ಬ್ರೇಕಿಂಗ್ ನ್ಯೂಸ್
18-06-24 01:47 pm Mangalore Correspondent ಕ್ರೈಂ
ಮಂಗಳೂರು, ಜೂನ್ 18: ವಾಟ್ಸಪ್ ಗ್ರೂಪಿನಲ್ಲಿ ಬಂದ ಮೆಸೇಜ್ ಆಧರಿಸಿ ವ್ಯಕ್ತಿಯೊಬ್ಬರು ಬರೋಬ್ಬರಿ 17.57 ಲಕ್ಷ ರೂಪಾಯಿ ಹಣವನ್ನು ಹೂಡಿಕೆ ಮಾಡಿ ಮೋಸ ಹೋಗಿರುವ ಘಟನೆ ನಡೆದಿದ್ದು, ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2024ರ ಮಾರ್ಚ್ 23ರಂದು ವ್ಯಕ್ತಿಯ ಮೊಬೈಲ್ ವಾಟ್ಸಪ್ ಗೆ Alice –LRC ಎಂಬ ವಾಟ್ಸಪ್ ಗ್ರೂಪ್ ಲಿಂಕ್ ಬಂದಿತ್ತು. ಅದಕ್ಕೆ ಸೇರಿಕೊಂಡ ಬಳಿಕ ಷೇರು ಮಾರುಕಟ್ಟೆಯಲ್ಲಿ ಡಿಸ್ಕೌಂಟ್ ಬೆಲೆಗ ಷೇರುಗಳನ್ನು ಮಾರಾಟ ಮಾಡುವುದಾಗಿ ಪದೇ ಪದೇ ಮೆಸೇಜ್ ಗಳು ಬಂದಿದ್ದವು. ಇದನ್ನು ನಂಬಿದ ಮಡಂತ್ಯಾರಿನ ವ್ಯಕ್ತಿ Alice –LRC ಎಂಬ ಕಂಪನಿಯಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದಾರೆ.
ಅಧಿಕ ಲಾಭ ಸಿಗುತ್ತೆ ಎಂದು ಲೆಕ್ಕ ಹಾಕಿ, ತನ್ನ ಬ್ಯಾಂಕ್ ಖಾತೆಗಳಿಂದ ಆರೋಪಿಗಳು ಸೂಚಿಸಿದಂತೆ ಹಣವನ್ನು ವರ್ಗಾಯಿಸಿದ್ದಾರೆ. ಹಂತ ಹಂತವಾಗಿ ಒಟ್ಟು 17,57,000 ರೂಪಾಯಿ ಹಣವನ್ನು ಆರೋಪಿಗಳ ಖಾತೆಗೆ ವರ್ಗಾಯಿಸಿದ್ದು, ಹೂಡಿಕೆ ಮಾಡಿದ್ದಾರೆ. ಆನಂತರ ಆರೋಪಿಗಳು ಇನ್ನೂ ಹೆಚ್ಚಿನ ಮೊತ್ತ ಹಾಕುವಂತೆ ತಿಳಿಸಿದ್ದಾರೆ. ಈ ವ್ಯಕ್ತಿ ತಾನು ಹಾಕಿದ ಹಣ ಮರಳಿಸಲು ಯತ್ನಿಸಿದಾಗ, ಸಾಧ್ಯವಾಗಲಿಲ್ಲ. ಅಷ್ಟರಲ್ಲಿ ತಾನು ಮೋಸ ಹೋಗಿದ್ದಾಗಿ ತಿಳಿದು ವ್ಯಕ್ತಿ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಾನಾ ರೀತಿ ಆಮಿಷ ತೋರಿಸಿ ಖೆಡ್ಡಾ
ವಾಟ್ಸಪ್ ಗ್ರೂಪ್ ಗಳಿಗೆ ಸೇರಿಸುವುದು, ಹಣ ಹೂಡಿಕೆ ಮಾಡುವಂತೆ ಪದೇ ಪದೇ ಒತ್ತಾಯಿಸುವುದು, ಷೇರು ಮಾರುಕಟ್ಟೆಯ ಆಮಿಷ ತೋರಿಸುವುದು, ವಾಟ್ಸಪ್ ಪರ್ಸನಲ್ ಮೆಸೇಜ್ ಮಾಡಿ ಪಾರ್ಟ್ ಟೈಮ್ ಜಾಬ್ ಆಫರ್ ನೀಡುವುದು ಇತ್ಯಾದಿ ರೀತಿಯಲ್ಲಿ ಸಾರ್ವಜನಿಕರನ್ನು ಮೋಸಗೊಳಿಸುವ ಜಾಲ ಸಕ್ರಿಯವಾಗಿದ್ದು, ಸೈಬರ್ ವಂಚಕರು ಉತ್ತರ ಭಾರತದಲ್ಲಿ ಕುಳಿತೇ ಹಣವನ್ನು ದೋಚುತ್ತಿದ್ದಾರೆ. ಅಪರಿಚಿತರು ಮೆಸೇಜ್ ಮಾಡಿದರೆ, ವಾಟ್ಸಪ್ ಗ್ರೂಪುಗಳಿಗೆ ಸೇರಿಸಿ ಹಣ ಹೂಡಿಕೆ ಮಾಡಲು ಹೇಳಿದರೆ ಅದಕ್ಕೆ ಸ್ಪಂದಿಸದೆ ಇರುವುದು ಉತ್ತಮ ಎಂದು ಸೈಬರ್ ತಜ್ಞರು ಹೇಳುತ್ತಾರೆ.
Mangalore Online WhatsApp fraud on stock market, man looses 17 lakhs rs from Madanthyar who believed in fraud stock market and invested. A case has been registered at cyber police station in Mangalore.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm