ಬ್ರೇಕಿಂಗ್ ನ್ಯೂಸ್
23-07-24 03:03 pm HK News Desk ಕ್ರೈಂ
ರಾಮನಗರ, ಜುಲೈ.23: ರಾಮನಗರದಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದೆ. ಐಸ್ಕ್ರೀಮ್ ಕೊಡಿಸುವ ನೆಪದಲ್ಲಿ 4 ವರ್ಷದ ಬಾಲಕಿಯನ್ನು ಕರೆದೊಯ್ದು ಕಾಮುಕನೊಬ್ಬ ಅತ್ಯಾಚಾರವೇಸಗಿ ಬಳಿಕ ಕೊಂದು ಹಾಕಿದ್ದಾನೆ.
ಮೂರು ದಿನದ ಹಿಂದೆ ಕಾಣೆಯಾಗಿದ್ದ 4 ವರ್ಷದ ಹೆಣ್ಣು ಮಗುವನ್ನು ಅವರ ಸಂಬಂಧಿಯೇ ಅಪಹರಿಸಿ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಘಟನೆ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಗುವಿನ ಶವವು ತಿಪ್ಪಗೊಂಡನಹಳ್ಳಿ ಬಳಿ ಸೋಮವಾರ ರಾತ್ರಿ ಪತ್ತೆಯಾಗಿದೆ.
ಘಟನೆಗೆ ಸಂಬಂಧಿಸಿದಂತೆ, ಆರೋಪಿ ಬೆಂಗಳೂರಿನ ಗೌರಿಪಾಳ್ಯದ ಇಮ್ರಾನ್ ಖಾನ್ ವಿರುದ್ಧ ಮಾಗಡಿ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.
ಮಗು ಕುಟುಂಬದ ಸಂಬಂಧಿಯಾದ ಆರೋಪಿ ಆಗಾಗ ಮನೆಗೆ ಬಂದು ಹೋಗುತ್ತಿದ್ದ. ಅದೇ ರೀತಿ ಜುಲೈ 20ಕ್ಕೆ ಬಂದಿದ್ದ ಆತ, ಕೊಲೆಯಾಗಿರುವ ಹೆಣ್ಣು ಮಗುವಿನ ಜೊತೆಗೆ ಮತ್ತೊಂದು ಮಗುವನ್ನು ಸಂಜೆ ಅಂಗಡಿಗೆ ಕರೆದೊಯ್ದು ಐಸ್ಕ್ರೀಂ ಕೊಡಿಸಿಕೊಂಡು ಬಂದಿದ್ದ. ನಂತರ, ಮತ್ತೆ ಹೆಣ್ಣು ಮಗುವನ್ನು ತನ್ನೊಂದಿಗೆ ಕರೆದೊಯ್ದಿದ್ದ ಎಂದು ಪೊಲೀಸರು ತಿಳಿಸಿದರು.
ಸಂಜೆ 7 ಗಂಟೆಯಾದರೂ ಮಗು ಮನೆಗೆ ಬಾರದಿದ್ದರಿಂದ ಗಾಬರಿಗೊಂಡ, ತಾಯಿ ಅಕ್ಕಪಕ್ಕ ಹುಡುಕಾಡಿದರು. ಕಡೆಗೆ, ಅಂಗಡಿಗೆ ಮಗು ಕರೆದೊಯ್ದಿದ್ದ ಆರೋಪಿಗೆ ಕರೆ ಮಾಡಿದಾಗ ಆತ, ‘ನನಗೇನೂ ಗೊತ್ತಿಲ್ಲ’ ಎಂದು ಕರೆ ಸ್ಥಗಿತಗೊಳಿಸಿ, ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದ. ಅನುಮಾನಗೊಂಡ ತಾಯಿ ಠಾಣೆಗೆ ದೂರು ಕೊಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡು ಮಗು ಹಾಗೂ ಆರೋಪಿಗಾಗಿ ಹುಡುಕಾಟ ನಡೆಸಿದ್ದೆವು ಎಂದು ಹೇಳಿದರು.
ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಸೇರಿದಂತೆ, ವಿವಿಧ ಮೂಲಗಳನ್ನು ಆಧರಿಸಿ ಶೋಧ ಕಾರ್ಯ ನಡೆಸಿದಾಗ, ಆರೋಪಿ ತಿಪ್ಪಗೊಂಡನಹಳ್ಳಿ ಬಳಿಯ ರಸ್ತೆಯಲ್ಲಿ ಓಡಾಡಿರುವುದು ಗೊತ್ತಾಯಿತು. ಸುತ್ತಮುತ್ತ ಹುಡುಕಾಡಿದಾಗ ರಸ್ತೆ ಬದಿಯ ಬಂಡೆಯ ಬಳಿ ಬೆತ್ತಲೆ ಸ್ಥಿತಿಯಲ್ಲಿ ಮಗುವಿನ ಶವ ಪತ್ತೆಯಾಯಿತು. ನಂತರ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಸಹ ಬಂಧಿಸಲಾಯಿತು. ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬದವರಿಗೆ ಶವ ಹಸ್ತಾಂತರಿಸಲಾಯಿತು ಎಂದು ತಿಳಿಸಿದರು.

ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ;
ಆರೋಪಿ ಇಮ್ರಾನ್ ಖಾನ್ನನ್ನು ಎನ್ಕೌಂಟರ್ ಮಾಡುವಂತೆ ಕುಟುಂಬಸ್ಥರು ಸೇರಿ ಸಾರ್ವಜನಿಕರು ಪ್ರತಿಭಟಿಸಿದರು. ಮಾಗಡಿ ತಹಸೀಲ್ದಾರ್ ಕಚೇರಿ ಮುಂಭಾಗ ಜಮಾಯಿಸಿದ ಸಾವಿರಾರು ಜನರು ಪ್ರತಿಭಟಿಸಿದರು. ಮಾಗಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.
Ramnagara rape and murder of 4 year old girl, accused arrested. Public protest to encounter the accused or handover him to them. The 4 year old girl was told of buying icecream and later raped.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 12:21 pm
HK News Staffer
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm