ಬ್ರೇಕಿಂಗ್ ನ್ಯೂಸ್
08-06-24 04:12 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: ಮದುವೆಯಾಗುತ್ತೇನೆಂದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಗೈದು ಗರ್ಭಿಣಿಯಾಗಿಸಿದ ಬಗ್ಗೆ ಮತ್ತು ಇನ್ನೊಂದು ಪ್ರಕರಣದಲ್ಲಿ ಮದುವೆಯಾಗುವುದಾಗಿ ನಂಬಿಸಿ ಉದ್ಯೋಗದಲ್ಲಿದ್ದ ಯುವತಿಯನ್ನು ಅತ್ಯಾಚಾರಗೈದ ಘಟನೆ ಬಗ್ಗೆ ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದು ಬಿಕರ್ನಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಯುವತಿಯನ್ನು ವಿನೋದ್ರಾಜ್ ಎಂಬಾತ ಪ್ರೀತಿಸುವ ನೆಪದಲ್ಲಿ ಅತ್ಯಾಚಾರ ಎಸಗಿದ್ದಾನೆ. ಮಾ. 23ರಂದು ಯುವತಿ ರಜೆಯ ಕಾರಣ ಮನೆಯಲ್ಲಿದ್ದಾಗ ಆರೋಪಿ ವಿನೋದ್ರಾಜ್ ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆಯೊಳಗೆ ಬಂದು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ. ಆನಂತರವೂ ಅತ್ಯಾಚಾರ ಎಸಗಿದ್ದು ಈಗ ಮದುವೆಯಾಗಲು ನಿರಾಕರಿಸಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳಾ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾಳೆ.
ಪಕ್ಕದ ಮನೆಯಾತನಿಂದಲೇ ಬಾಲಕಿ ಗರ್ಭಿಣಿ
ಇನ್ನೊಂದು ಪ್ರಕರಣದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನೆರೆಮನೆ ನಿವಾಸಿ ಅತ್ಯಾಚಾರ ಎಸಗಿರುವ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 14 ವರ್ಷದ ಬಾಲಕಿಯ ಮನೆ ಪಕ್ಕದ ನಿವಾಸಿ ರೋಶನ್ ಎಂಬಾತ, ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಫೆಬ್ರವರಿ ಮತ್ತು ಮಾರ್ಚ್ನಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಅತ್ಯಾಚಾರ ಎಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿಂದ ಪೊಲೀಸರಿಗೆ ಮಾಹಿತಿ ಹೋಗಿದ್ದು ಪ್ರಕರಣ ದಾಖಲಾಗಿದೆ.
Girl raped of marriage, pregnant girl files complaint at women police station in Mangalore. Two seperate cases have been registered in two different cases.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm