ಬ್ರೇಕಿಂಗ್ ನ್ಯೂಸ್
07-08-20 12:45 pm Headline Karnataka News Network ಕ್ರೈಂ
ಬಂಟ್ವಾಳ, ಆಗಸ್ಟ್ 07: ಬೈಕ್ ಅಪಘಾತವನ್ನು ಮುಂದಿಟ್ಟು ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆಗೆ ಪ್ರತೀಕಾರಕ್ಕೆ ಯತ್ನಿಸಲಾಗಿದೆ ಎಂದು ಸ್ಥಾಪಿತ ಹಿತಾಸಕ್ತಿಗಳು ಬಿಂಬಿಸಲು ಹೊರಟ ವಿಚಾರ ಬೆಳಕಿಗೆ ಬಂದಿದೆ.
ಮಧ್ಯಾಹ್ನ 12.30ರ ಸುಮಾರಿಗೆ ಶರತ್ ಮಡಿವಾಳ ಕೊಲೆ ಆರೋಪಿ ಶರೀಫ್ ತನ್ನ ಬೈಕ್ ನಲ್ಲಿ ಮಸೀದಿಗೆ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ಬೈಕ್ ಒಂದಕ್ಕೆ ಅಪಘಾತ ವಾಗಿತ್ತು. ಈ ವೇಳೆ, ಶರೀಫ್ ಮತ್ತು ಬೈಕ್ ನವರಿಗೆ ಗಲಾಟೆ ನಡೆದು ನವೀನ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದೂ ಆಗಿತ್ತು. ಇದೇ ಘಟನೆ ಹಿನ್ನೆಲೆಯಲಿ ನವೀನ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಈಗ ಅದೇ ಚಿಕ್ಕ ಅಪಘಾತ ಘಟನೆಯನ್ನು ಕೆಲವು ಸ್ವಹಿತಾಸಕ್ತಿ ಆಧರಿತ ಸಂಘಟನೆಗಳು ಕೊಲೆ ಯತ್ನ ಎಂಬುದಾಗಿ ಬಿಂಬಿಸುತ್ತಿವೆ. ಅಲ್ಲದೆ, ಆರೋಪಿ ಶರೀಫ್ ನನ್ನು ಕೂಡ ಆಸ್ಪತ್ರೆಗೆ ದಾಖಲಿಸಿ, ಆರೋಪಿ ಮೂಲಕ ಅದೇ ರೀತಿಯ ಹೇಳಿಕೆ ಕೊಡುವಂತೆ ಮಾಡಿದ್ದಾರೆ.

ಸಜಿಪ ಮುಡ್ನೂರು ಬಳಿಯ ಆಲಾಡಿ ಎಂಬಲ್ಲಿ ಈ ಘಟನೆ ನಡೆದಿದ್ದು ಅದು ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಪ್ರದೇಶವಾಗಿದೆ. ಅಲ್ಲದೆ, ಯಾವಾಗಲೂ ಜನ ಓಡಾಡುವ ರಸ್ತೆಯಲ್ಲಿಯೇ ಈ ಅಪಘಾತ ನಡೆದಿತ್ತು. ಆದರೆ ಇದೇ ಬೈಕ್ ಅಪಘಾತವನ್ನೇ ಮುಂದಿಟ್ಟು ಕೆಲವರು ಉದ್ದೇಶಪೂರ್ವಕ ಕೋಮುಭಾವನೆ ಕೆರಳಿಸಲು ಯತ್ನಿಸುತ್ತಿದ್ದಾರೆ ಅನ್ನುವ ಮಾತು ಕೇಳಿಬರುತ್ತಿದೆ.
ಇಷ್ಟಕ್ಕೂ ಶರೀಫ್ ಕಾಲಿಗೆ ತರಚಿದ ಗಾಯ ಮಾತ್ರ ಆಗಿರುವುದು ಆತನ ಹೇಳಿಕೆ ಪೊಲೀಸರಿಗೂ ಸಂಶಯ ಹುಟ್ಟಿಸಿದೆ. ಮುಸ್ಲಿಂ ಬಾಹುಳ್ಯ ಇರುವ ಪ್ರದೇಶದಲ್ಲಿ ಶರೀಫ್ ಮೇಲೆ ಕೊಲೆಗೆ ಯತ್ನ ನಡೆದಿರಬಹುದಾ ಎನ್ನುವ ಪ್ರಶ್ನೆಯೂ ಮೂಡುತ್ತಿದೆ. ಈ ಬಗ್ಗೆ ಬಂಟ್ವಾಳ ಪೊಲೀಸರು ಕೂಡ ಎಚ್ಚತ್ತುಕೊಂಡಿದ್ದು ಸ್ಥಾಪಿತ ಹಿತಾಸಕ್ತಿಯ ಸುದ್ದಿಯ ಬೆನ್ನತ್ತಿದ್ದಾರೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm