ಬ್ರೇಕಿಂಗ್ ನ್ಯೂಸ್
16-06-24 03:48 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 16: ಉದ್ಯಮಿಯೊಬ್ಬರ ಮನೆಯಲ್ಲಿ ಮನೆ ಕೆಲಸ ಮಾಡುತ್ತಿದ್ದಾಕೆ ಅಲ್ಲಿಂದಲೇ ಚಿನ್ನಾಭರಣ ಕದ್ದು ಅದನ್ನು ಚಿನ್ನದ ಗಟ್ಟಿಗಳನ್ನಾಗಿಸಿ ಮನೆಯಲ್ಲಿ ಬಚ್ಚಿಟ್ಟಿದ್ದ ಮಹಿಳೆಯನ್ನು ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜೋಗುಪಾಳ್ಯ ನಿವಾಸಿ ಮಮತಾ (36) ಬಂಧಿತ ಆರೋಪಿ. 16 ಲಕ್ಷ ರೂಪಾಯಿ ಮೌಲ್ಯದ 225 ಗ್ರಾಂ ತೂಕದ 3 ಚಿನ್ನದ ಗಟ್ಟಿಗಳು ಹಾಗೂ 2 ಚಿನ್ನದ ಬಳೆಗಳನ್ನು ಈಕೆಯ ಬಳಿಯಿಂದ ಪೊಲೀಸರು ಜಪ್ತಿ ಮಾಡಿದ್ದಾರೆ.
ಜೋಗುಪಾಳ್ಯದ ಉದ್ಯಮಿ ಅಮರೇಂದ್ರ ಮನೆಯಲ್ಲಿ ಮಮತಾ ಕೆಲವು ವರ್ಷಗಳಿಂದ ಮನೆ ಕೆಲಸ ಮಾಡಿಕೊಂಡಿದ್ದಳು. 2023ರ ನ.25ರಂದು ಅಮರೇಂದ್ರ ಕುಟುಂಬದ ಸದಸ್ಯರ ಜತೆಗೆ ಹೊರಗಡೆ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಮಮತಾ ಮನೆಯ ಕಪಾಟಿನಲ್ಲಿದ್ದ ಕೀ ತೆಗೆದುಕೊಂಡು ಅದರಲ್ಲಿದ್ದ ಚಿನ್ನಾಭರಣ ಕದ್ದಿದ್ದಳು. ಕದ್ದ ಚಿನ್ನಾಭರಣಗಳನ್ನು ಕರಗಿಸಿ ಚಿನ್ನದ ಗಟ್ಟಿಗಳಾಗಿ ಮಾರ್ಪಡಿಸಿ ತನ್ನ ಮನೆಯಲ್ಲೇ ಇಟ್ಟುಕೊಂಡಿದ್ದಳು. ಮನೆಯವರು ಕಾರ್ಯಕ್ರಮ ಮುಗಿಸಿಕೊಂಡು ಮರಳಿ ತಿಂಗಳು ಕಳೆದರೂ ಕಪಾಟಿನಲ್ಲಿದ್ದ ಚಿನ್ನಾಭರಣ ಇಲ್ಲದಾಗಿರುವುದನ್ನು ಗಮನಿಸಿರಲಿಲ್ಲ. ಜೂನ್ 7ರಂದು ಅಮರೇಂದ್ರ ಕಪಾಟು ತೆರೆದು ನೋಡಿದಾಗ ಚಿನ್ನಾಭರಣ ಕಳುವಾಗಿತ್ತು.
ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಗೆ ಅಮರೇಂದ್ರ ದೂರು ನೀಡಿದ್ದರು. ಕೆಲಸದಾಕೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಪೊಲೀಸರು ಅನುಮಾನದ ಮೇರೆಗೆ ಕೆಲಸದಾಕೆ ಮಮತಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ
2023 ನವೆಂಬರ್ 25 ರಂದು ಮಮತಾ ಕಳ್ಳತನ ಮಡಿದ್ದರೂ ಅಮರೇಂದ್ರ ಅವರಿಗೆ ತಿಳಿದಿರುವುದು 6 ತಿಂಗಳ ಬಳಿಕ. ಕುಟುಂಬಸ್ಥರ ಜೊತೆಗೆ ತೆರಳಿದ್ದಾಗ ಮನೆಯಲ್ಲಿ ಮಮತಾ ಒಬ್ಬಳೇ ಇದ್ದ ಕಾರಣ ಆಕೆಯ ಮೇಲೆ ಅನುಮಾನ ಮೂಡಿತ್ತು. ಆಕೆಯ ಮನೆಯಲ್ಲಿ ಶೋಧ ನಡೆಸಿದಾಗ 3 ಚಿನ್ನದ ಗಟ್ಟಿಗಳು ಹಾಗೂ 2 ಚಿನ್ನದ ಬಳೆಗಳು ಬಚ್ಚಿಟ್ಟಿರುವುದು ಗೊತ್ತಾಗಿದೆ.
Police arrested a woman who was working as a housekeeper in the house of a businessman and stole gold jewelery from there and converted it into gold bars and hid it in the house.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm