ಬ್ರೇಕಿಂಗ್ ನ್ಯೂಸ್
18-06-24 01:47 pm Mangalore Correspondent ಕ್ರೈಂ
ಮಂಗಳೂರು, ಜೂನ್ 18: ವಾಟ್ಸಪ್ ಗ್ರೂಪಿನಲ್ಲಿ ಬಂದ ಮೆಸೇಜ್ ಆಧರಿಸಿ ವ್ಯಕ್ತಿಯೊಬ್ಬರು ಬರೋಬ್ಬರಿ 17.57 ಲಕ್ಷ ರೂಪಾಯಿ ಹಣವನ್ನು ಹೂಡಿಕೆ ಮಾಡಿ ಮೋಸ ಹೋಗಿರುವ ಘಟನೆ ನಡೆದಿದ್ದು, ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2024ರ ಮಾರ್ಚ್ 23ರಂದು ವ್ಯಕ್ತಿಯ ಮೊಬೈಲ್ ವಾಟ್ಸಪ್ ಗೆ Alice –LRC ಎಂಬ ವಾಟ್ಸಪ್ ಗ್ರೂಪ್ ಲಿಂಕ್ ಬಂದಿತ್ತು. ಅದಕ್ಕೆ ಸೇರಿಕೊಂಡ ಬಳಿಕ ಷೇರು ಮಾರುಕಟ್ಟೆಯಲ್ಲಿ ಡಿಸ್ಕೌಂಟ್ ಬೆಲೆಗ ಷೇರುಗಳನ್ನು ಮಾರಾಟ ಮಾಡುವುದಾಗಿ ಪದೇ ಪದೇ ಮೆಸೇಜ್ ಗಳು ಬಂದಿದ್ದವು. ಇದನ್ನು ನಂಬಿದ ಮಡಂತ್ಯಾರಿನ ವ್ಯಕ್ತಿ Alice –LRC ಎಂಬ ಕಂಪನಿಯಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದಾರೆ.
ಅಧಿಕ ಲಾಭ ಸಿಗುತ್ತೆ ಎಂದು ಲೆಕ್ಕ ಹಾಕಿ, ತನ್ನ ಬ್ಯಾಂಕ್ ಖಾತೆಗಳಿಂದ ಆರೋಪಿಗಳು ಸೂಚಿಸಿದಂತೆ ಹಣವನ್ನು ವರ್ಗಾಯಿಸಿದ್ದಾರೆ. ಹಂತ ಹಂತವಾಗಿ ಒಟ್ಟು 17,57,000 ರೂಪಾಯಿ ಹಣವನ್ನು ಆರೋಪಿಗಳ ಖಾತೆಗೆ ವರ್ಗಾಯಿಸಿದ್ದು, ಹೂಡಿಕೆ ಮಾಡಿದ್ದಾರೆ. ಆನಂತರ ಆರೋಪಿಗಳು ಇನ್ನೂ ಹೆಚ್ಚಿನ ಮೊತ್ತ ಹಾಕುವಂತೆ ತಿಳಿಸಿದ್ದಾರೆ. ಈ ವ್ಯಕ್ತಿ ತಾನು ಹಾಕಿದ ಹಣ ಮರಳಿಸಲು ಯತ್ನಿಸಿದಾಗ, ಸಾಧ್ಯವಾಗಲಿಲ್ಲ. ಅಷ್ಟರಲ್ಲಿ ತಾನು ಮೋಸ ಹೋಗಿದ್ದಾಗಿ ತಿಳಿದು ವ್ಯಕ್ತಿ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಾನಾ ರೀತಿ ಆಮಿಷ ತೋರಿಸಿ ಖೆಡ್ಡಾ
ವಾಟ್ಸಪ್ ಗ್ರೂಪ್ ಗಳಿಗೆ ಸೇರಿಸುವುದು, ಹಣ ಹೂಡಿಕೆ ಮಾಡುವಂತೆ ಪದೇ ಪದೇ ಒತ್ತಾಯಿಸುವುದು, ಷೇರು ಮಾರುಕಟ್ಟೆಯ ಆಮಿಷ ತೋರಿಸುವುದು, ವಾಟ್ಸಪ್ ಪರ್ಸನಲ್ ಮೆಸೇಜ್ ಮಾಡಿ ಪಾರ್ಟ್ ಟೈಮ್ ಜಾಬ್ ಆಫರ್ ನೀಡುವುದು ಇತ್ಯಾದಿ ರೀತಿಯಲ್ಲಿ ಸಾರ್ವಜನಿಕರನ್ನು ಮೋಸಗೊಳಿಸುವ ಜಾಲ ಸಕ್ರಿಯವಾಗಿದ್ದು, ಸೈಬರ್ ವಂಚಕರು ಉತ್ತರ ಭಾರತದಲ್ಲಿ ಕುಳಿತೇ ಹಣವನ್ನು ದೋಚುತ್ತಿದ್ದಾರೆ. ಅಪರಿಚಿತರು ಮೆಸೇಜ್ ಮಾಡಿದರೆ, ವಾಟ್ಸಪ್ ಗ್ರೂಪುಗಳಿಗೆ ಸೇರಿಸಿ ಹಣ ಹೂಡಿಕೆ ಮಾಡಲು ಹೇಳಿದರೆ ಅದಕ್ಕೆ ಸ್ಪಂದಿಸದೆ ಇರುವುದು ಉತ್ತಮ ಎಂದು ಸೈಬರ್ ತಜ್ಞರು ಹೇಳುತ್ತಾರೆ.
Mangalore Online WhatsApp fraud on stock market, man looses 17 lakhs rs from Madanthyar who believed in fraud stock market and invested. A case has been registered at cyber police station in Mangalore.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm