ಬ್ರೇಕಿಂಗ್ ನ್ಯೂಸ್
24-06-24 11:33 am HK News Desk ಕ್ರೈಂ
ಶಿವಮೊಗ್ಗ, ಜೂನ್ 24: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಸಾಗರದ ಅರುಣ್ ಕುಗ್ವೆ ಎಂಬಾತನನ್ನು ಬಂಧಿಸಲಾಗಿದೆ.
ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಈತನನ್ನು ಬಂಧಿಸಿದ್ದಾರೆ, ಅರುಣ್ ಕುಗ್ವೆ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೆ ಅವರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದರು. ಆದರೆ ಕಳೆದೆರೆಡು ತಿಂಗಳ ಹಿಂದೆ ಅರುಣ್ ಪ್ರೀತಿಸಿದ ಯುವತಿಯನ್ನು ಬಿಟ್ಟು ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದನ್ನು ಅರಿತ ಮೋಸ ಹೋದ ಯುವತಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಮಧ್ಯೆ, ಇವರಿಬ್ಬರ ನಡುವೆ ರಾಜಿ ಪಂಚಾಯತಿ ನಡೆದಿತ್ತು ಎನ್ನಲಾಗಿದೆ. ಎರಡು ದಿನಗಳ ಹಿಂದೆ ನೊಂದ ಯುವತಿ ಶಿವಮೊಗ್ಗದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರನ್ನು ದಾಖಲಿಸಿಕೊಂಡ ಪೊಲೀಸರು ಅರುಣ್ ಕುಗ್ವೆಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದು, ವಿಚಾರಣೆ ವೇಳೆ ನಿಜಾಂಶ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ವಿಚಾರಣೆ ಬಳಿಕ ಆರೋಪಿ ಅರುಣ್ ಕುಗ್ವೆಗೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸದ್ಯ ಅರುಣ್ ಕುಗ್ವೆ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿದ್ದಾರೆ.
ಬಿಜೆಪಿ ಮುಖಂಡ ಅರುಣ್ ಕುಗ್ವೆ ಅವರಿಗೆ ಇದೇ ಜೂನ್ 28ಕ್ಕೆ ಮದುವೆ ಫಿಕ್ಸ್ ಆಗಿತ್ತು. ಈ ನಡುವೆ, ಯುವತಿ ನೀಡಿದ ದೂರಿನಂತೆ ಅರುಣ್ ಬಂಧನ ಆಗಿದ್ದು ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದಾನೆ.
Shivamogga District BJP Yuva Morcha Secretary Arun Kugve has been arrested by the women's police station on the charge of sexually assaulting a young woman on the pretext of marrying her. Arun Kugve is a resident of Sagar in Karnataka's Shivamogga.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm