ಬ್ರೇಕಿಂಗ್ ನ್ಯೂಸ್
07-07-24 07:54 pm HK News Desk ಕ್ರೈಂ
ಶಿವಮೊಗ್ಗ, ಜುಲೈ.07: ಕಾಣೆಯಾಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಯುವತಿ ಈಗ ಶವವಾಗಿ ಪತ್ತೆಯಾಗಿದ್ದಾಳೆ. ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿಯಾಗಿದ್ದ ಪೂಜಾ.ಎ.ಕೆ (24) ಕೊಲೆಯಾದ ಮೃತ ದುರ್ದೈವಿ.
ಕಳೆದ ಜೂ.30ರಂದು ಮನೆಯಿಂದ ಕೆಲಸಕ್ಕೆ ಹೋಗಿದ್ದ ಪೂಜಾ ಏಕಾಏಕಿ ಕಾಣೆಯಾಗಿದ್ದಳು. ಮನೆಗೆ ವಾಪಸ್ ಬರದ ಹಿನ್ನೆಲೆಯಲ್ಲಿ ಪೂಜಾ ಪೋಷಕರು ಆತಂಕಗೊಂಡು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಬಳಿಕ ಆಗುಂಬೆ ಪೊಲೀಸ್ ಠಾಣೆಯಲ್ಲಿ ತಂದೆ ಕುಶಾಲ್ ಮಿಸ್ಸಿಂಗ್ ಕಂಪ್ಲೇಟ್ ಕೊಟ್ಟಿದ್ದರು.
ಆಗುಂಬೆ ಪೊಲೀಸ್ ಠಾಣೆಯ ಪಿಎಸ್ಐ ರಂಗನಾಥ್ ಅಂತರಗಟ್ಟಿ ನೇತೃತ್ವದಲ್ಲಿ ತಂಡ ರಚನೆ ಮಾಡಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರಿಗೆ ಆಗುಂಬೆಯ ಹೊಂಡಾದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿತ್ತು.
ಬಳಿಕ ಆಕೆಯ ಫೋನ್ ಕಾಲ್ ಲಿಸ್ಟ್ ತೆಗೆದು ಮಿಸ್ಸಿಂಗ್ ಆದ ಕೊನೆ ದಿನ ಯಾರೆಲ್ಲ ಕರೆ ಮಾಡಿದ್ದರು ಅವರನ್ನೆಲ್ಲ ಪೊಲೀಸರು ವಿಚಾರಣೆ ನಡೆಸಿದ್ದರು.
ಈ ವೇಳೆ ಹಲವು ವರ್ಷಗಳಿಂದ ಸ್ನೇಹಿತನಾಗಿದ್ದ ಮಣಿಕಂಠ ಎಂಬಾತನಿಂದಲೇ ಪೂಜಾ ಕೂಲೆಯಾಗಿದ್ದಳು. ಪೊಲೀಸರು ತಮ್ಮದೇ ಸ್ಟೈಲ್ನಲ್ಲಿ ವಿಚಾರನೆ ನಡೆಸಿದಾಗ ಪೂಜಾಳನ್ನು ಕೊಂದಿದ್ದಾಗಿ ಮಣಿಕಂಠ ಒಪ್ಪಿಕೊಂಡಿದ್ದಾನೆ. ಹಣಕಾಸಿ ವಿಚಾರಕ್ಕೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ.
ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಪೊಲೀಸರು ಆರೋಪಿ ಮಣಿಯನ್ನು ಶವ ಎಸೆದ ಸ್ಥಳಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದಾರೆ. ಶವವನ್ನು ವಶಕ್ಕೆ ಪಡೆದುಕೊಂಡು ಮರಣೋತ್ತರ ಪರೀಕ್ಷೆಗಾಗಿ ಕಳಿಸಿದ್ದಾರೆ.
ಸದ್ಯ ಆಗುಂಬೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
A woman, who had gone missing for the last four days, was found dead near Agumbe Ghat in Tirthahalli taluk on Saturday. The police have arrested a person, a distant relative of the woman, in connection with the murder. Pooja, 24, of Hosamane in Naluru-Kulige panchayat in Tirthahalli taluk had gone missing four days ago. Her parents filed a complaint with the police. During the investigation, the police interrogated a few of her relatives and finally found that she was allegedly murdered by her distant relative, Manikantha. The police arrested the accused
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm