ಬ್ರೇಕಿಂಗ್ ನ್ಯೂಸ್
14-07-24 04:29 pm Mangalore Correspondent ಕ್ರೈಂ
ಮಂಗಳೂರು, ಜುಲೈ 14: ಬುರ್ಖಾ ಧರಿಸಿ ಬಜ್ಪೆಯ ಫೈನಾನ್ಸ್ ಕಚೇರಿಗೆ ನುಗ್ಗಿದ್ದ ಮೂವರಿದ್ದ ತಂಡ ಮಹಿಳೆ ಮೇಲೆ ಆ್ಯಸಿಡ್ ಹಾಕಿ ನಗದು ದರೋಡೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಬಜ್ಪೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಜಪೆ ಶಾಂತಿಗುಡ್ಡೆಯ ಪ್ರೀತೇಶ್ ಯಾನೆ ಪ್ರೀತು (31), ಸುರತ್ಕಲ್ ಕೋಡಿಕೆರೆಯ ಧನರಾಜ್ ಯಾನೆ ಧನು (30) ಹಾಗೂ ಬಾಳ ಕುಂಬಳಕೆರೆಯ ಕುಸುಮಾಕರ ಯಾನೆ ಅಣ್ಣು (37) ಬಂಧಿತರು.
ಮಂಗಳೂರು ತಾಲೂಕು ಬಜಪೆ ಗ್ರಾಮದ ನಿವಾಸಿ ಲೆಸ್ಲಿ ಡಿಕುನ್ಹಾ ಅವರ ಬಜಪೆ ಪೇಟೆಯಲ್ಲಿರುವ ಫೈನಾನ್ಸ್ ಕಚೇರಿಗೆ ಜು.4ರಂದು ಸಂಜೆ ಬುರ್ಖಾ ಧರಿಸಿ ಬಂದಿದ್ದ ಮೂವರು ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ್ದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಬ್ಬರು ಕಚೇರಿ ಒಳಗಡೆ ಬಂದು ಆ್ಯಸಿಡ್ ಬಾಟಲಿ ತೋರಿಸಿ ಮಹಿಳಾ ಸಿಬಂದಿಯನ್ನು ಬೆದರಿಸಿದ್ದರು. ಈ ವೇಳೆ, ಮಹಿಳೆ ಕಿರುಚಾಡಿದ್ದು ಕೂಡಲೇ ಹೊರಗೆ ಸ್ಟಾರ್ಟ್ ನಲ್ಲೇ ನಿಲ್ಲಿಸಿದ್ದ ಇನ್ನೊಬ್ಬ ವ್ಯಕ್ತಿಯ ಸ್ಕೂಟರಿನಲ್ಲಿ ಮೂವರು ಪರಾರಿಯಾಗಿದ್ದರು. ಇವರು ಅಲ್ಲಿಂದ ತೆರಳುವುದು ಸಿಸಿಟಿವಿಯಲ್ಲಿ ದಾಖಲಾಗಿತ್ತು.
ಪ್ರೀತೇಶ್ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಬಜಪೆ ಪೊಲೀಸ್ ಠಾಣೆಯಲ್ಲಿ ಒಂದು ಕಳವು ಪ್ರಕರಣ, ಧನರಾಜ್ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಎರಡು ಹಾಗೂ ಮೂಡುಬಿದರೆ ಠಾಣೆಯಲ್ಲಿ 1 ಕೊಲೆಯತ್ನ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಪ್ರಕರಣ, ಕುಸುಮಾಕರನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 2 ಹಾಗೂ ಬಜಪೆ ಪೊಲೀಸ್ ಠಾಣೆಯಲ್ಲಿ 1 ಕಳವು ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿಗಳು ಕಳ್ಳತನದಿಂದ ಗಳಿಸಿದ್ದ ಸುಮಾರು 15 ಲಕ್ಷ ರೂ. ಮೌಲ್ಯದ ಇನೋವಾ ಕಾರು, ಸ್ವಿಫ್ಟ್ ಕಾರು ಮತ್ತು ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ.
Bajpe police have arrested three individuals and confiscated valuables worth Rs 15 lac from the accused who allegedly wore burqas, poured acid on a woman working at a finance company, and attempted to loot gold ornaments.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am