ಬ್ರೇಕಿಂಗ್ ನ್ಯೂಸ್
23-06-24 01:19 pm Mangalore Correspondent ಕ್ರೈಂ
ಉಳ್ಳಾಲ, ಜೂ.23: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಬಂಡಿಕೊಟ್ಯ ಎಂಬಲ್ಲಿ ಜೂ.18ರ ಮಧ್ಯರಾತ್ರಿ ಆಗಂತುಕರ ತಂಡವೊಂದು ನಾಲ್ಕು ಮನೆಗಳ ಬಾಗಿಲು ತಟ್ಟಿದ್ದು, ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟುವಿನ ಉದ್ಯಮಿ ಪದ್ಮನಾಭ ಕೋಟ್ಯಾನ್ ಮನೆಯಲ್ಲಿ ಶುಕ್ರವಾರ ರಾತ್ರಿ ದರೋಡೆ ನಡೆಸಿದ ತಂಡವೇ ಉಳ್ಳಾಲದಲ್ಲೂ ಕೃತ್ಯ ಎಸಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಬಂಡಿಕೊಟ್ಯದ ನಾಲ್ಕು ಮನೆಗಳ ಬಾಗಿಲುಗಳನ್ನು ಆಗಂತುಕರ ತಂಡವೊಂದು ನಡುರಾತ್ರಿ ಬಡಿದಿದೆ ಎನ್ನಲಾಗಿದೆ. ಬಾಗಿಲನ್ನ ಜೋರಾಗಿ ಬಡಿಯುತ್ತಿರುವುದನ್ನ ಗ್ರಹಿಸಿ ಭಯಭೀತರಾದ ಮನೆಮಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗಸ್ತಿನಲ್ಲಿದ್ದ ಹೊಯ್ಸಳ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದು ಈ ವೇಳೆ ಆಗಂತುಕರ ತಂಡ ಪರಾರಿಯಾಗಿದೆ. ಶುಕ್ರವಾರ ಉಳಾಯಿಬೆಟ್ಟುವಿನ ಉದ್ಯಮಿ ಮನೆಯಲ್ಲಿ ನಡೆದಿರುವ ದರೋಡೆ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಉಳ್ಳಾಲ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.
ಉಳಾಯಿಬೆಟ್ಟುವಿನಲ್ಲಿ ದರೋಡೆ ನಡೆಸಿದ ತಂಡವೇ ಉಳ್ಳಾಲದಲ್ಲೂ ದರೋಡೆಗೆ ವಿಫಲ ಯತ್ನ ನಡೆಸಿತ್ತೇ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಉಳ್ಳಾಲದಲ್ಲಿ ನಡೆದಿರುವ ಘಟನೆ ಬಗ್ಗೆ ಯಾರೂ ಠಾಣೆಗೆ ದೂರು ನೀಡಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.
ಎಚ್ಚರಿಕೆ ಇರಲು ಪೊಲೀಸರ ಸೂಚನೆ
ಇದೇ ವೇಳೆ, ಉಳ್ಳಾಲದ ನಿವಾಸಿಗಳಿಗೆ ಪೊಲೀಸ್ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ಎಚ್ಚರಿಕೆಯ ಪ್ರಕಟಣೆ ಹೊರಡಿಸಿದ್ದಾರೆ. ಉಳ್ಳಾಲದಲ್ಲಿ ಕಳೆದ ಕೆಲವು ದಿನಗಳಿಂದ ಅಪರಿಚಿತ ಏಳೆಂಟು ಜನರ ತಂಡವು ಒಂಟಿ ಮನೆ ಹಾಗೂ ಬೀಗ ಜಡಿದಿರುವ ನಿವಾಸಗಳಿಗೆ ತೆರಳುತ್ತಿರುವ ಬಗ್ಗೆ ಗುಪ್ತಚರ ಮೂಲದ ಮಾಹಿತಿ ಲಭ್ಯವಾಗಿದೆ. ಠಾಣಾ ವ್ಯಾಪ್ತಿಯ ನಿವಾಸಿಗಳು ಈ ವಿಚಾರದಲ್ಲಿ ಸದಾ ಎಚ್ಚರದಿಂದ ಇರಬೇಕು. ಸಮರ್ಪಕ ದಾಖಲೆಗಳಿಲ್ಲದೆ ಯಾರಿಗೂ ಬಾಡಿಗೆ ಮನೆ ನೀಡುವಂತಿಲ್ಲ. ಮನೆಗೆ ಯಾರಾದರೂ ಬಂದರೆ ಪರಿಶೀಲಿಸಿ ಬಾಗಿಲು ತೆಗೆಯಬೇಕು. ಅಪರಿಚಿತರ ಬಗ್ಗೆ ಸಂಶಯ ಬಂದಲ್ಲಿ ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ 9480802315 ಅಥವಾ 112ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.
Mangalore Four hoses knocked by thieves at midnight of June 18th,flee after seeing police, Ulaibettu Dacoity gang suspected of moving around. Police have issued circular to be careful and not to open door unnecessarily
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm