ಬ್ರೇಕಿಂಗ್ ನ್ಯೂಸ್
09-06-24 04:34 pm HK News Desk ಕ್ರೈಂ
ಮೈಸೂರು, ಜೂ 09: ವಿಚ್ಛೇದಿತ ಮಹಿಳೆ ಜತೆ ಲವ್ವಿ ಡವ್ವಿ ನಡೆಸಿ, ಆಕೆಯನ್ನು ಗರ್ಭಿಣಿ ಮಾಡಿ ಯುವಕನೊಬ್ಬ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕವಾಗಿ ಯುವಕ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಮಹಿಳೆ ನೀಡಿದ ದೂರಿನ ಮೇರೆಗೆ ನಗರದ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯ 34 ವರ್ಷದ ಮಹಿಳೆ ಮೋಸ ಹೋದವರು. ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ನೊಂದ ಮಹಿಳೆ, ಕೊಳ್ಳೇಗಾಲದ ತೇರಂಬಳ್ಳಿ ಗ್ರಾಮದ ಹರೀಶ (25) ಎಂಬಾತನ ವಿರುದ್ಧ ದೂರು ನೀಡಿದ್ದಾರೆ.
2018ರಲ್ಲಿ ಗಂಡನಿಂದ ವಿಚ್ಛೇದನ ಪಡೆದು ಸ್ವತಂತ್ರವಾಗಿ ಬದುಕುತ್ತಿರುವ ಮಹಿಳೆ ಬಾಳಲ್ಲಿ ಮತ್ತೊಬ್ಬ ಯುವಕ ಎಂಟ್ರಿಯಾಗಿದ್ದಾನೆ. ಮದುವೆಯಾಗುತ್ತೇನೆ ಎಂದು ನಂಬಿಸಿ ಗರ್ಭಿಣಿ ಮಾಡಿ ಯುವಕ ಪರಾರಿಯಾಗಿದ್ದಾನೆ. ಮೈಸೂರಿನ ಖಾಸಗಿ ಕಂಪನಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದು, ಇಬ್ಬರೂ ಹವ್ಯಾಸಿ ಹಾಡುಗಾರರು. ಸಿಂಗಿಂಗ್ ಇವೆಂಟ್ಸ್ಗಳಲ್ಲಿ ಹಾಡು ಹೇಳಲು ಹೋಗುತ್ತಿದ್ದಾಗ ಪರಸ್ಪರ ಪರಿಚಯವಾಗಿತ್ತು. ಪರಿಚಯ ಪ್ರೇಮಕ್ಕೆ ತಿರುಗಿ ಪ್ರೀತ್ಸೆ ಎಂದು ದುಂಬಾಲು ಬಿದ್ದಿದ್ದ. ಕೊನೆಗೆ ಯುವಕನ ಒತ್ತಡಕ್ಕೆ ಮಣಿದ ಟೀಚರ್, ಆತನ ಪ್ರೀತಿಯನ್ನು ಒಪ್ಪಿದ್ದರಿಂದ ಮನೆಗೆ ಯುವಕ ಆಗಾಗ್ಗೆ ಬಂದು ಹೋಗುತ್ತಿದ್ದ.
ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ ಎಂದ ಮಹಿಳೆ ;
ಮದ್ಯ ಕುಡಿಸಿ ನನ್ನ ಬಲವಂತವಾಗಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ. ನಂತರ ಆರೋಪಿ ಹರೀಶನ ಮನೆಯವರಿಂದ ಮದುವೆಗೆ ನಿರಾಕರಣೆ ಮಾಡಲಾಗಿದೆ. ನನ್ನ ಮೇಲೆ ಅತ್ಯಾಚಾರ ಮಾಡಿ ಈಗ ಎರಡು ತಿಂಗಳಿಂದ ಕಾಣೆಯಾಗಿದ್ದಾನೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಹಾಗಾಗಿ ನಾನು ಸರಸ್ವತಿ ಪುರಂ ಪೋಲಿಸ್ ಠಾಣೆಯಲ್ಲಿ ದೂರು ಕೊಟ್ಟಿದ್ದೇನೆ. ಪೊಲೀಸರಿಂದ ನನಗೆ ನ್ಯಾಯಸಿಗುವ ಭರವಸೆ ಇದೆ. ಆತ ನನ್ನನ್ನು ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ. ಹೀಗಾಗಿ ನನಗೆ ನ್ಯಾಯ ಕೊಡಿಸಿ ಎಂದು ಪೊಲೀಸರ ಬಳಿ ನೊಂದ ಮಹಿಳೆ ಅಂಗಲಾಚಿದ್ದಾರೆ.
ಘಟನೆ ಸಂಬಂಧ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru 23 year old cheats women of marrige and makes her pregnant case filed. Women has stated that if he marries her will take the case back.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm