ಬ್ರೇಕಿಂಗ್ ನ್ಯೂಸ್
09-06-24 04:34 pm HK News Desk ಕ್ರೈಂ
ಮೈಸೂರು, ಜೂ 09: ವಿಚ್ಛೇದಿತ ಮಹಿಳೆ ಜತೆ ಲವ್ವಿ ಡವ್ವಿ ನಡೆಸಿ, ಆಕೆಯನ್ನು ಗರ್ಭಿಣಿ ಮಾಡಿ ಯುವಕನೊಬ್ಬ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕವಾಗಿ ಯುವಕ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಮಹಿಳೆ ನೀಡಿದ ದೂರಿನ ಮೇರೆಗೆ ನಗರದ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯ 34 ವರ್ಷದ ಮಹಿಳೆ ಮೋಸ ಹೋದವರು. ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ನೊಂದ ಮಹಿಳೆ, ಕೊಳ್ಳೇಗಾಲದ ತೇರಂಬಳ್ಳಿ ಗ್ರಾಮದ ಹರೀಶ (25) ಎಂಬಾತನ ವಿರುದ್ಧ ದೂರು ನೀಡಿದ್ದಾರೆ.
2018ರಲ್ಲಿ ಗಂಡನಿಂದ ವಿಚ್ಛೇದನ ಪಡೆದು ಸ್ವತಂತ್ರವಾಗಿ ಬದುಕುತ್ತಿರುವ ಮಹಿಳೆ ಬಾಳಲ್ಲಿ ಮತ್ತೊಬ್ಬ ಯುವಕ ಎಂಟ್ರಿಯಾಗಿದ್ದಾನೆ. ಮದುವೆಯಾಗುತ್ತೇನೆ ಎಂದು ನಂಬಿಸಿ ಗರ್ಭಿಣಿ ಮಾಡಿ ಯುವಕ ಪರಾರಿಯಾಗಿದ್ದಾನೆ. ಮೈಸೂರಿನ ಖಾಸಗಿ ಕಂಪನಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದು, ಇಬ್ಬರೂ ಹವ್ಯಾಸಿ ಹಾಡುಗಾರರು. ಸಿಂಗಿಂಗ್ ಇವೆಂಟ್ಸ್ಗಳಲ್ಲಿ ಹಾಡು ಹೇಳಲು ಹೋಗುತ್ತಿದ್ದಾಗ ಪರಸ್ಪರ ಪರಿಚಯವಾಗಿತ್ತು. ಪರಿಚಯ ಪ್ರೇಮಕ್ಕೆ ತಿರುಗಿ ಪ್ರೀತ್ಸೆ ಎಂದು ದುಂಬಾಲು ಬಿದ್ದಿದ್ದ. ಕೊನೆಗೆ ಯುವಕನ ಒತ್ತಡಕ್ಕೆ ಮಣಿದ ಟೀಚರ್, ಆತನ ಪ್ರೀತಿಯನ್ನು ಒಪ್ಪಿದ್ದರಿಂದ ಮನೆಗೆ ಯುವಕ ಆಗಾಗ್ಗೆ ಬಂದು ಹೋಗುತ್ತಿದ್ದ.
ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ ಎಂದ ಮಹಿಳೆ ;
ಮದ್ಯ ಕುಡಿಸಿ ನನ್ನ ಬಲವಂತವಾಗಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ. ನಂತರ ಆರೋಪಿ ಹರೀಶನ ಮನೆಯವರಿಂದ ಮದುವೆಗೆ ನಿರಾಕರಣೆ ಮಾಡಲಾಗಿದೆ. ನನ್ನ ಮೇಲೆ ಅತ್ಯಾಚಾರ ಮಾಡಿ ಈಗ ಎರಡು ತಿಂಗಳಿಂದ ಕಾಣೆಯಾಗಿದ್ದಾನೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಹಾಗಾಗಿ ನಾನು ಸರಸ್ವತಿ ಪುರಂ ಪೋಲಿಸ್ ಠಾಣೆಯಲ್ಲಿ ದೂರು ಕೊಟ್ಟಿದ್ದೇನೆ. ಪೊಲೀಸರಿಂದ ನನಗೆ ನ್ಯಾಯಸಿಗುವ ಭರವಸೆ ಇದೆ. ಆತ ನನ್ನನ್ನು ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ. ಹೀಗಾಗಿ ನನಗೆ ನ್ಯಾಯ ಕೊಡಿಸಿ ಎಂದು ಪೊಲೀಸರ ಬಳಿ ನೊಂದ ಮಹಿಳೆ ಅಂಗಲಾಚಿದ್ದಾರೆ.
ಘಟನೆ ಸಂಬಂಧ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru 23 year old cheats women of marrige and makes her pregnant case filed. Women has stated that if he marries her will take the case back.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm