ಬ್ರೇಕಿಂಗ್ ನ್ಯೂಸ್
07-08-20 12:45 pm Headline Karnataka News Network ಕ್ರೈಂ
ಬಂಟ್ವಾಳ, ಆಗಸ್ಟ್ 07: ಬೈಕ್ ಅಪಘಾತವನ್ನು ಮುಂದಿಟ್ಟು ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆಗೆ ಪ್ರತೀಕಾರಕ್ಕೆ ಯತ್ನಿಸಲಾಗಿದೆ ಎಂದು ಸ್ಥಾಪಿತ ಹಿತಾಸಕ್ತಿಗಳು ಬಿಂಬಿಸಲು ಹೊರಟ ವಿಚಾರ ಬೆಳಕಿಗೆ ಬಂದಿದೆ.
ಮಧ್ಯಾಹ್ನ 12.30ರ ಸುಮಾರಿಗೆ ಶರತ್ ಮಡಿವಾಳ ಕೊಲೆ ಆರೋಪಿ ಶರೀಫ್ ತನ್ನ ಬೈಕ್ ನಲ್ಲಿ ಮಸೀದಿಗೆ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ಬೈಕ್ ಒಂದಕ್ಕೆ ಅಪಘಾತ ವಾಗಿತ್ತು. ಈ ವೇಳೆ, ಶರೀಫ್ ಮತ್ತು ಬೈಕ್ ನವರಿಗೆ ಗಲಾಟೆ ನಡೆದು ನವೀನ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದೂ ಆಗಿತ್ತು. ಇದೇ ಘಟನೆ ಹಿನ್ನೆಲೆಯಲಿ ನವೀನ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಈಗ ಅದೇ ಚಿಕ್ಕ ಅಪಘಾತ ಘಟನೆಯನ್ನು ಕೆಲವು ಸ್ವಹಿತಾಸಕ್ತಿ ಆಧರಿತ ಸಂಘಟನೆಗಳು ಕೊಲೆ ಯತ್ನ ಎಂಬುದಾಗಿ ಬಿಂಬಿಸುತ್ತಿವೆ. ಅಲ್ಲದೆ, ಆರೋಪಿ ಶರೀಫ್ ನನ್ನು ಕೂಡ ಆಸ್ಪತ್ರೆಗೆ ದಾಖಲಿಸಿ, ಆರೋಪಿ ಮೂಲಕ ಅದೇ ರೀತಿಯ ಹೇಳಿಕೆ ಕೊಡುವಂತೆ ಮಾಡಿದ್ದಾರೆ.

ಸಜಿಪ ಮುಡ್ನೂರು ಬಳಿಯ ಆಲಾಡಿ ಎಂಬಲ್ಲಿ ಈ ಘಟನೆ ನಡೆದಿದ್ದು ಅದು ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಪ್ರದೇಶವಾಗಿದೆ. ಅಲ್ಲದೆ, ಯಾವಾಗಲೂ ಜನ ಓಡಾಡುವ ರಸ್ತೆಯಲ್ಲಿಯೇ ಈ ಅಪಘಾತ ನಡೆದಿತ್ತು. ಆದರೆ ಇದೇ ಬೈಕ್ ಅಪಘಾತವನ್ನೇ ಮುಂದಿಟ್ಟು ಕೆಲವರು ಉದ್ದೇಶಪೂರ್ವಕ ಕೋಮುಭಾವನೆ ಕೆರಳಿಸಲು ಯತ್ನಿಸುತ್ತಿದ್ದಾರೆ ಅನ್ನುವ ಮಾತು ಕೇಳಿಬರುತ್ತಿದೆ.
ಇಷ್ಟಕ್ಕೂ ಶರೀಫ್ ಕಾಲಿಗೆ ತರಚಿದ ಗಾಯ ಮಾತ್ರ ಆಗಿರುವುದು ಆತನ ಹೇಳಿಕೆ ಪೊಲೀಸರಿಗೂ ಸಂಶಯ ಹುಟ್ಟಿಸಿದೆ. ಮುಸ್ಲಿಂ ಬಾಹುಳ್ಯ ಇರುವ ಪ್ರದೇಶದಲ್ಲಿ ಶರೀಫ್ ಮೇಲೆ ಕೊಲೆಗೆ ಯತ್ನ ನಡೆದಿರಬಹುದಾ ಎನ್ನುವ ಪ್ರಶ್ನೆಯೂ ಮೂಡುತ್ತಿದೆ. ಈ ಬಗ್ಗೆ ಬಂಟ್ವಾಳ ಪೊಲೀಸರು ಕೂಡ ಎಚ್ಚತ್ತುಕೊಂಡಿದ್ದು ಸ್ಥಾಪಿತ ಹಿತಾಸಕ್ತಿಯ ಸುದ್ದಿಯ ಬೆನ್ನತ್ತಿದ್ದಾರೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am