ಬ್ರೇಕಿಂಗ್ ನ್ಯೂಸ್
09-06-24 11:09 pm Mangalore Correspondent ಕ್ರೈಂ
ಉಳ್ಳಾಲ, ಜೂ.9: ಮೋದಿ ಪಟ್ಟಾಭಿಷೇಕ ಹಿನ್ನಲೆಯಲ್ಲಿ ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಸಮೀಪದ ಬೋಳಿಯಾರು ಬಳಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದು, ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರಿಬ್ಬರಿಗೆ ಅನ್ಯಕೋಮಿನ ತಂಡವೊಂದು ಚೂರಿಯಿಂದ ಇರಿದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.
ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್ ಹಾಗೂ ನಂದನ್ ಎಂಬವರಿಗೆ ಚೂರಿ ಇರಿಯಲಾಗಿದ್ದು ಗಾಯಾಳುಗಳಿಗೆ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.



ಮೋದಿ ಪದಗ್ರಹಣದ ಪ್ರಯುಕ್ತ ವಿಜಯೋತ್ಸವ ಬೋಳಿಯಾರ್ ನಲ್ಲಿ ನಡೆದಿದ್ದು, ಈ ಸಂದರ್ಭದಲ್ಲಿ ಹರೀಶ್ ಅಂಚನ್, ಹರೀಶ್ ಅವರ ಭಾವ ವಿನೋದ್ ಮತ್ತು ನಂದನ್ ಎಂಬವರು ವಿಜಯೋತ್ಸವ ಮುಗಿಸಿ ಮನೆಗೆ ಮರಳುತ್ತಿದ್ದ ಸಂದರ್ಭ ಬೋಳಿಯಾರಿನ ಸಮಾಧಾನ್ ಬಾರ್ ಮುಂಭಾಗದಲ್ಲಿ ಅನ್ಯಕೋಮಿನ ತಂಡವೊಂದು ಅಡ್ಡಗಟ್ಟಿ ಹರೀಶ್ ಮತ್ತು ನಂದನ್ ಮೇಲೆ ಹಲ್ಲೆಗೈದು ಚೂರಿಯಿಂದ ಇರಿದು ಪರಾರಿಯಾಗಿದೆ ಎನ್ನಲಾಗಿದೆ.
ಹರೀಶ್ ಅಂಚನ್ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಸೇರಿದಂತೆ ಅನೇಕ ಮುಖಂಡರು ಭೇಟಿ ನೀಡಿದ್ದಾರೆ. ಬೋಳಿಯಾರ್ ನಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಸಮಾಧಾನ್ ಬಾರಿನ ಸಿಸಿಟಿವಿ ಡಿವಿಆರ್ ನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಕೊಣಾಜೆ ಠಾಣೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದು ರಾತ್ರಿಯಾದರೂ 50ಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸಲು ಆಗ್ರಹಿಸಿದ್ದಾರೆ.
Two attacked stabbed during BJP during Modi taking celebration in Mangalore at Boliyar konaje. Konaje police arrived at the spot and are investigating the case. Some miscreants attacked as they were returning back home after celebrations
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm