ಬ್ರೇಕಿಂಗ್ ನ್ಯೂಸ್
12-06-24 04:50 pm Mangalore Correspondent ಕ್ರೈಂ
ಮಂಗಳೂರು, ಜೂನ್.12: ಮುಂಬೈ ಪೊಲೀಸರ ಸೋಗಿನಲ್ಲಿ ಕರೆ ಮಾಡಿ, ಹಣ ಕೀಳುವುದನ್ನು ಕೇಳಿದ್ದೇವೆ. ಈಗ ಮತ್ತೊಂದು ಹೆಜ್ಜೆ ಮುಂದಕ್ಕೆ ಹೋಗಿರುವ ಸೈಬರ್ ಕಳ್ಳರು ಮಂಗಳೂರಿನಲ್ಲಿ ಶಾಲಾ ಮಕ್ಕಳ ಪೋಷಕರಿಗೆ ಕರೆ ಮಾಡಿ, ಬೆದರಿಕೆ ಒಡ್ಡಿ ಹಣ ಕೀಳಲು ಯತ್ನಿಸುತ್ತಿರುವುದು ಬೆಳಕಿಗೆ ಬಂದಿದೆ. ಜೂನ್ 11 ಮತ್ತು 12ರಂದು ಮಂಗಳೂರಿನಲ್ಲಿ ಹಲವಾರು ಪೋಷಕರಿಗೆ ಪೊಲೀಸರ ಸೋಗಿನಲ್ಲಿ ಕರೆ ಬಂದಿದ್ದು, ಮೋಸಕ್ಕೆ ಯತ್ನಿಸಿದ್ದಾರೆ.
ವಿದೇಶಿ ನಂಬರ್ ಗಳಿಂದ ವಾಟ್ಸಪ್ ಕರೆ ಬರುತ್ತಿದ್ದು, ಹಿಂದಿಯಲ್ಲಿ ಮಾತನಾಡಿ ತಾವು ಪೊಲೀಸರೆಂದು ಪರಿಚಯ ಹೇಳುತ್ತಿದ್ದು, ನಿಮ್ಮ ಮಕ್ಕಳು ಅರೆಸ್ಟ್ ಆಗಿದ್ದಾರೆ, ಬಿಡುಗಡೆ ಮಾಡಲು ಇಂತಿಷ್ಟು ಹಣ ಕೊಡಬೇಕೆಂದು ಕೇಳತೊಡಗಿದ್ದಾರೆ. ಶಾಲೆಗೆ ಹೋದ ಮಕ್ಕಳು ಅರೆಸ್ಟ್ ಆಗಿದ್ದಾರೆ ಎಂದು ತಿಳಿಯುತ್ತಲೇ ಕೆಲವು ಪೋಷಕರು ಗಾಬರಿ ಬಿದ್ದಿದ್ದಾರೆ. ಕೂಡಲೇ ಶಾಲೆಗೆ ಕರೆ ಮಾಡಿದಾಗ, ತಮ್ಮ ಮಕ್ಕಳು ಸೇಫ್ ಆಗಿರುವುದು ತಿಳಿದುಬಂದಿದೆ. ಶಾಲೆಯ ಅವಧಿಯಲ್ಲೇ ಈ ರೀತಿಯ ಕರೆಗಳು ಬರುತ್ತಿದ್ದು, ಇದರಿಂದ ಬಹಳಷ್ಟು ಪೋಷಕರು ಭಯಕ್ಕೆ ಬಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಂಗಳೂರು ಪೊಲೀಸರು ನಗರದ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸು ದಾಖಲು ಮಾಡಿದ್ದು, ತನಿಖೆ ಆರಂಭಿಸಿದ್ದಾರೆ. ಕರೆ ಬಂದಿದ್ದ ಸಂಖ್ಯೆಗಳನ್ನು ಪರಿಶೀಲನೆ ನಡೆಸಿದಾಗ, ಅವು ಪೋಲಂಡ್ ಮತ್ತು ಪಾಕಿಸ್ತಾನದಿಂದ ಬಂದಿದ್ದಾಗಿ ಪತ್ತೆ ಮಾಡಿದ್ದಾರೆ. ಜೂನ್ 10ರಂದು ಮಧ್ಯಾಹ್ನ ಶಿವಭಾಗ್ ಬಳಿಯ ಪೋಷಕರೊಬ್ಬರಿಗೆ ಕರೆ ಬಂದಿದ್ದು, ಅವರು ಗಾಬರಿಗೆ ಒಳಗಾಗಿದ್ದರು. ತಮ್ಮ ಕಾರಿನಲ್ಲಿ ಪೆಟ್ರೋಲ್ ಇಲ್ಲ, ಕೂಡಲೇ ಪೆಟ್ರೋಲ್ ಹಾಕುವಂತೆ ಶಿವಭಾಗ್ ಪೆಟ್ರೋಲ್ ಪಂಪ್ ಗೆ ಬಂದಿದ್ದರು. ಬಂಕ್ ಮ್ಯಾನೇಜರ್ ಮಹೇಶ್ ಅವರಲ್ಲಿ ಕರೆ ಬಂದಿರುವುದನ್ನು ಹೇಳಿ, ತನ್ನ ಮಗಳನ್ನು ಯಾರೋ ಅಪಹರಿಸಿದ್ದಾರಂತೆ, ಪೊಲೀಸರಿಂದ ಕರೆ ಬಂದಿದೆ ಎಂದು ಅಳುತ್ತಾ ಶಾಲೆಯತ್ತ ತೆರಳಿದ್ದರು. ಶಾಲೆಗೆ ತೆರಳಿ ನೋಡಿದರೆ, ಮಗಳು ಕ್ಲಾಸಿನಲ್ಲೇ ಇದ್ದಳು.
ಭಯ ಬೀಳದಿರಿ- ಕಮಿಷನರ್
ಈ ರೀತಿಯ ಕರೆಗಳು ಎರಡು ದಿನಗಳಲ್ಲಿ ಹಲವಾರು ಪೋಷಕರಿಗೆ ಬಂದಿದ್ದು, ಪೊಲೀಸರಿಗೂ ಮಾಹಿತಿ ಹೋಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಇಂತಹ ಕರೆಗಳ ಬಗ್ಗೆ ಪೋಷಕರು ಭಯಕ್ಕೆ ಒಳಗಾಗಬೇಡಿ. ಅಪರಿಚಿತರು ವಾಟ್ಸಪ್ ಕರೆ ಮಾಡಿದರೆ, ಅದನ್ನು ಸ್ವೀಕರಿಸಬೇಡಿ. ಅಂತಹ ಕರೆಗಳು ಬಂದಲ್ಲಿ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿ. ಶಾಲೆಯಲ್ಲಿ ಶಿಕ್ಷಕರು, ಸಿಬಂದಿಯೂ ಈ ಬಗ್ಗೆ ಮಕ್ಕಳ ಪೋಷಕರಿಗೆ ಜಾಗೃತಿ ಮೂಡಿಸುವಂತೆ ಕೇಳಿಕೊಂಡಿದ್ದಾರೆ.
Mangalore school Parents targeted by fake calls by online fraudters, threaten of kidnap. On Tuesday afternoon, several parents received alarming calls claiming their children were being arrested for crimes such as gang rape or kidnapping. The callers, speaking in Hindi, demanded Rs 5 lac to release the students or to clear their names.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm