ಬ್ರೇಕಿಂಗ್ ನ್ಯೂಸ್
05-06-24 09:26 pm Bangalore Correspondent ಕ್ರೈಂ
ಬೆಂಗಳೂರು, ಜೂ 05: ಗಂಡ- ಹೆಂಡತಿ ಜಗಳ ಆಕಸ್ಮಿಕವಾಗಿ ಮಗನ ಕೊಲೆಯಲ್ಲಿ ಅಂತ್ಯವಾದ ದಾರುಣ ಘಟನೆ ಜರಗನಹಳ್ಳಿಯಲ್ಲಿ ನಡೆದಿದೆ.
ಇನ್ಫೋಸಿಸ್ ಕಂಪನಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡ್ತಿದ್ದ ಮಗ, ತಂದೆ- ತಾಯಿಯ ಜಗಳ ಬಿಡಿಸಲು ಹೋಗಿ ಕೊಲೆಯಾಗಿದ್ದಾನೆ.
ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ. ಯಶವಂತ್ (23) ತಂದೆಯಿಂದಲೇ ಕೊಲೆಯಾದ ಪುತ್ರ. ಸರ್ಜಾಪುರ ಸಮೀಪದ ಮ್ಯಾಟ್ರಿಕ್ಸ್ ಎಂಬ ಕಂಪನಿಯಲ್ಲಿ ಯಶವಂತ್ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ.
ಮೃತನ ಅಜ್ಜಿ ಕಾಯಿಲೆ ಬಿದ್ದು ಹಾಸಿಗೆ ಹಿಡಿದಿದ್ದು, ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಅಪ್ಪ ಅಮ್ಮನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಜಗಳ ಬಿಡಿಸಲು ಹೋದ ಮಗನನ್ನು ಹೆದರಿಸಲು ತಂದೆ ಅಡುಗೆ ಮನೆಯಿಂದ ಚಾಕು ತಂದು ಇರಿಯಲು ಹೋಗಿದ್ದಾನೆ. ಚಾಕು ಯುವಕನ ಎದೆಗೆ ಆಳವಾಗಿ ನಾಟಿ ಪ್ರಾಣ ಹೋಗಿದೆ.
ಯಶವಂತ ಉತ್ತಮ ವ್ಯಕ್ತಿತ್ವ ಹೊಂದಿದ್ದ ಹುಡುಗ. ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಎಂಜಿನಿಯರ್ ವೃತ್ತಿ ಮಾಡುತ್ತ, ತಂದೆ ಮಾಡಿದ್ದ ಸಾಲ ಸಹ ತೀರಿಸುತ್ತಿದ್ದ. ಆತನ ಆಸೆಯಂತೆ ಕುಟುಂಬಸ್ಥರು ಯಶವಂತನ ಕಣ್ಣುಗಳನ್ನು ದಾನ ಮಾಡಿದ್ದಾರೆ” ಎಂದು ಸಂಬಂಧಿ ರಾಕೇಶ್ ಮಾಹಿತಿ ನೀಡಿದ್ದಾರೆ.
ಸದ್ಯ ಆರೋಪಿ ತಂದೆ ಬಸವರಾಜುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. “ಪುಟ್ಟೇನಹಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ 23 ವರ್ಷದ ಯುವಕನ ಕೊಲೆಯಾಗಿದೆ. ಗಂಡ ಹೆಂಡತಿ ಹೊಡೆದಾಡುತ್ತಿದ್ದಾಗ ಬಿಡಿಸಲು ಹೋಗಿದ್ದಾನೆ. ಈ ವೇಳೆ ತಂದೆ ಚಾಕು ತಂದು ಹೆದರಿಸಲು ಹೋಗಿದ್ದ. ಯುವಕ ಆಸ್ಪತ್ರೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ” ಎಂದು ದಕ್ಷಿಣ ವಿಭಾಗ ಡಿಸಿಪಿ ಲೊಕೇಶ್ ಜಗಲಾಸರ್ ಹೇಳಿಕೆ ನೀಡಿದ್ದಾರೆ.
23 year old software engineer stabbed by father during fight at home in Bangalore. The diseased has been identified as Yashwant. His father and mother were fighting over looking after their grandmother who is sick, during which when son came to stop the fight he was stabbed by his father.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm