ಬ್ರೇಕಿಂಗ್ ನ್ಯೂಸ್
12-07-24 08:51 pm HK News Desk ಕ್ರೈಂ
ಹೈದರಾಬಾದ್, ಜುಲೈ.12: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮತ್ತು ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಆಡಳಿತ ನಡೆಸುತ್ತಿರುವ ತೆಲುಗು ದೇಶಂ ಪಾರ್ಟಿ ಶಾಸಕ ರಘುರಾಮ್ ಕೃಷ್ಣರಾಜು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಗುಂಟೂರು ಜಿಲ್ಲೆಯ ನಗರಪಾಲಂ ಠಾಣೆಗೆ ಹಳೆಯ ವಿಚಾರದಲ್ಲಿ ಶಾಸಕ ರಘುರಾಮ್ ಕೃಷ್ಣರಾಜು ದೂರು ನೀಡಿದ್ದಾರೆ. 2021 ಮೇ 14ರಂದು ತನ್ನನ್ನು ಸಿಐಡಿ ಅಧಿಕಾರಿಗಳು ಹೈದರಾಬಾದ್ ನಲ್ಲಿ ಬಂಧಿಸಿ ಕೋರ್ಟಿಗೆ ಹಾಜರುಪಡಿಸದೆ ಗುಂಟೂರು ಜಿಲ್ಲೆಗೆ ಒಯ್ದಿದ್ದರು. ಅಲ್ಲದೆ, ಸಿಎಂ ಜಗನ್ ರೆಡ್ಡಿ ಮುಂದೆಯೇ ತನ್ನ ಮೇಲೆ ಇಬ್ಬರು ಅಧಿಕಾರಿಗಳು ಹಲ್ಲೆ ನಡೆಸಿದ್ದರು. ಹಲ್ಲೆಗೆ ಆಗಿನ ಸಿಎಂ ಜಗನ್ ರೆಡ್ಡಿ ಪಿತೂರಿಯೇ ಕಾರಣವಾಗಿತ್ತು ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.
ನನ್ನ ಮೇಲೆ ಸಿಐಡಿ ಅಧಿಕಾರಿಗಳು ಸುಳ್ಳು ದೂರು ದಾಖಲಿಸಿದ್ದರು. ನನ್ನನ್ನು ಬಲವಂತವಾಗಿ ಪೊಲೀಸ್ ಜೀಪಿನಲ್ಲಿ ತುಂಬಿಸಿ ಹೈದರಾಬಾದಿನಿಂದ ಗುಂಟೂರು ಜಿಲ್ಲೆಗೆ ಒಯ್ದಿದ್ದರು. ಕಾನೂನಿಗೆ ವಿರುದ್ಧವಾಗಿ ನನ್ನ ಮೇಲೆ ದೈಹಿಕ ಹಲ್ಲೆ ನಡೆಸಿದ್ದರು. ಐಪಿಎಸ್ ಅಧಿಕಾರಿಗಳಾದ ಪಿವಿ ಸುನಿಲ್ ಕುಮಾರ್ ಮತ್ತು ಪಿಆಸ್ ಆರ್ ಸೀತಾರಾಮಾಂಜನೇಯಲು ನನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ. ಈಗ ನಿವೃತ್ತರಾಗಿರುವ ಪೊಲೀಸ್ ಅಧಿಕಾರಿ ವಿಜಯ್ ಪೌಲ್ ಮತ್ತು ಗುಂಟೂರು ಜಿಲ್ಲೆಯ ಸರಕಾರಿ ಜಿಲ್ಲಾಸ್ಪತ್ರೆಯ ಮೆಡಿಕಲ್ ಸುಪರಿಡೆಂಟ್ ಆಗಿರುವ ಜಿ. ಪ್ರಭಾವತ್ ಮೇಲೂ ಆರೋಪ ಮಾಡಿದ್ದಾರೆ.
