ಬ್ರೇಕಿಂಗ್ ನ್ಯೂಸ್
23-07-24 12:30 pm Mangalore Correspondent ಕ್ರೈಂ
ಮಂಗಳೂರು, ಜುಲೈ 23: ಗುಜರಾತ್ ಮೂಲದ ಅಡಿಕೆ ವ್ಯಾಪಾರಿ ಕಂಪನಿಗಳ ಶೇಟುಗಳು ಮಂಗಳೂರಿನ ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಾಂತರ ರೂಪಾಯಿ ಹಣ ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಲೀನ್ ಟ್ರೇಂಡಿಂಗ್ ಕಂಪೆನಿ, ವಿಮಲ್ ಬ್ರದರ್ಸ್ ಹಾಗೂ ಕಮಲೇಶ್ ಪಡಾಲಿಯಾ ಎಂಬ ಕಂಪೆನಿಗಳ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪರ್ಲೀನ್ ಟ್ರೇಡಿಂಗ್ ಕಂಪನಿಯು ಇಲ್ಲಿನ ವರ್ತಕರಿಗೆ ಒಟ್ಟು ರು. 1.34 ಕೋಟಿ ಹಾಗೂ ವಿಮಲ್ ಬ್ರದರ್ಸ್ ಕಂಪನಿಯು ರು. 1.21 ಕೋಟಿ ವಂಚನೆ ನಡೆಸಿದ ಬಗ್ಗೆ ದೂರು ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮತ್ತೊಂದು ವಿಮಲ್ ಬ್ರದರ್ಸ್ ಕಂಪನಿಯ ಮಾಲೀಕರಾದ ಕಮಲೇಶ್ ಪಡಾಲಿಯಾ ಮತ್ತು ಆತನ ಪತ್ನಿ ರೋಹಿಣಿ ಸೇರಿ ರು. 59.62 ಲಕ್ಷ ವಂಚಿಸಿದ್ದಾರೆ. ಆರೋಪಿಗಳು ತಮ್ಮ ಕಂಪನಿಯನ್ನು ಮುಚ್ಚಿ ಅದರಲ್ಲಿದ್ದ 115 ಚೀಲ ಅಡಿಕೆಯನ್ನು ಸಂಬಂಧಿಕರ ಗೋದಾಮಿಗೆ ಸ್ಥಳಾಂತರಿಸಿದ್ದಾರೆ. ಕರೆ ಮಾಡಿದರೆ ಫೋನ್ ಸ್ವಿಚ್ ಆಫ್ ಎಂದು ಪ್ರತಿಕ್ರಿಯೆ ಬರುತ್ತಿದೆ’ ಎಂದು ಹಬೀಬ್ ರಹಿಮಾನ್ ಕೆ. ಅವರು ದೂರು ನೀಡಿದ್ದಾರೆ.
ವಿಮಲ್ ಬ್ರದರ್ಸ್ ಕಂಪನಿಯು ಒಟ್ಟು ರು. 25.25 ಲಕ್ಷ ವಂಚಿಸಿದೆ ಎಂದು ಎಸ್.ಆರ್.ಟ್ರೇಡಿಂಗ್ ಕಂಪನಿಯ ಪಾಲುದಾರ ಶ್ರೀಪತಿ ಭಟ್ ಮತ್ತು ಕೆ.ಎಸ್.ನಾರಾಯಣ ಭಟ್ ದೂರಿನಲ್ಲಿ ತಿಳಿಸಿದ್ದಾರೆ. ತನಗೆ ರು. 36.39 ಲಕ್ಷ ವಂಚನೆಯಾಗಿದೆ ಎಂದು ಎ.ಎ.ಸುಪಾರಿ ಟ್ರೇಡಿಂಗ್ ಕಂಪನಿಯ ಮಾಲೀಕ ಅಬ್ದುಲ್ ರಹಿಮಾನ್ ದೂರು ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಡಿಕೆ ಖರೀಸಿದ್ದ ಗುಜರಾತಿನ ವರ್ತಕ ಕಮಲೇಶ್ ಪಡಾಲಿಯಾ 8.99 ಲಕ್ಷ ರೂ. ಹಣವನ್ನು ನೀಡದೇ ವಂಚಿಸಿದ ಬಗ್ಗೆ ಬೀಬಿ ಅಲಾಬಿ ರಸ್ತೆಯ ಒಣ ಅಡಿಕೆ ವ್ಯಾಪಾರಿ ಯೂಸುಫ್ ದೂರು ನೀಡಿದ್ದಾರೆ.
Mangalore Arecanut business owners cheated in crores by Gujrathi owners, case filed at cyber crime police station. Case has been booked against Parvin trading company, vimal brothers and Kamlesh Padaliya for cheating
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm