ಬ್ರೇಕಿಂಗ್ ನ್ಯೂಸ್
17-07-24 04:30 pm Bengaluru Correspondent ಕ್ರೈಂ
ಬೆಂಗಳೂರು, ಜುಲೈ 17: ಕೊಲೆ ಕೇಸ್ ನಲ್ಲಿ 20 ವರ್ಷ ಗಳಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಕನ್ನಡ ಸಿನಿಮಾದ ನಿರ್ದೇಶಕ ಕೊನೆಗೂ ಖಾಕಿ ಬಲೆಗೆ ಬಿದ್ದಿದ್ದಾನೆ. ಸಿಸಿಬಿ ಪೊಲೀಸರು ಗಜೇಂದ್ರ ಅಲಿಯಾಸ್ ಗಜ ನನ್ನ ಬಂಧಿಸಿದ್ದಾರೆ.
ಆರೋಪಿ ಗಜೇಂದ್ರ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಕಾಲಿವುಡ್ ಇಂಡಸ್ಟ್ರಿಯಲ್ಲೂ ಒಂದೆರಡು ಸಿನಿಮಾ ಮಾಡಿದ್ದಾನೆ.
ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ಗಜೇಂದ್ರ !
2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಈ ಕೊಲೆ ಕೇಸ್ನಲ್ಲಿ ಚಂದ್ರಪ್ಪ, ಅಲ್ಯೂಮಿನಿಯಂ ಬಾಬು ಜೊತೆಗೆ ನಿರ್ದೇಶಕ ಗಜೇಂದ್ರ ಕೂಡ ಎಂಟನೇ ಆರೋಪಿ ಆಗಿದ್ದ. ಕೊಲೆ ಕೇಸ್ನಲ್ಲಿ ಬಂಧಿತನಾಗಿದ್ದ ಗಜೇಂದ್ರಗೆ ಕೋರ್ಟ್ 1 ವರ್ಷ ಶಿಕ್ಷೆ ಕೂಡ ವಿಧಿಸಿತ್ತು. ಒಂದು ವರ್ಷ ಜೈಲುವಾಸ ಅನುಭವಿಸಿದ ಗಜೇಂದ್ರ ಬಳಿಕ ಜಾಮೀನು ಪಡೆದು ಹೊರಬಂದಿದ್ದ.
20 ವರ್ಷದಿಂದ ತಲೆಮರೆಸಿಕೊಂಡಿದ್ದ ಗಜ ;
ಜಾಮೀನು ಪಡೆದ ಬಳಿಕ ಹಲವು ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. 20 ವರ್ಷಗಳಿಂದ ಪೊಲೀಸರ ಕೈಗೆ ಸಿಕ್ಕಿಲ್ಲ. ಅರಸಯ್ಯನ ಶಿಷ್ಯ ಗಜೇಂದ್ರ ಅಲಿಯಾಸ್ ಗಜ, ಈ ಹಿಂದೆ ಪುಟಾಣಿ ಪವರ್ ಹಾಗೂ ರುದ್ರ ಎಂಬ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ. ಅಷ್ಟೇ ಅಲ್ಲದೇ ತಮಿಳಿನಲ್ಲಿ ಒಂದೆರಡು ಸಿನಿಮಾ ಮಾಡಿರೋದಾಗಿ ಹೇಳಿಕೊಂಡಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಇದೀಗ ಗಜೇಂದ್ರನನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ.
Kannada film director Gajendra Gaja absconded for 20 years in a murder case arrested by CCB police
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm