ಬ್ರೇಕಿಂಗ್ ನ್ಯೂಸ್
26-06-24 11:10 pm Mangalore Correspondent ಕ್ರೈಂ
ಮಂಗಳೂರು, ಜೂ.26: ಉಳ್ಳಾಲ ತಾಲ್ಲೂಕು ಪಾವೂರು ಉಳಿಯದ ಕುದ್ರು ಎಂಬಲ್ಲಿ ಜೂನ್ 21 ರಂದು ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ಬಿತ್ತರವಾದ ಸುದ್ದಿಯ ಹಿನ್ನೆಲೆಯಲ್ಲಿ ಕಚೇರಿಯ ಹಿರಿಯ ಭೂ ವಿಜ್ಞಾನಿಗಳನ್ನು ಒಳಗೊಂಡ ತಾಂತ್ರಿಕ ಅಧಿಕಾರಿಗಳ ತಂಡವು ಜೂನ್ 24 ರಂದು ಸದರಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.
ಈ ಕುದ್ರುವಿನ ಪೂರ್ವಕ್ಕೆ ಸಾವಯವ ಮಣ್ಣು ಮಿಶ್ರಿತ ಮರಳು ಖಾಲಿಯಾಗಿದ್ದು, ಉಳಿದಂತೆ ಕುದ್ರು ಅಖಂಡವಾಗಿರುವುದು ಕಂಡುಬಂದಿದ್ದು, ಕುದ್ರುವಿನ ಪೂರ್ವಕ್ಕೆ ಇರುವ ಮಣ್ಣು ಕುಸಿಯಲು ಕಾರಣ ಗಿಡ ಮರಗಳ ಅಭಾವ. ಸದರಿ ಪ್ರದೇಶದಲ್ಲಿ ಅರುಗನ್ನು ಹಿಡಿದಿಟ್ಟುಕೊಳ್ಳಲು ಪೂರಕವಾದ ಬೇರು ಬಿಡುವ ಮತ್ತು ಅರುಗನ್ನು ಸಂರಕ್ಷಿಸುವ ಕಾಂಡ್ಲಾ ಗಿಡಗಳು ಇಲ್ಲದಿರುವುದು. ಬಿರುಸಾದ ನೀರಿನ ಹರಿವಿನಿಂದಾಗಿ ಮಣ್ಣು ಕುಸಿದು ಹೋಗಿರುತ್ತದೆ ಮತ್ತು ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಯಾವುದೇ ಅನಧಿಕೃತ ಸಾಮಾನ್ಯ ಮರಳು ಗಣಿಗಾರಿಕೆ ಚಟುವಟಿಕೆ ನಡೆಯುತ್ತಿರುವುದು ಕಂಡುಬಂದಿರುವುದಿಲ್ಲ.
ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ಮರಳು ತೆಗೆಯುವ ದೃಶ್ಯಗಳು ಹಳೆಯದಾಗಿದ್ದು ಮತ್ತು ಸದರಿ ದ್ವೀಪದ ಬಳಿ ಈಚೆಗೆ ಯಾವುದೇ ಮರಳು ತೆಗೆದಿಲ್ಲದೇ ಇರುವುದು ಪ್ರದೇಶದಲ್ಲಿರುವ ಒಣಗಿದ ಮತ್ತು ಸರಿದಿರುವ ಸಾವಯವ ಮಣ್ಣು ಮಿಶ್ರಿತ ಮಣ್ಣಿನ ಮೇಲೆ ಬೆಳೆದಿರುವ ಮಜ್ಜಿಗೆ ಹುಲ್ಲಿನಿಂದ ಖಾತ್ರಿಯಾಗಿರುತ್ತದೆ. ಕಂದಾಯ ಇಲಾಖೆಯ ದಾಖಲೆಯಂತೆ ಸದರಿ ಕುದ್ರುವಿನ ಒಟ್ಟು ವಿಸ್ತೀರ್ಣವು 30.49 ಎಕರೆ ಆಗಿದ್ದು, ಭೌತಿಕವಾಗಿ ಪರಿಶೀಲಿಸಿದಾಗ ಸದರಿ ಕುದ್ರುವಿನ ವಿಸ್ತೀರ್ಣವು 98.02 ಎಕರೆ ಇದ್ದು, ಕುದ್ರುವಿನ ಯಾವುದೇ ಭಾಗವು ನದಿಯಲ್ಲಿ ಮುಳುಗಡೆಗೊಂಡಿರುವುದಿಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The Mines and Geology Department on Wednesday denied charges of illegal sand extraction in and around Pavoor-Uliya Kudru in Netravathi river and the consequent degeneration of the river island.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm