ಬ್ರೇಕಿಂಗ್ ನ್ಯೂಸ್
13-07-24 01:05 pm Mangalore Correspondent ಕ್ರೈಂ
ಬೆಂಗಳೂರು, ಜುಲೈ 13: ವಿವಾಹಿತೆ ಜತೆಗೆ ಅನೈತಿಕ ಸಂಬಂಧ ಹೊಂದಿದ್ದ ದುಷ್ಟನೊಬ್ಬ ತನ್ನ ಖಾಸಗಿ ಕ್ಷಣಗಳಿಗೆ ಮಗು (3) ಅಡ್ಡಿಯಾಗಿದ್ದಕ್ಕೆ ಕೊಂದು ಹಾಕಿದ್ದಾನೆ. ಮಗುವನ್ನು ಹತ್ಯೆ ಮಾಡಿದ್ದಕ್ಕೇ ಪ್ರಿಯಕರನ ವಿರುದ್ಧವೇ ಪ್ರಿಯತಮೆ ದೂರು ನೀಡಿದ್ದಾಳೆ. ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮೂರು ವರ್ಷದ ಅಶ್ವಿನ್ ಕೊಲೆಯಾದ ದುರ್ದೈವಿ ಮಗು. ಅಶ್ವಿನ್ ತಾಯಿ ರಮ್ಯಾ ಎಂಬಾಕೆ ನೀಡಿದ ದೂರಿನ ಮೇರೆಗೆ ಪ್ರಿಯಕರ ಮೈಕೆಲ್ ರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅವಿವಾಹಿತನಾಗಿದ್ದ ಮೈಕೆಲ್ ರಾಜ್ ಬೊಮ್ಮನಹಳ್ಳಿಯ ವಿರಾಟ್ ನಗರದ ನಿವಾಸಿ ಆಗಿದ್ದು, ಗ್ಯಾರೇಜ್ ಅಂಗಡಿಯನ್ನು ಇಟ್ಟುಕೊಂಡಿದ್ದ.
ಇದೇ ಏರಿಯಾ ಸಮೀಪದಲ್ಲಿ ರಮ್ಯ ಬಾಡಿಗೆ ಮನೆಯೊಂದರಲ್ಲಿ ವಾಸಿವಿದ್ದಳು. ರಮ್ಯಾ ಆರು ವರ್ಷಗಳ ಹಿಂದೆ ಪ್ರೇಮ ವಿವಾಹವಾಗಿದ್ದಳು. ಆದರೆ ಒಂದು ವರ್ಷದ ಹಿಂದೆ ದಂಪತಿ ಮಧ್ಯೆ ವೈಮನಸ್ಸು ಉಂಟಾಗಿತ್ತು. ಹೀಗಾಗಿ ಪತಿಯಿಂದ ರಮ್ಯ ದೂರವಾಗಿದ್ದಳು. ಈ ವೇಳೆ ಆರೋಪಿ ಮೈಕೆಲ್ ರಾಜ್ನ ಪರಿಚಯವಾಗಿತ್ತು.
ಪರಿಚಯವು ಕ್ರಮೇಣ ಇಬ್ಬರ ಸಂಬಂಧ ಆತ್ಮೀಯತೆಗೆ ತಿರುಗಿತ್ತು. ಸ್ನೇಹವು ಪ್ರೀತಿಗೆ ತಿರುಗಿತ್ತು. ಕಳೆದ ಆರೇಳು ತಿಂಗಳಿಂದ ರಮ್ಯಾಳ ಮನೆಗೆ ಮೈಕಲ್ ಬಂದು ಹೋಗುತ್ತಿದ್ದ. ಕಳೆದ ಜುಲೈ 6ರಂದು ಮನೆಗೆ ಬಂದಾಗ ಅಶ್ವಿನ್ನನ್ನು ಕಂಡು ಕೋಪಗೊಂಡಿದ್ದ. ತಮ್ಮಿಬ್ಬರ ಸಂಬಂಧಕ್ಕೆ ಮಗು ಅಡ್ಡಿಯಾಗಲಿದೆ ಎಂದು ಭಾವಿಸಿ ಕೆನ್ನೆಗೆ ಹೊಡೆದು, ನಂತರ ಬಾತ್ ರೂಮಿನ ಗೋಡೆಗೆ ತಲೆಯನ್ನು ಗುದ್ದಿ ಊತ ಬರುವಂತೆ ಮಾಡಿದ್ದ.
ಇದನ್ನು ರಮ್ಯಳಿಗೆ ಹೇಳದೆ ಮಾರೆ ಮಾಚಿ ಕಾಲ್ಕಿತ್ತಿದ್ದ. ಇತ್ತ ಮಗುವಿನ ಮೇಲೆ ಹಲ್ಲೆ ಆಗಿರುವ ವಿಷಯ ರಮ್ಯಾಗೆ ತಿಳಿದಿರಲಿಲ್ಲ. ಅದೇ ದಿನ ರಾತ್ರಿ ಮಗುವಿನ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮಗು ಅಶ್ವಿನ್ ಮೃತಪಟ್ಟಿದೆ.
The Bengalore police arrested a 30-year-old man after he pushed his girlfriend’s three-year-old child, which allegedly led to a blood clot, causing his death. The baby's 27-year-old mother was away during the incident.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm