ಬ್ರೇಕಿಂಗ್ ನ್ಯೂಸ್
05-06-24 01:56 pm HK News Desk ಕ್ರೈಂ
ಹಾಸನ, ಜೂ 05: ಬೆಳ್ಳಂಬೆಳಗ್ಗೆ ನಟೋರಿಯಸ್ ರೌಡಿ ಚೈಲ್ಡ್ ರವಿ (45) ಎಂಬಾತನನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ನಗರದ ಹೇಮಾವತಿನಗರ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.
ಕುಡಿಯುವ ನೀರು ತರಲು ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ರವಿಗೆ ಹಿಂದಿನಿಂದ ವಾಹನ ಡಿಕ್ಕಿ ಹೊಡೆಸಿ ಕೆಳಗೆ ಬೀಳಿಸಿದ ದುಷ್ಕರ್ಮಿಗಳು, ಮಚ್ಚಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಇಬ್ಬರು ದುಷ್ಕರ್ಮಿಗಳು ತಪ್ಪಿಸಿಕೊಳ್ಳಲು ಅವಕಾಶವೇ ಸಿಗದಂತೆ ದಾಳಿ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ವೈಯಕ್ತಿಕ ಸೇಡಿನಿಂದ ಹತ್ಯೆ ನಡೆದಿದೆ ಎನ್ನಲಾಗಿದೆ.
ಚೈಲ್ಡ್ ರವಿ ಸಹ್ಯಾದ್ರಿ ಚಿತ್ರಮಂದಿರದ ಎದುರು ನಡೆದಿದ್ದ ಸ್ಲಂ ಮಂಜನ ಹತ್ಯೆ ಸೇರಿದಂತೆ ಕೊಲೆ ಸೇರಿದಂತೆ ಅತ್ಯಾಚಾರ, ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಬಳಿಕ ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದಿದ್ದ. ಸ್ಥಳೀಯ ಶಾಸಕ ಸ್ವರೂಪ್ ಪ್ರಕಾಶ್ ನಿವಾಸದ ಕೂಗಳತೆ ದೂರದಲ್ಲಿಯೇ ಬೆಳ್ಳಂಬೆಳಗ್ಗೆ ನಡೆದ ಹತ್ಯೆಯಿಂದ ಹೇಮಾವತಿನಗರ ಬಡಾವಣೆ ಜನರು ಆತಂಕಗೊಂಡಿದ್ದಾರೆ.
ಚೈಲ್ಡ್ ರವಿಯನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಆರೋಪಿಗಳು ಸುತ್ತಮುತ್ತಲು ಸಾರ್ವಜನಿಕರು ಓಡಾಡುತ್ತಿದ್ದ ಸಮಯದಲ್ಲೇ ಆತನ ಬೈಕ್ಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿ ಕೃತ್ಯ ಎಸಗಿದ್ದಾರೆ. ವಾಕಿಂಗ್ ಮಾಡುತ್ತಿದ್ದ ಜನರು, ಸಾರ್ವಜನಿಕರು ಹಾಗೂ ಶಾಲೆಗೆ ಹೋಗಲು ಬಸ್ಗಾಗಿ ಸ್ವಲ್ಪ ದೂರದಲ್ಲಿ ಮಕ್ಕಳು ಕಾಯುತ್ತಾ ನಿಂತಿರುವಾಗಲೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಘಟನೆ ಕಂಡು ಎಲ್ಲರೂ ಭಯಭೀತರಾಗಿದ್ದಾರೆ.
ಪೆನ್ಷನ್ ಮೊಹಲ್ಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಂತಕರ ಹುಡುಕಾಟಕ್ಕೆ ಈಗಾಗಲೇ ಹಾಸನ ಎಸ್ಪಿ ಮಹಮದ್ ಸುಜೀತ್ ಎರಡು ತಂಡ ರಚನೆ ಮಾಡಿದ್ದು, ತನಿಖೆ ಮುಂದುವರೆದಿದೆ.
Hassan notorious rowdy child Ravi brutally murdered in broad daylight in Hassan. Early morning miscreants in car rammed his bike and brutally killed child Ravi on June 5th early morning.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm