ಬ್ರೇಕಿಂಗ್ ನ್ಯೂಸ್
03-07-24 08:04 pm Mangalore Correspondent ಕ್ರೈಂ
ಮಂಗಳೂರು, ಜುಲೈ 2: ಫೇಸ್ಬುಕ್ ಮೂಲಕ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ಬಿಟ್ ಕಾಯಿನ್ ಮೇಲೆ ಹೂಡಿಕೆ ಮಾಡಲು ನೀಡಿದ ಸಲಹೆಯಂತೆ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿ, ಮೋಸ ಹೋಗಿರುವ ಘಟನೆ ನಡೆದಿದ್ದು, ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೇಸ್ಬುಕ್ ನಲ್ಲಿ ಪರಿಚಯವಾದ ವ್ಯಕ್ತಿ ವಿಯಕಾ ವೆಬ್ ಸೈಟ್ ನಲ್ಲಿ ಸೇರುವಂತೆ ದೂರುದಾರರಿಗೆ ಸೂಚಿಸಿದ್ದು, ಅದರಂತೆ 75 ಜನರಿದ್ದ ಗ್ರೂಪ್ ನಲ್ಲಿ ಒಟ್ಟು 3 ಲಕ್ಷ ರೂ. ಹೂಡಿಕೆ ಮಾಡಿದ್ದರು. ಇದರಿಂದ ಒಮ್ಮೆಗೆ 20 ಲಕ್ಷ ರೂ. ವರೆಗೆ ಲಾಭ ಆಗಿತ್ತು. ಮತ್ತೆ ಅದೇ ವ್ಯಕ್ತಿಯ ಶಿಫಾರಸಿನಂತೆ ವ್ಯವಹಾರ ಮಾಡಿ, ಗಳಿಸಿದ ಹಣವನ್ನೆಲ್ಲ ಕಳಕೊಂಡಿದ್ದರು. ಈ ಬಗ್ಗೆ ಆತನಲ್ಲಿ ಕೇಳಿದಾಗ, ಎಕ್ಸ್ ಚೇಂಜ್ ನಲ್ಲಿ ಹೊಸ ಕಾಯಿನ್ ಬಿಡುಗಡೆ ಆಗುತ್ತಿದ್ದು, ಅದಕ್ಕೆ ಹೂಡಿಕೆ ಮಾಡಿದರೆ ತುಂಬ ಲಾಭ ಬರುತ್ತದೆ ಎಂದು ನಂಬಿಸಿದ್ದ.
ಕಳಕೊಂಡಿರುವ ಹಣವನ್ನು ಮತ್ತೆ ಗಳಿಸುವ ಉದ್ದೇಶದಿಂದ ಚಿನ್ನವನ್ನು ಬ್ಯಾಂಕಿನಲ್ಲಿ ಅಡವಿಟ್ಟು ಸಾಲ ಪಡೆದು ಮತ್ತೆ ಹೂಡಿಕೆ ಮಾಡಲು ಆರಂಭಿಸಿದ್ದರು. ವಿಯಕಾ ಕಸ್ಟಮರ್ ಕೇರ್ ಎಂದು ಪರಿಚಯಿಸಿಕೊಂಡಿದ್ದ ರವಿಕುಮಾರ್ ಎಂಬಾತನ ಸಲಹೆಯಂತೆ ತನ್ನ ಖಾತೆಯಿಂದ 16.29 ಲಕ್ಷ ರೂಪಾಯಿ ಹಣವನ್ನು ಹೂಡಿಕೆ ಮಾಡಿದ್ದರು. ಇದರಲ್ಲಿ ಮತ್ತೆ ಲಾಭ ಬಂದಿರುವುದನ್ನು ತೋರಿಸಿದ್ದು, ಆ ಹಣವನ್ನು ಹಿಂತಿರುಗಿ ಪಡೆಯಲು ಹೋದಾಗ ಜೂನ್ 23ರ ವರೆಗೆ ಡಿಪಾಸಿಟ್ ಮೊಬಿಲೈಜೇಶನ್ ಅವಧಿ ಆಗಿರುವುದರಿಂದ ತೆಗೆಯಲು ಆಗುವುದಿಲ್ಲ ಎಂದು ತೋರಿಸಿತ್ತು.
ಜೂನ್ 24ರಂದು ಮತ್ತೆ ಹಣ ತೆಗೆಯಲು ಹೋದಾಗ, ಭಾರತದಲ್ಲಿ ಕಪ್ಪು ಹಣದ ಹಾವಳಿ ಇದೆ. ನಿನ್ನಲ್ಲಿ ಇರುವ ಎಲ್ಲ ಕಾಯಿನ್ ಗಳನ್ನು ಮಾರಿ ಬಿಡುವಂತೆ ಸಲಹೆ ನೀಡಿದ್ದಾನೆ. ಆನಂತರ, ವೆರಿಫಿಕೇಶನ್ ಪ್ರೊಸೆಸ್ ಆಗಬೇಕು. ಅದಕ್ಕೆ ಶೇ. 10ರಷ್ಟು ದುಡ್ಡು ಕಟ್ಟಬೇಕು ಎಂದು ತಿಳಿಸಿದ್ದಾನೆ. ದೂರುದಾರರು ನನ್ನಲ್ಲಿ ಅಷ್ಟು ಮೊತ್ತ ಇಲ್ಲವೆಂದು ಹೇಳಿದಾಗ, ಹಾಗಾದರೆ ನಿನ್ನ ಎಲ್ಲ ಹೂಡಿಕೆ ಮೊತ್ತವನ್ನು ಮುಟ್ಟುಗೋಲು ಹಾಕುತ್ತಾರೆ ಎಂದು ಹೇಳಿ ಹೆದರಿಸಿದ್ದಾನೆ. ಹೂಡಿಕೆ ಮಾಡಿದ ಹಣವನ್ನು ಮರಳಿ ನೀಡದೆ ಮೋಸ ಮಾಡಿದ್ದಾರೆ ಎಂದು ವ್ಯಕ್ತಿಯೊಬ್ಬರು ದೂರಿನಲ್ಲಿ ತಿಳಿಸಿದ್ದಾರೆ.
Bitcoin scam online fraud, Mangalore man looses 16 lakh rupees online. A case has been registered at the cyber police station. He was introduced to a friend via Facebook and later was suggested to join a group and later has lost 16 lakhs online.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am