ಬ್ರೇಕಿಂಗ್ ನ್ಯೂಸ್
19-07-24 10:47 pm HK News Desk ಕ್ರೈಂ
ಹೈದರಾಬಾದ್, ಜುಲೈ 20: ಮೊಬೈಲ್ ಫೋನ್ನಲ್ಲಿ ಅಶ್ಲೀಲ ವಿಡಿಯೋಗಳನ್ನು ವೀಕ್ಷಿಸಿ ಉದ್ರೇಕಗೊಂಡ ಮೂವರು ಬಾಲಕರು ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.
ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ಜುಲೈ 7ರಂದು ದೇವಸ್ಥಾನವೊಂದರಲ್ಲಿ 12 ವರ್ಷದ ಇಬ್ಬರು ಮತ್ತು 13 ವರ್ಷದ ಒಬ್ಬ ಸೇರಿ ಮೂವರು ಬಾಲಕರು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದರು. ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ್ದರು.
ಅತ್ಯಾಚಾರ ನಡೆಸಿದ ಆರೋಪಿಗಳನ್ನು ಜುಲೈ 10ರಂದು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಮೂವರೂ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.
ಆರೋಪಿಗಳಲ್ಲಿ ಇಬ್ಬರು ಆರನೇ ತರಗತಿಯಲ್ಲಿ ಓದುತ್ತಿದ್ದು, ಒಬ್ಬ 7ನೇ ತರಗತಿ ವಿದ್ಯಾರ್ಥಿ. ಅತ್ಯಾಚಾರದ ಬಳಿಕ ಬಾಲಕಿ ಪೋಷಕರಿಗೆ ದೂರು ನೀಡಬಹುದು ಎಂಬ ಭಯದಿಂದ ಮೂವರೂ ಸೇರಿ ಆಕೆಯನ್ನು ಕತ್ತು ಹಿಸುಕಿ ಕೊಂದಿದ್ದಾರೆ. ಆರೋಪಿಯೊಬ್ಬನ ತಂದೆ ಮತ್ತು ಚಿಕ್ಕಪ್ಪ ಸೇರಿ ಬಾಲಕಿಯ ಶವವನ್ನು ಕಾಲುವೆಗೆ ಎಸೆದಿದ್ದರು ಎಂದು ನಂದ್ಯಾಲ್ ಎಸ್ಪಿ ಅಧಿರಾಜ್ ಸಿಂಗ್ ರಾಣಾ ತಿಳಿಸಿದ್ದಾರೆ.
ಆರೋಪಿಗಳಲ್ಲಿ ಒಬ್ಬ ಕೂಡಲೇ ತನ್ನ ಸಂಬಂಧಿಕರಿಗೆ ಕರೆ ಮಾಡಿ ಆಗಿರುವ ಪ್ರಮಾದದ ಬಗ್ಗೆ ತಿಳಿಸಿದ್ದ. ಮಕ್ಕಳ ಮೇಲೆ ಕಾನೂನು ಕ್ರಮ ಜರುಗಿಸಬಹುದೆಂಬ ಭಯದಿಂದ ಆತನ ತಂದೆ ಮತ್ತು ಚಿಕ್ಕಪ್ಪ ಸ್ಥಳಕ್ಕೆ ಧಾವಿಸಿ ಬಾಲಕಿಯ ಶವವನ್ನು ದ್ವಿಚಕ್ರ ವಾಹನದಲ್ಲಿ ಸಾಗಿಸಿ ಕಲ್ಲಿಗೆ ಕಟ್ಟಿ ಕೃಷ್ಣಾ ನದಿಗೆ ಎಸೆದಿದ್ದಾರೆ. ಅಪ್ರಾಪ್ತರು ಮತ್ತು ಅಪರಾಧ ಕೃತ್ಯ ಮುಚ್ಚಿ ಹಾಕಲು ಯತ್ನಿಸಿದ ಸಂಬಂಧಿಕರನ್ನು ಬಂಧಿಸಲಾಗಿದೆ ಎಂದು ರಾಣಾ ತಿಳಿಸಿದ್ದಾರೆ.
ಉದ್ಯಾನವನ ಒಂದರ ಬಳಿ ಆಟವಾಡುತ್ತಿದ್ದ ಬಾಲಕಿಗೆ ಬಾಲಕರ ಪರಿಚಯವಿತ್ತು. ತಮ್ಮೊಂದಿಗೆ ಆಟವಾಡಲು ಆಕೆಯನ್ನು ಮನವೊಲಿಸಿ ಕರೆದೊಯ್ದಿದ್ದರು. ಆನಂತರ ಅವರು ಆಕೆಯ ಬಾಯಿಯನ್ನು ಬಿಗಿದಿಟ್ಟು ಅತ್ಯಾಚಾರ ಎಸಗಿದ್ದರು. ಆದರೆ ಶ್ವಾನ ಕೊಟ್ಟ ಸುಳಿವು ಬೆನ್ನತ್ತಿದ ಪೊಲೀಸರು ಆರೋಪಿಗಳನ್ನು ಮೂರೇ ದಿನದಲ್ಲಿ ಬಂಧಿಸಿದ್ದರು.
ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಅಪ್ರಾಪ್ತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಆರ್ಥಿಕ ನೆರವು ಮಂಜೂರು ಮಾಡಿದ್ದಾರೆ.
Three jailed school-going boys, who allegedly raped and murdered an eight-year-old girl in Andhra Pradesh earlier this month, had watched porn videos on their phones before committing the crime.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm