ಬ್ರೇಕಿಂಗ್ ನ್ಯೂಸ್
05-06-24 10:32 pm Mangaluru Correspondent ಕ್ರೈಂ
ಉಳ್ಳಾಲ, ಜೂ.5: ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆ ಮಂಗಳವಾರ ಸಂಜೆ ಕುಂಪಲದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದ ಬಿಜೆಪಿ ಕಾರ್ಯಕರ್ತನ ತಲೆಗೆ ಕಬ್ಬಿಣದ ಸಲಾಕೆಯಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಘಟನೆ ಕುಂಪಲ ಬಾರ್ದೆ ಎಂಬಲ್ಲಿ ಬುಧವಾರ ಸಂಜೆ ನಡೆದಿದ್ದು, ಆರೋಪಿಯನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕುಂಪಲ ಮೂರುಕಟ್ಟ , ಪಲ್ಲ ನಿವಾಸಿ ಬಿಜೆಪಿ ಕಾರ್ಯಕರ್ತ ಪಿಟ್ಟಿ ಯಾನೆ ಪ್ರವೀಣ್ ಪೂಜಾರಿ(35) ಹಲ್ಲೆಗೊಳಗಾದ ಯುವಕ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕೇಂದ್ರದಲ್ಲಿ ಮೋದಿ ನೇತೃತ್ವದ ಎನ್ ಡಿಎ ಬಹುಮತ ಗಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಪೂಜಾರಿ ಮತ್ತು ಸ್ನೇಹಿತರು ಮಂಗಳವಾರ ಸಂಜೆ ಕುಂಪಲ ಸರಕಾರಿ ಶಾಲೆಯ ಮುಂದೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಪಟಾಕಿ ಸಿಡಿಸಿದ್ದ ಪ್ರದೇಶದಲ್ಲಿ ಸ್ಥಳೀಯ ಸಂಘ ಸಂಸ್ಥೆಯೊಂದರ ಕಾರ್ಯಾಲಯ ಇದ್ದು ,ಅವರ ಕಚೇರಿ ಮುಂದೆ ಪಟಾಕಿ ಸಿಡಿಸಿದ್ದರ ವಿರುದ್ಧ ಸಂಸ್ಥೆಯ ಸದಸ್ಯರು ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತನೆನ್ನಲಾದ, ಹಲ್ಲೆಗೊಳಗಾದ ಪ್ರವೀಣ್ ಅವರ ನೆರೆಮನೆಯ ಗೌತಮ್ ಬುಧವಾರ ಸಂಜೆ ಕುಂಪಲ ಬಾರ್ದೆ ಎಂಬಲ್ಲಿ ಪ್ರವೀಣ್ ಮೇಲೆ ದಾಳಿ ನಡೆಸಿದ್ದಾನೆ. ಕಾರಿನಲ್ಲಿ ಬಂದ ಗೌತಮ್ ಪ್ರವೀಣ್ಗೆ ಅವಾಚ್ಯವಾಗಿ ನಿಂದಿಸಿ ಕಬ್ಬಿಣದ ರಾಡ್ ನಿಂದ ತಲೆಗೆ ಹಲ್ಲೆಗೈದು ಮೊಬೈಲನ್ನ ಪುಡಿಗೈದಿದ್ದಾನೆ. ಗಂಭೀರ ಗಾಯಗೊಂಡ ಪ್ರವೀಣ್ ಅವರನ್ನ ಸ್ಥಳೀಯರು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಪ್ರವೀಣ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉಳ್ಳಾಲ ಪೊಲೀಸರು ಆರೋಪಿ ಗೌತಮ್ ನನ್ನ ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭಿಸಿದೆ. ಆಸ್ಪತ್ರೆಗೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಭೇಟಿ ನೀಡಿದ್ದು ಹಲ್ಲೆಗೊಳಗಾದ ಪ್ರವೀಣ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಕಾಂಗ್ರೆಸಿಗರು ಅಧಿಕಾರದ ಅಮಲಿನಲ್ಲಿ ಅಟ್ಟಹಾಸ ಮೆರೆಯುತ್ತಿದ್ದು ಅಮಾಯಕ ಬಿಜೆಪಿ ಕಾರ್ಯಕರ್ತರ ಮೇಲೆ ಎರಗಿ ಹಲ್ಲೆಗೈಯುತ್ತಿರುವುದು ಖಂಡನೀಯ. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಆರೋಪಿ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಬಿಜೆಪಿ ಉಗ್ರವಾಗಿ ಪ್ರತಿಭಟಿಸುವುದಾಗಿ ರವೀಂದ್ರ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಮಂಗಳೂರು ಮಂಡಲದ ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ, ಪ್ರಮುಖರಾದ ಪ್ರಕಾಶ್ ಸಿಂಪೋನಿ, ಜೀವನ್ ಕುಮಾರ್ ತೊಕ್ಕೊಟ್ಟು ಜತೆಯಲ್ಲಿದ್ದರು.
Mangalore Kumpala, a Hindu worker, attacked in a rod for bursting crackers for the BJP win. Some miscenats attacked Praveen Poojari for bursting crakers by celebrating BjP's win in Karnataka.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm