ಬ್ರೇಕಿಂಗ್ ನ್ಯೂಸ್
24-07-24 06:45 pm HK News Desk ಕ್ರೈಂ
ಶಿವಮೊಗ್ಗ, ಜುಲೈ.24: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೀತಿಸುತ್ತಿದ್ದ ಯುವತಿಯನ್ನು ಪ್ರಿಯಕರನೇ ಹಲ್ಲೆಗೈದು ಕೊಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಕೊಪ್ಪ ಪೊಲೀಸ್ ಠಾಣೆಯಲ್ಲಿ ಯುವತಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಕೊಪ್ಪ ಪೊಲೀಸರು ಕೊಲೆ ಪ್ರಕರಣವನ್ನು ಬಯಲು ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರಂ ಬಳಿ ಕೊಲೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಯುವತಿ ಸೌಮ್ಯ ಕೊಲೆಯಾದವಳು. ಸಾಗರ ಮೂಲದ ಯುವಕ ಸೃಜನ್ ಕೊಲೆ ಆರೋಪಿ. ಇವರು ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಯಾಗುವಂತೆ ಯುವತಿ ಪೀಡಿಸುತ್ತಿದ್ದರೆ, ಜಾತಿ ಬೇರೆಯಾಗಿದ್ದರಿಂದ ಯುವಕನ ಮನೆಯವರು ನಿರಾಕರಿಸಿದ್ದರು. ಇಬ್ಬರ ನಡುವೆ ಜಗಳವಾಗಿ ಪ್ರಿಯಕರನ ಏಟಿಗೆ ಯುವತಿ ಕೊಲೆಯಾಗಿ ಹೋಗಿದ್ದಾಳೆ.
ತೀರ್ಥಹಳ್ಳಿಯ ಫೈನಾನ್ಸ್ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ಸೃಜನ್ ಕೊಪ್ಪ ಆಸುಪಾಸಿನಲ್ಲಿ ಹಣ ವಸೂಲಿಗೆ ಹೋಗುತ್ತಿದ್ದ. ಇದೇ ವೇಳೆ ಯುವತಿ ಸೌಮ್ಯಾ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು. ಇಬ್ಬರ ನಡುವೆ ಪರಿಚಯವಾಗಿ ಪ್ರೀತಿಗೆ ತಿರುಗಿತ್ತು. ಮದುವೆಯಾಗುವುದಾಗಿ ನಂಬಿಸಿ ಯುವಕ ಮೋಸ ಮಾಡಿದ್ದಾನೆ ಎನ್ನಲಾಗಿದೆ. ಆನಂತರ ತನ್ನನ್ನು ಮದುವೆ ಆಗುವಂತೆ ಯುವತಿ ಒತ್ತಾಯ ಮಾಡುತ್ತಿದ್ದಳು.
ಇಬ್ಬರದ್ದು ಬೇರೆ ಬೇರೆ ಸಮುದಾಯ ಆಗಿದ್ದರಿಂದ ಯುವಕನ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಜುಲೈ 2ರಂದು ತೀರ್ಥಹಳ್ಳಿಗೆ ಹೋಗುತ್ತೇನೆ ಅಂತ ಕೊಪ್ಪದಿಂದ ಯುವತಿ ಸಾಗರಕ್ಕೆ ಬಂದಿದ್ದಳು. ಅಲ್ಲದೆ, ನನ್ನನ್ನು ನಿನ್ನ ಮನೆಗೆ ಕರೆದುಕೊಂಡು ಹೋಗುವಂತೆ ಒತ್ತಡ ಹಾಕಿದ್ದಳು. ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಪ್ರಿಯಕರ ಹೇಳಿದ್ದ. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿದ್ದು ಯುವತಿ ಮೇಲೆ ಯುವಕ ಹಲ್ಲೆ ಮಾಡಿದ್ದಾನೆ. ಇದರಿಂದ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಳು.
ಸೌಮ್ಯಾ ಸತ್ತಿದ್ದರಿಂದ ಭಯಗೊಂಡ ಯುವಕ, ಆಕೆಯ ಶವವನ್ನು ಗುಡ್ಡದಲ್ಲಿ ಹೂತಿಟ್ಟು ಮನೆಗೆ ತೆರಳಿದ್ದ. ಇತ್ತ ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಕೊಪ್ಪ ಪೊಲೀಸರಿಗೆ ಯುವತಿ ಪೋಷಕರು ದೂರು ನೀಡಿದ್ದರು. ಯುವಕನನ್ನು ಹುಡುಕಿ ಕೊಪ್ಪ ಪೊಲೀಸರು ಸಾಗರಕ್ಕೆ ಬಂದಿದ್ದರು. ಆರೋಪಿಯನ್ನು ಶಂಕೆಯಿಂದ ವಶಕ್ಕೆ ಪಡೆದು ವಿಚಾರಣೆ ಮಾಡುತ್ತಲೇ ಪೊಲೀಸರ ಎದುರು ಕೊಂದು ಹೂತಿಟ್ಟ ರಹಸ್ಯವನ್ನ ಬಿಚ್ಚಿಟ್ಟಿದ್ದಾನೆ.
In a shocking incident, a man in Shivamogga allegedly attacked his girlfriend and killed her for allegedly harassing her to marry her.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm