ಬ್ರೇಕಿಂಗ್ ನ್ಯೂಸ್
09-06-24 04:34 pm HK News Desk ಕ್ರೈಂ
ಮೈಸೂರು, ಜೂ 09: ವಿಚ್ಛೇದಿತ ಮಹಿಳೆ ಜತೆ ಲವ್ವಿ ಡವ್ವಿ ನಡೆಸಿ, ಆಕೆಯನ್ನು ಗರ್ಭಿಣಿ ಮಾಡಿ ಯುವಕನೊಬ್ಬ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕವಾಗಿ ಯುವಕ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಮಹಿಳೆ ನೀಡಿದ ದೂರಿನ ಮೇರೆಗೆ ನಗರದ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯ 34 ವರ್ಷದ ಮಹಿಳೆ ಮೋಸ ಹೋದವರು. ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ನೊಂದ ಮಹಿಳೆ, ಕೊಳ್ಳೇಗಾಲದ ತೇರಂಬಳ್ಳಿ ಗ್ರಾಮದ ಹರೀಶ (25) ಎಂಬಾತನ ವಿರುದ್ಧ ದೂರು ನೀಡಿದ್ದಾರೆ.
2018ರಲ್ಲಿ ಗಂಡನಿಂದ ವಿಚ್ಛೇದನ ಪಡೆದು ಸ್ವತಂತ್ರವಾಗಿ ಬದುಕುತ್ತಿರುವ ಮಹಿಳೆ ಬಾಳಲ್ಲಿ ಮತ್ತೊಬ್ಬ ಯುವಕ ಎಂಟ್ರಿಯಾಗಿದ್ದಾನೆ. ಮದುವೆಯಾಗುತ್ತೇನೆ ಎಂದು ನಂಬಿಸಿ ಗರ್ಭಿಣಿ ಮಾಡಿ ಯುವಕ ಪರಾರಿಯಾಗಿದ್ದಾನೆ. ಮೈಸೂರಿನ ಖಾಸಗಿ ಕಂಪನಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದು, ಇಬ್ಬರೂ ಹವ್ಯಾಸಿ ಹಾಡುಗಾರರು. ಸಿಂಗಿಂಗ್ ಇವೆಂಟ್ಸ್ಗಳಲ್ಲಿ ಹಾಡು ಹೇಳಲು ಹೋಗುತ್ತಿದ್ದಾಗ ಪರಸ್ಪರ ಪರಿಚಯವಾಗಿತ್ತು. ಪರಿಚಯ ಪ್ರೇಮಕ್ಕೆ ತಿರುಗಿ ಪ್ರೀತ್ಸೆ ಎಂದು ದುಂಬಾಲು ಬಿದ್ದಿದ್ದ. ಕೊನೆಗೆ ಯುವಕನ ಒತ್ತಡಕ್ಕೆ ಮಣಿದ ಟೀಚರ್, ಆತನ ಪ್ರೀತಿಯನ್ನು ಒಪ್ಪಿದ್ದರಿಂದ ಮನೆಗೆ ಯುವಕ ಆಗಾಗ್ಗೆ ಬಂದು ಹೋಗುತ್ತಿದ್ದ.
ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ ಎಂದ ಮಹಿಳೆ ;
ಮದ್ಯ ಕುಡಿಸಿ ನನ್ನ ಬಲವಂತವಾಗಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ. ನಂತರ ಆರೋಪಿ ಹರೀಶನ ಮನೆಯವರಿಂದ ಮದುವೆಗೆ ನಿರಾಕರಣೆ ಮಾಡಲಾಗಿದೆ. ನನ್ನ ಮೇಲೆ ಅತ್ಯಾಚಾರ ಮಾಡಿ ಈಗ ಎರಡು ತಿಂಗಳಿಂದ ಕಾಣೆಯಾಗಿದ್ದಾನೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಹಾಗಾಗಿ ನಾನು ಸರಸ್ವತಿ ಪುರಂ ಪೋಲಿಸ್ ಠಾಣೆಯಲ್ಲಿ ದೂರು ಕೊಟ್ಟಿದ್ದೇನೆ. ಪೊಲೀಸರಿಂದ ನನಗೆ ನ್ಯಾಯಸಿಗುವ ಭರವಸೆ ಇದೆ. ಆತ ನನ್ನನ್ನು ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ. ಹೀಗಾಗಿ ನನಗೆ ನ್ಯಾಯ ಕೊಡಿಸಿ ಎಂದು ಪೊಲೀಸರ ಬಳಿ ನೊಂದ ಮಹಿಳೆ ಅಂಗಲಾಚಿದ್ದಾರೆ.
ಘಟನೆ ಸಂಬಂಧ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru 23 year old cheats women of marrige and makes her pregnant case filed. Women has stated that if he marries her will take the case back.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am