ಒಂದು ತಿಂಗಳ ಹಿಂದೆಯೇ ಶಾಸಕ ರಘುರಾಮ್ ರಾಜು ಅವರು ಮೈಲ್ ಮೂಲಕ ದೂರು ನೀಡಿದ್ದರು. ಕಾನೂನು ಸಲಹೆ ಪಡೆದು ಪ್ರಕರಣ ದಾಖಲಿಸಿದ್ದಾಗಿ ಠಾಣಾಧಿಕಾರಿ ಪಿಟಿಐಗೆ ತಿಳಿಸಿದ್ದಾರೆ. ಶಾಸಕ ರಘುರಾಮ್ ರಾಜು ತನ್ನ ಮೇಲೆ ಕಸ್ಟಡಿ ಹಲ್ಲೆಯೂ ನಡೆದಿತ್ತು. ಸಿಎಂ ಜಗನ್ ರೆಡ್ಡಿ ಬಗ್ಗೆ ಟೀಕೆ ಮಾಡಿದ್ದಕ್ಕಾಗಿ ನನ್ನನ್ನು ಟಾರ್ಗೆಟ್ ಮಾಡಲಾಗಿತ್ತು. ನನಗೆ ಹಾರ್ಟ್ ಸರ್ಜರಿ ಆಗಿದೆಯೆಂದು ಹೇಳಿದರೂ ಅಧಿಕಾರಿಗಳು ಕೇಳಿರಲಿಲ್ಲ. ಮೆಡಿಕಲ್ ಚೆಕಪ್ ಮಾಡದೆಯೇ ನನ್ನನ್ನು ಬಂಧಿಸಿಟ್ಟು ಕಿರುಕುಳ ನೀಡಿದ್ದರು. ಗುಂಟೂರು ಜಿಲ್ಲೆಯ ಸಿಐಡಿ ಕಚೇರಿಯಲ್ಲಿ ರಾತ್ರಿ 9.30ರ ನಂತರ ಕೂಡಿಹಾಕಿದ್ದರು ಎಂದು ದೂರಿನಲ್ಲಿ ಶಾಸಕ ಆರೋಪ ಮಾಡಿದ್ದಾರೆ.
ಪೊಲೀಸರ ಹಲ್ಲೆಯಿಂದಾಗಿ ಗುಂಟೂರು ಜಿಲ್ಲಾಧಿಕಾರಿಯ ಸೂಚನೆಯಂತೆ ನನ್ನನ್ನು ಸರಕಾರಿ ಜಿಲ್ಲಾಸ್ಪತ್ರೆಗೆ ಹಾಕಲಾಗಿತ್ತು. ಆದರೆ, ಅಲ್ಲಿನ ವೈದ್ಯೆ ಪ್ರಭಾವತಿ ಅವರು ಪೊಲೀಸ್ ಅಧಿಕಾರಿ ಸುನಿಲ್ ಕುಮಾರ್ ಒತ್ತಡದಿಂದಾಗಿ ನನ್ನ ಮೇಲೆ ಹಲ್ಲೆ ಆಗಿಲ್ಲ ಎಂದು ರಿಪೋರ್ಟ್ ನೀಡಿದ್ದರು. ಆನಂತರ, ಸಿಕಂದರಾಬಾದ್ ಆರ್ಮಿ ಹಾಸ್ಪಿಟಲ್ ಗೆ ನನ್ನನ್ನು ಸ್ಥಳಾಂತರ ಮಾಡಲಾಗಿತ್ತು. ಅಲ್ಲಿಂದ ಸುಪ್ರೀಂ ಕೋರ್ಟ್ ಆದೇಶದಂತೆ ಜಾಮೀನು ನೀಡಲಾಗಿತ್ತು ಎಂದು ಶಾಸಕ ರಘುರಾಮ್ ತಿಳಿಸಿದ್ದಾರೆ.
An ‘attempt to murder’ case was filed against former Andhra Pradesh Chief Minister Jagan Mohan Reddy and two India Police Service (IPS) officers by K Raghurama Krishna Raju, an MLA of the ruling Telugu Desam Party (TDP).
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm