ಬ್ರೇಕಿಂಗ್ ನ್ಯೂಸ್
26-06-24 11:10 pm Mangalore Correspondent ಕ್ರೈಂ
ಮಂಗಳೂರು, ಜೂ.26: ಉಳ್ಳಾಲ ತಾಲ್ಲೂಕು ಪಾವೂರು ಉಳಿಯದ ಕುದ್ರು ಎಂಬಲ್ಲಿ ಜೂನ್ 21 ರಂದು ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ಬಿತ್ತರವಾದ ಸುದ್ದಿಯ ಹಿನ್ನೆಲೆಯಲ್ಲಿ ಕಚೇರಿಯ ಹಿರಿಯ ಭೂ ವಿಜ್ಞಾನಿಗಳನ್ನು ಒಳಗೊಂಡ ತಾಂತ್ರಿಕ ಅಧಿಕಾರಿಗಳ ತಂಡವು ಜೂನ್ 24 ರಂದು ಸದರಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.
ಈ ಕುದ್ರುವಿನ ಪೂರ್ವಕ್ಕೆ ಸಾವಯವ ಮಣ್ಣು ಮಿಶ್ರಿತ ಮರಳು ಖಾಲಿಯಾಗಿದ್ದು, ಉಳಿದಂತೆ ಕುದ್ರು ಅಖಂಡವಾಗಿರುವುದು ಕಂಡುಬಂದಿದ್ದು, ಕುದ್ರುವಿನ ಪೂರ್ವಕ್ಕೆ ಇರುವ ಮಣ್ಣು ಕುಸಿಯಲು ಕಾರಣ ಗಿಡ ಮರಗಳ ಅಭಾವ. ಸದರಿ ಪ್ರದೇಶದಲ್ಲಿ ಅರುಗನ್ನು ಹಿಡಿದಿಟ್ಟುಕೊಳ್ಳಲು ಪೂರಕವಾದ ಬೇರು ಬಿಡುವ ಮತ್ತು ಅರುಗನ್ನು ಸಂರಕ್ಷಿಸುವ ಕಾಂಡ್ಲಾ ಗಿಡಗಳು ಇಲ್ಲದಿರುವುದು. ಬಿರುಸಾದ ನೀರಿನ ಹರಿವಿನಿಂದಾಗಿ ಮಣ್ಣು ಕುಸಿದು ಹೋಗಿರುತ್ತದೆ ಮತ್ತು ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಯಾವುದೇ ಅನಧಿಕೃತ ಸಾಮಾನ್ಯ ಮರಳು ಗಣಿಗಾರಿಕೆ ಚಟುವಟಿಕೆ ನಡೆಯುತ್ತಿರುವುದು ಕಂಡುಬಂದಿರುವುದಿಲ್ಲ.


ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ಮರಳು ತೆಗೆಯುವ ದೃಶ್ಯಗಳು ಹಳೆಯದಾಗಿದ್ದು ಮತ್ತು ಸದರಿ ದ್ವೀಪದ ಬಳಿ ಈಚೆಗೆ ಯಾವುದೇ ಮರಳು ತೆಗೆದಿಲ್ಲದೇ ಇರುವುದು ಪ್ರದೇಶದಲ್ಲಿರುವ ಒಣಗಿದ ಮತ್ತು ಸರಿದಿರುವ ಸಾವಯವ ಮಣ್ಣು ಮಿಶ್ರಿತ ಮಣ್ಣಿನ ಮೇಲೆ ಬೆಳೆದಿರುವ ಮಜ್ಜಿಗೆ ಹುಲ್ಲಿನಿಂದ ಖಾತ್ರಿಯಾಗಿರುತ್ತದೆ. ಕಂದಾಯ ಇಲಾಖೆಯ ದಾಖಲೆಯಂತೆ ಸದರಿ ಕುದ್ರುವಿನ ಒಟ್ಟು ವಿಸ್ತೀರ್ಣವು 30.49 ಎಕರೆ ಆಗಿದ್ದು, ಭೌತಿಕವಾಗಿ ಪರಿಶೀಲಿಸಿದಾಗ ಸದರಿ ಕುದ್ರುವಿನ ವಿಸ್ತೀರ್ಣವು 98.02 ಎಕರೆ ಇದ್ದು, ಕುದ್ರುವಿನ ಯಾವುದೇ ಭಾಗವು ನದಿಯಲ್ಲಿ ಮುಳುಗಡೆಗೊಂಡಿರುವುದಿಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The Mines and Geology Department on Wednesday denied charges of illegal sand extraction in and around Pavoor-Uliya Kudru in Netravathi river and the consequent degeneration of the river island.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm