscreants
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 11:22 am
Mangalore Correspondent
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm