ಬ್ರೇಕಿಂಗ್ ನ್ಯೂಸ್
14-07-24 04:29 pm Mangalore Correspondent ಕ್ರೈಂ
ಮಂಗಳೂರು, ಜುಲೈ 14: ಬುರ್ಖಾ ಧರಿಸಿ ಬಜ್ಪೆಯ ಫೈನಾನ್ಸ್ ಕಚೇರಿಗೆ ನುಗ್ಗಿದ್ದ ಮೂವರಿದ್ದ ತಂಡ ಮಹಿಳೆ ಮೇಲೆ ಆ್ಯಸಿಡ್ ಹಾಕಿ ನಗದು ದರೋಡೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಬಜ್ಪೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಜಪೆ ಶಾಂತಿಗುಡ್ಡೆಯ ಪ್ರೀತೇಶ್ ಯಾನೆ ಪ್ರೀತು (31), ಸುರತ್ಕಲ್ ಕೋಡಿಕೆರೆಯ ಧನರಾಜ್ ಯಾನೆ ಧನು (30) ಹಾಗೂ ಬಾಳ ಕುಂಬಳಕೆರೆಯ ಕುಸುಮಾಕರ ಯಾನೆ ಅಣ್ಣು (37) ಬಂಧಿತರು.
ಮಂಗಳೂರು ತಾಲೂಕು ಬಜಪೆ ಗ್ರಾಮದ ನಿವಾಸಿ ಲೆಸ್ಲಿ ಡಿಕುನ್ಹಾ ಅವರ ಬಜಪೆ ಪೇಟೆಯಲ್ಲಿರುವ ಫೈನಾನ್ಸ್ ಕಚೇರಿಗೆ ಜು.4ರಂದು ಸಂಜೆ ಬುರ್ಖಾ ಧರಿಸಿ ಬಂದಿದ್ದ ಮೂವರು ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ್ದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಬ್ಬರು ಕಚೇರಿ ಒಳಗಡೆ ಬಂದು ಆ್ಯಸಿಡ್ ಬಾಟಲಿ ತೋರಿಸಿ ಮಹಿಳಾ ಸಿಬಂದಿಯನ್ನು ಬೆದರಿಸಿದ್ದರು. ಈ ವೇಳೆ, ಮಹಿಳೆ ಕಿರುಚಾಡಿದ್ದು ಕೂಡಲೇ ಹೊರಗೆ ಸ್ಟಾರ್ಟ್ ನಲ್ಲೇ ನಿಲ್ಲಿಸಿದ್ದ ಇನ್ನೊಬ್ಬ ವ್ಯಕ್ತಿಯ ಸ್ಕೂಟರಿನಲ್ಲಿ ಮೂವರು ಪರಾರಿಯಾಗಿದ್ದರು. ಇವರು ಅಲ್ಲಿಂದ ತೆರಳುವುದು ಸಿಸಿಟಿವಿಯಲ್ಲಿ ದಾಖಲಾಗಿತ್ತು.
ಪ್ರೀತೇಶ್ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಬಜಪೆ ಪೊಲೀಸ್ ಠಾಣೆಯಲ್ಲಿ ಒಂದು ಕಳವು ಪ್ರಕರಣ, ಧನರಾಜ್ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಎರಡು ಹಾಗೂ ಮೂಡುಬಿದರೆ ಠಾಣೆಯಲ್ಲಿ 1 ಕೊಲೆಯತ್ನ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಪ್ರಕರಣ, ಕುಸುಮಾಕರನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 2 ಹಾಗೂ ಬಜಪೆ ಪೊಲೀಸ್ ಠಾಣೆಯಲ್ಲಿ 1 ಕಳವು ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿಗಳು ಕಳ್ಳತನದಿಂದ ಗಳಿಸಿದ್ದ ಸುಮಾರು 15 ಲಕ್ಷ ರೂ. ಮೌಲ್ಯದ ಇನೋವಾ ಕಾರು, ಸ್ವಿಫ್ಟ್ ಕಾರು ಮತ್ತು ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ.
Bajpe police have arrested three individuals and confiscated valuables worth Rs 15 lac from the accused who allegedly wore burqas, poured acid on a woman working at a finance company, and attempted to loot gold ornaments.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm