ಬ್ರೇಕಿಂಗ್ ನ್ಯೂಸ್
04-08-24 12:42 pm Udupi Correspondent ಕ್ರೈಂ
ಉಡುಪಿ, ಆಗಸ್ಟ್ 4: ಕುಡಿದ ಮತ್ತಿನಲ್ಲಿ ತನ್ನ ಹೆಂಡತಿಯ ಕುತ್ತಿಗೆಯನ್ನೇ ಕತ್ತಿಯಿಂದ ಕಡಿದು ಬಳಿಕ ಪತಿರಾಯ ಮನೆಯಲ್ಲಿ ಡ್ಯಾನ್ಸ್ ಮಾಡುತ್ತ ವಿಕೃತಿ ಮೆರೆದ ಘಟನೆ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಹಲ್ಲೆಗೀಡಾದವರನ್ನು ಅನಿತಾ (38) ಎಂದು ಗುರುತಿಸಲಾಗಿದ್ದು, ಪತಿ ಲಕ್ಷ್ಮಣ ಕತ್ತಿಯಿಂದ ಹಲ್ಲೆಗೈದು ಅಟ್ಟಹಾಸ ಮೆರೆದಿದ್ದಾನೆ. ಗಂಭೀರ ಗಾಯಗೊಂಡ ಅನಿತಾಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ಇವರು ಕುಂದಾಪುರ ತಾಲೂಕಿನ ಬಸ್ರೂರು ಕಾಶಿ ಮಠ, ರೆಸಿಡೆನ್ಶಿಯಲ್ ಬ್ಲಾಕ್ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇವರು ನಾಲ್ಕು ತಿಂಗಳ ಹಿಂದಷ್ಟೇ ಕಾಶಿ ಮಠಕ್ಕೆ ಸೇರಿದ ತೋಟ ನೋಡಿಕೊಳ್ಳಲು ಉಡುಪಿ ಜಿಲ್ಲೆಗೆ ಬಂದಿದ್ದರು. ನಿನ್ನೆ ರಾತ್ರಿ ಕುಡಿದ ಮತ್ತಿನಲ್ಲಿ ಪತಿ ಲಕ್ಷ್ಮಣ ಪತ್ನಿಯ ಕುತ್ತಿಗೆ ಕಡಿದು ಮಾರಣಾಂತಿಕ ಗಾಯಗೊಳಿಸಿದ್ದಲ್ಲದೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಅನಿತಾಳನ್ನು ಹಾಗೆಯೇ ಬಿಟ್ಟು ಮನೆಯ ಬಾಗಿಲ ಚಿಲಕ ಹಾಕಿ ಹಾಲ್ ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತ ವಿಕೃತಿ ಮೆರೆದಿದ್ದಾನೆ.








ಕೆಲ ಕ್ಷಣಗಳಲ್ಲೆ ಸ್ಥಳೀಯರಿಗೆ ವಿಚಾರ ತಿಳಿದಿದ್ದು ಕೂಡಲೇ ಕಿಟಕಿ ಒಡೆದು ಅಡುಗೆ ಕೋಣೆಯಲ್ಲಿ ಬಿದ್ದಿದ್ದ ಮಹಿಳೆಯನ್ನು ಹೊರತಂದಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿ ಮಹಿಳೆಯನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೈಮೇಲೆ ದೈವ ಬಂದಂತೆ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಿದ್ದ ಆರೋಪಿ ಲಕ್ಷ್ಮಣನನ್ನು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬಂಧಿಸಿ ಎರಡೇಟು ಬಿಗಿದು ಹಿಡಿದ ಚಳಿಯನ್ನು ಬಿಡಿಸಿದ್ದಾರೆ. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Kundapura Udupi Man assaults wife with sickle, arrested by police. In a shocking incident, a man assaulted his wife with a sickle at Basrur under the Kandloor police station limits on Saturday night. The wife, seriously injured, has been admitted to the hospital. Anita (38), a native of Soraba, is the victim. Her husband, Laxmana (40), is the accused.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm