ಬ್ರೇಕಿಂಗ್ ನ್ಯೂಸ್
05-06-24 01:56 pm HK News Desk ಕ್ರೈಂ
ಹಾಸನ, ಜೂ 05: ಬೆಳ್ಳಂಬೆಳಗ್ಗೆ ನಟೋರಿಯಸ್ ರೌಡಿ ಚೈಲ್ಡ್ ರವಿ (45) ಎಂಬಾತನನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ನಗರದ ಹೇಮಾವತಿನಗರ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.
ಕುಡಿಯುವ ನೀರು ತರಲು ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ರವಿಗೆ ಹಿಂದಿನಿಂದ ವಾಹನ ಡಿಕ್ಕಿ ಹೊಡೆಸಿ ಕೆಳಗೆ ಬೀಳಿಸಿದ ದುಷ್ಕರ್ಮಿಗಳು, ಮಚ್ಚಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಇಬ್ಬರು ದುಷ್ಕರ್ಮಿಗಳು ತಪ್ಪಿಸಿಕೊಳ್ಳಲು ಅವಕಾಶವೇ ಸಿಗದಂತೆ ದಾಳಿ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ವೈಯಕ್ತಿಕ ಸೇಡಿನಿಂದ ಹತ್ಯೆ ನಡೆದಿದೆ ಎನ್ನಲಾಗಿದೆ.
ಚೈಲ್ಡ್ ರವಿ ಸಹ್ಯಾದ್ರಿ ಚಿತ್ರಮಂದಿರದ ಎದುರು ನಡೆದಿದ್ದ ಸ್ಲಂ ಮಂಜನ ಹತ್ಯೆ ಸೇರಿದಂತೆ ಕೊಲೆ ಸೇರಿದಂತೆ ಅತ್ಯಾಚಾರ, ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಬಳಿಕ ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದಿದ್ದ. ಸ್ಥಳೀಯ ಶಾಸಕ ಸ್ವರೂಪ್ ಪ್ರಕಾಶ್ ನಿವಾಸದ ಕೂಗಳತೆ ದೂರದಲ್ಲಿಯೇ ಬೆಳ್ಳಂಬೆಳಗ್ಗೆ ನಡೆದ ಹತ್ಯೆಯಿಂದ ಹೇಮಾವತಿನಗರ ಬಡಾವಣೆ ಜನರು ಆತಂಕಗೊಂಡಿದ್ದಾರೆ.
ಚೈಲ್ಡ್ ರವಿಯನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಆರೋಪಿಗಳು ಸುತ್ತಮುತ್ತಲು ಸಾರ್ವಜನಿಕರು ಓಡಾಡುತ್ತಿದ್ದ ಸಮಯದಲ್ಲೇ ಆತನ ಬೈಕ್ಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿ ಕೃತ್ಯ ಎಸಗಿದ್ದಾರೆ. ವಾಕಿಂಗ್ ಮಾಡುತ್ತಿದ್ದ ಜನರು, ಸಾರ್ವಜನಿಕರು ಹಾಗೂ ಶಾಲೆಗೆ ಹೋಗಲು ಬಸ್ಗಾಗಿ ಸ್ವಲ್ಪ ದೂರದಲ್ಲಿ ಮಕ್ಕಳು ಕಾಯುತ್ತಾ ನಿಂತಿರುವಾಗಲೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಘಟನೆ ಕಂಡು ಎಲ್ಲರೂ ಭಯಭೀತರಾಗಿದ್ದಾರೆ.
ಪೆನ್ಷನ್ ಮೊಹಲ್ಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಂತಕರ ಹುಡುಕಾಟಕ್ಕೆ ಈಗಾಗಲೇ ಹಾಸನ ಎಸ್ಪಿ ಮಹಮದ್ ಸುಜೀತ್ ಎರಡು ತಂಡ ರಚನೆ ಮಾಡಿದ್ದು, ತನಿಖೆ ಮುಂದುವರೆದಿದೆ.
Hassan notorious rowdy child Ravi brutally murdered in broad daylight in Hassan. Early morning miscreants in car rammed his bike and brutally killed child Ravi on June 5th early morning.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm