ಬ್ರೇಕಿಂಗ್ ನ್ಯೂಸ್
14-07-24 07:45 pm Mangalore Correspondent ಕ್ರೈಂ
ಮಂಗಳೂರು, ಜುಲೈ 14: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮದ್ರಸಾ ಶಿಕ್ಷಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಬಸ್ಸಿನಲ್ಲಿದ್ದ ಮಹಿಳೆಯರೇ ಸೇರಿ ಆತನಿಗೆ ಗೂಸಾ ನೀಡಿದ್ದಾರೆ.
ಮಹಿಳೆಯರಿದ್ದ ಕುಟುಂಬವೊಂದು ಶನಿವಾರ ಸಂಜೆ ಧರ್ಮಸ್ಥಳಕ್ಕೆ ತೆರಳುವುದಕ್ಕಾಗಿ ಬೆಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬಂದಿತ್ತು. ಈ ವೇಳೆ, ಬಸ್ ಹಾಸನ ತಲುಪಿದಾಗ ಉಸ್ತಾದ್ ಬಸ್ ಹತ್ತಿದ್ದು ಬಾಲಕಿ ಬಳಿಯಲ್ಲೇ ಕುಳಿತುಕೊಂಡಿದ್ದ. ಬಸ್ಸು ಸಕಲೇಶಪುರ ಘಾಟ್ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನರಿತ ಬಾಲಕಿ ತಾಯಿ ಉಸ್ತಾದ್ ನನ್ನು ಪ್ರಶ್ನೆ ಮಾಡಿದ್ದು ನನ್ನನ್ನು ಮುಟ್ಟಿ ನೋಡು, ಏನಾ ನಿಂಗೆ ಅಂತ ಹಲ್ಲೆಗೆ ಮುಂದಾಗಿದ್ದಾರೆ. ಇದೇ ವೇಳೆ, ಇತರ ಮಹಿಳಾ ಪ್ರಯಾಣಿಕರು ಸೇರಿಕೊಂಡು ಮುಖಕ್ಕೆ ಗುದ್ದಿ ಹಲ್ಲೆ ನಡೆಸಿದ್ದಾರೆ.

ಮಹಿಳೆಯರು ಗೂಸಾ ನೀಡಿದ ಘಟನೆಯ ದೃಶ್ಯ ಮೊಬೈಲಿನಲ್ಲಿ ಸೆರೆಯಾಗಿದೆ. ಬೆಂಗಳೂರಿನಿಂದ ಮಂಗಳೂರು ಬರುತ್ತಿದ್ದ ಬಸ್ಸಿನಲ್ಲಿ ಬಂದಿದ್ದ ಬಾಲಕಿಯ ಕುಟುಂಬ, ಬಸ್ ಗುಂಡ್ಯ ತಲುಪುತ್ತಿದ್ದಂತೆ ಇಳಿದಿದ್ದಾರೆ. ಆ ಕುಟುಂಬವನ್ನು ಬೆಂಬಲಿಸಿದ ಬಂಟ್ವಾಳ ಮತ್ತು ಶಿವಮೊಗ್ಗದ ಯುವಕರನ್ನು ದುರುಗುಟ್ಟಿದ್ದು ಈ ಬಗ್ಗೆ ಯುವಕರು ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಬಸ್ ಉಪ್ಪಿನಂಗಡಿ ತಲುಪುತ್ತಲೇ ಉಸ್ತಾದ್ ಬಸ್ಸಿನಿಂದ ಇಳಿದು ಹೋಗಿದ್ದಾನೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿಲ್ಲ. ಆದರೆ ಗೂಸಾ ನೀಡಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Mangalore Puttur Sexual harassment of girl on KSRTC bus Passengers assault accused, video goes viral on social media.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm