ಬ್ರೇಕಿಂಗ್ ನ್ಯೂಸ್
02-06-24 05:00 pm Udupi Correspondent ಕ್ರೈಂ
ಉಡುಪಿ, ಜೂನ್ 2: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಕುಳಿತು ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳನ್ನು ಕಾಪು ಪೊಲೀಸರು ಶನಿವಾರ ರಾತ್ರಿ ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ.
ಕಾರಿನಲ್ಲಿದ್ದ ಅಮಿತ್ ರಾಜ್, ಪ್ರಕಾಶ್ ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್, ಶ್ರೀಕಾಂತ್, ಶ್ರೀಪತಿ ಫರಂಗಿಪೇಟೆ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಉಡುಪಿಯಿಂದ ಕಾಪು ಕಡೆಗೆ ಬರುತ್ತಿದ್ದ ಕಾಪು ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಜಯಶ್ರೀ ಮಾನೆ ಅವರು ಉದ್ಯಾವರ ಸೇತುವೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸ್ಕಾರ್ಪಿಯೋ ಕಾರು ನಿಂತಿರುವುದನ್ನು ಗಮನಿಸಿದ್ದರು. ಸ್ಕಾರ್ಪಿಯೋ ಕಾರನ್ನು ನಿಲ್ಲಿಸಿ ಪರಿಶೀಲಿಸಲು ಯತ್ನಿಸಿದಾಗ ಆರೋಪಿಗಳು ಕಾರನ್ನು ಏಕಾಏಕಿ ಚಲಾಯಿಸಿ ಕಾಪು ಕಡೆಗೆ ತೆರಳಿದ್ದರು.
ಜಯಶ್ರೀ ಮಾನೆ ಅವರು ತಕ್ಷಣ ಈ ಬಗ್ಗೆ ಕಾಪು ಮತ್ತು ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದು ಬಳಿಕ ಕಾಪು ಎಸ್ಸೈ ಅಬ್ದುಲ್ ಖಾದರ್ ನೇತೃತ್ವದ ತಂಡ ಕೋತಲಕಟ್ಟೆ ಎಂಬಲ್ಲಿ ಸ್ಕಾರ್ಪಿಯೋ ಕಾರನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಪು ಸಿಐ ಜಯಶ್ರೀ ಮಾನೆ ಮತ್ತು ಕಾಪು ಎಸ್ಐ ಅಬ್ದುಲ್ ಖಾದರ್ ಹಾಗೂ ಸಿಬ್ಬಂದಿ ಸ್ಕಾರ್ಪಿಯೋದಲ್ಲಿ ಇದ್ದವರನ್ನು ವಶಕ್ಕೆ ಪಡೆದು ವಾಹನ ಪರಿಶೀಲಿಸಿದಾಗ ದರೋಡೆಗೆ ಹೊಂಚು ಹಾಕುತ್ತಿರುವ ವಿಚಾರ ಬೆಳಕಿಗೆ ಬಂದಿತ್ತು. ಸ್ಕಾರ್ಪಿಯೋ ಕಾರಿನಲ್ಲಿ ಡ್ರ್ಯಾಗನ್, ಚೂರಿ, ಕಬ್ಬಿಣದ ಪೈಪ್ ಮತ್ತು ಮರಳು ಮಿಶ್ರಿತ ಮೆಣಸಿನ ಪುಡಿಯನ್ನು ಪತ್ತೆ ಹಚ್ಚಿದ್ದು, ಪೊಲೀಸರು ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೊಳಪಡಿಸಿದ್ದಾರೆ.
Udupi Six arrested for suspected criminal activity, illegal possession of weapons seized by Kapu police. According to a complaint filed by Circle Inspector Jayashree Mane at Kaup police station, six persons traveling in a Scorpio were found suspicious near the Udyavar bridge while heading towards Mangaluru. The police signaled them to pull over by honking, but they refused and continued driving dangerously. The police, with the assistance of Abdul Khader, S
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm