ಬ್ರೇಕಿಂಗ್ ನ್ಯೂಸ್
01-08-24 10:48 pm Bangalore Correspondent ಕ್ರೈಂ
ಬೆಂಗಳೂರು, ಆ.01: ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸಿಡೇದಹಳ್ಳಿಯಲ್ಲಿ ನಡೆದಿದೆ. ಮಮತಾ(31) ನೇಣಿಗೆ ಶರಣಾದ ರ್ದುದೈವಿ.
ಶಾಲಾ ಸಹಪಾಠಿಗಳಾದ ವಡ್ಡರಹಳ್ಳಿಯ ನಿವಾಸಿ ಅಶೋಕ್ ಹಾಗೂ ಜೆ.ಪಿ.ನಗರದ ಗಣೇಶ್ ಎಂಬ ಫ್ರೆಂಡ್ಸ್ ಅಶ್ಲೀಲ ಸಂದೇಶ ಕಳಿಸಿ ನಮ್ಮ ಜೊತೆ ಸಹಕರಿಸು ಬಾ..ಎಂದು ಕಿರುಕುಳ ನೀಡಿದ್ದಾರಂತೆ. ಜೊತೆಗೆ ನೈಟ್ ಔಟ್ ಬರುವಂತೆ ಒತ್ತಡ ಹೇರುತ್ತಿದ್ದರು ಎಂದು ಆರೋಪಿಸಲಾಗಿದೆ.
ಬೆದರಿಕೆಯಿಂದ ನೊಂದು ಆತ್ಮಹತ್ಯೆಗೆ ಶರಣು
'ನಿನ್ನ ಬಿಡುವುದಿಲ್ಲ, ನಿನ್ನ ಸಂಸಾರ ಹಾಳು ಮಾಡುತ್ತೇವೆಂದು ಬೆದರಿಕೆ ಒಡ್ಡಿದ್ದರಂತೆ. ಇದರಿಂದ ಮನನೊಂದು ಗೃಹಿಣಿ ಮಮತಾ ತನ್ನ ನಿವಾಸದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪತಿ ಲೋಕೇಶ್, ಪತ್ನಿ ಮಮತಾಗೆ ಫೋನ್ ಮಾಡಿದಾಗ ರಿಸೀವ್ ಮಾಡದ ಹಿನ್ನೆಲೆ ಮನೆ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಅಶೋಕ್ ಮತ್ತು ಗಣೇಶ್ ವಿರುದ್ಧ ಲೋಕೇಶ್ ಠಾಣೆಗೆ ದೂರು ನೀಡಿದ್ದಾರೆ.
3 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ ;
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಬಾಗಲಗುಂಟೆ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ಇನ್ನು ಮೃತ ಮಮತಾ ಹಾಗೂ ಲೋಕೇಶ್ 3 ವರ್ಷಗಳ ಹಿಂದೆ ಪ್ರೀತಿಸಿ, ಮನೆಯವರ ಒಪ್ಪಿಗೆ ಮೇರೆಗೆ ದೊಡ್ಡಬಳ್ಳಾಪುರದ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಎಲ್ಲವೂ ಚೆನ್ನಾಗಿದೆ ಅಂದುಕೊಳ್ಳುವಷ್ಟರಲ್ಲಿ, ಈ ದುರ್ಘಟನೆ ನಡೆದು ಹೋಗಿದೆ.
Bangalore School friends sexually messages to women, 31 year old commits suicide. The deceased has been identified as Mamatha.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm