ಬ್ರೇಕಿಂಗ್ ನ್ಯೂಸ್
14-07-24 07:45 pm Mangalore Correspondent ಕ್ರೈಂ
ಮಂಗಳೂರು, ಜುಲೈ 14: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮದ್ರಸಾ ಶಿಕ್ಷಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಬಸ್ಸಿನಲ್ಲಿದ್ದ ಮಹಿಳೆಯರೇ ಸೇರಿ ಆತನಿಗೆ ಗೂಸಾ ನೀಡಿದ್ದಾರೆ.
ಮಹಿಳೆಯರಿದ್ದ ಕುಟುಂಬವೊಂದು ಶನಿವಾರ ಸಂಜೆ ಧರ್ಮಸ್ಥಳಕ್ಕೆ ತೆರಳುವುದಕ್ಕಾಗಿ ಬೆಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬಂದಿತ್ತು. ಈ ವೇಳೆ, ಬಸ್ ಹಾಸನ ತಲುಪಿದಾಗ ಉಸ್ತಾದ್ ಬಸ್ ಹತ್ತಿದ್ದು ಬಾಲಕಿ ಬಳಿಯಲ್ಲೇ ಕುಳಿತುಕೊಂಡಿದ್ದ. ಬಸ್ಸು ಸಕಲೇಶಪುರ ಘಾಟ್ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನರಿತ ಬಾಲಕಿ ತಾಯಿ ಉಸ್ತಾದ್ ನನ್ನು ಪ್ರಶ್ನೆ ಮಾಡಿದ್ದು ನನ್ನನ್ನು ಮುಟ್ಟಿ ನೋಡು, ಏನಾ ನಿಂಗೆ ಅಂತ ಹಲ್ಲೆಗೆ ಮುಂದಾಗಿದ್ದಾರೆ. ಇದೇ ವೇಳೆ, ಇತರ ಮಹಿಳಾ ಪ್ರಯಾಣಿಕರು ಸೇರಿಕೊಂಡು ಮುಖಕ್ಕೆ ಗುದ್ದಿ ಹಲ್ಲೆ ನಡೆಸಿದ್ದಾರೆ.

ಮಹಿಳೆಯರು ಗೂಸಾ ನೀಡಿದ ಘಟನೆಯ ದೃಶ್ಯ ಮೊಬೈಲಿನಲ್ಲಿ ಸೆರೆಯಾಗಿದೆ. ಬೆಂಗಳೂರಿನಿಂದ ಮಂಗಳೂರು ಬರುತ್ತಿದ್ದ ಬಸ್ಸಿನಲ್ಲಿ ಬಂದಿದ್ದ ಬಾಲಕಿಯ ಕುಟುಂಬ, ಬಸ್ ಗುಂಡ್ಯ ತಲುಪುತ್ತಿದ್ದಂತೆ ಇಳಿದಿದ್ದಾರೆ. ಆ ಕುಟುಂಬವನ್ನು ಬೆಂಬಲಿಸಿದ ಬಂಟ್ವಾಳ ಮತ್ತು ಶಿವಮೊಗ್ಗದ ಯುವಕರನ್ನು ದುರುಗುಟ್ಟಿದ್ದು ಈ ಬಗ್ಗೆ ಯುವಕರು ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಬಸ್ ಉಪ್ಪಿನಂಗಡಿ ತಲುಪುತ್ತಲೇ ಉಸ್ತಾದ್ ಬಸ್ಸಿನಿಂದ ಇಳಿದು ಹೋಗಿದ್ದಾನೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿಲ್ಲ. ಆದರೆ ಗೂಸಾ ನೀಡಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Mangalore Puttur Sexual harassment of girl on KSRTC bus Passengers assault accused, video goes viral on social media.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm