ಬ್ರೇಕಿಂಗ್ ನ್ಯೂಸ್
24-07-24 05:09 pm Bangalore Correspondent ಕ್ರೈಂ
ಬೆಂಗಳೂರು, ಜುಲೈ.24: ಮಹಿಳಾ ಪಿ.ಜಿ ಒಳಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ಕೋರಮಂಗಲದ ವಿ.ಆರ್.ಲೇಔಟ್ನಲ್ಲಿ ನಡೆದಿದೆ. ಬಿಹಾರ ಮೂಲದ ಕೃತಿ ಕುಮಾರಿ (24) ಕೊಲೆಯಾಗಿದ್ದಾರೆ.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೃತಿ ಕುಮಾರಿ ಕೆಲಸ ಮಾಡುತ್ತಿದ್ದರು. ತಡರಾತ್ರಿ 11.10ರ ಸುಮಾರಿಗೆ ಚಾಕು ಹಿಡಿದು ಪಿ.ಜಿಯೊಳಗೆ ನುಗ್ಗಿದ ಆರೋಪಿ, 3ನೇ ಮಹಡಿಯಲ್ಲಿನ ರೂಮಿನ ಸಮೀಪದಲ್ಲೇ ಯುವತಿ ಮೇಲೆ ಚಾಕುವಿನಿಂದ ಕತ್ತು ಕೊಯ್ದು ಕೊಲೆಗೈದು ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು, ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಪರಿಚಯಸ್ಥ ವ್ಯಕ್ತಿಯಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪಿ.ಜಿಯಲ್ಲಿನ ಭದ್ರತಾ ವೈಫಲ್ಯವೇ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
''ಪ್ರಕರಣದ ಕುರಿತು ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಆರೋಪಿಯ ಬಂಧನದ ಬಳಿಕವಷ್ಟೇ ಕೃತ್ಯದ ಹಿಂದಿನ ಕಾರಣ ತಿಳಿಯಲಿದೆ'' ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ ತಿಳಿಸಿದ್ದಾರೆ.
ಘಟನೆಯ ಕುರಿತು ರಾತ್ರಿ 12 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ತಕ್ಷಣ ಕೋರಮಂಗಲ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವತಿ ಮೂಲತಃ ಬಿಹಾರದವರು ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಪಿ.ಜಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಹತ್ಯೆಯಾದ ಯುವತಿ ಹಾಗೂ ಆರೋಪಿ ಪರಿಚಿತರಾ? ಕೃತ್ಯಕ್ಕೆ ಕಾರಣವೇನು? ಎಂಬುದು ತನಿಖೆಯ ನಂತರ ತಿಳಿಯಲಿದೆ' ಎಂದು ರಮಣ್ ಗುಪ್ತಾ ಮಾಹಿತಿ ನೀಡಿದರು.
A 24-year-old private firm employee was stabbed to death at a paying guest accommodation at Koramangala in Bengaluru on July 23. The deceased, Kruthi Kumari, was a native of Bihar. She worked in a private firm. She was staying in a ladies PG in VGR Layout.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am