ಬ್ರೇಕಿಂಗ್ ನ್ಯೂಸ್
04-08-24 12:42 pm Udupi Correspondent ಕ್ರೈಂ
ಉಡುಪಿ, ಆಗಸ್ಟ್ 4: ಕುಡಿದ ಮತ್ತಿನಲ್ಲಿ ತನ್ನ ಹೆಂಡತಿಯ ಕುತ್ತಿಗೆಯನ್ನೇ ಕತ್ತಿಯಿಂದ ಕಡಿದು ಬಳಿಕ ಪತಿರಾಯ ಮನೆಯಲ್ಲಿ ಡ್ಯಾನ್ಸ್ ಮಾಡುತ್ತ ವಿಕೃತಿ ಮೆರೆದ ಘಟನೆ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಹಲ್ಲೆಗೀಡಾದವರನ್ನು ಅನಿತಾ (38) ಎಂದು ಗುರುತಿಸಲಾಗಿದ್ದು, ಪತಿ ಲಕ್ಷ್ಮಣ ಕತ್ತಿಯಿಂದ ಹಲ್ಲೆಗೈದು ಅಟ್ಟಹಾಸ ಮೆರೆದಿದ್ದಾನೆ. ಗಂಭೀರ ಗಾಯಗೊಂಡ ಅನಿತಾಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ಇವರು ಕುಂದಾಪುರ ತಾಲೂಕಿನ ಬಸ್ರೂರು ಕಾಶಿ ಮಠ, ರೆಸಿಡೆನ್ಶಿಯಲ್ ಬ್ಲಾಕ್ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇವರು ನಾಲ್ಕು ತಿಂಗಳ ಹಿಂದಷ್ಟೇ ಕಾಶಿ ಮಠಕ್ಕೆ ಸೇರಿದ ತೋಟ ನೋಡಿಕೊಳ್ಳಲು ಉಡುಪಿ ಜಿಲ್ಲೆಗೆ ಬಂದಿದ್ದರು. ನಿನ್ನೆ ರಾತ್ರಿ ಕುಡಿದ ಮತ್ತಿನಲ್ಲಿ ಪತಿ ಲಕ್ಷ್ಮಣ ಪತ್ನಿಯ ಕುತ್ತಿಗೆ ಕಡಿದು ಮಾರಣಾಂತಿಕ ಗಾಯಗೊಳಿಸಿದ್ದಲ್ಲದೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಅನಿತಾಳನ್ನು ಹಾಗೆಯೇ ಬಿಟ್ಟು ಮನೆಯ ಬಾಗಿಲ ಚಿಲಕ ಹಾಕಿ ಹಾಲ್ ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತ ವಿಕೃತಿ ಮೆರೆದಿದ್ದಾನೆ.








ಕೆಲ ಕ್ಷಣಗಳಲ್ಲೆ ಸ್ಥಳೀಯರಿಗೆ ವಿಚಾರ ತಿಳಿದಿದ್ದು ಕೂಡಲೇ ಕಿಟಕಿ ಒಡೆದು ಅಡುಗೆ ಕೋಣೆಯಲ್ಲಿ ಬಿದ್ದಿದ್ದ ಮಹಿಳೆಯನ್ನು ಹೊರತಂದಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿ ಮಹಿಳೆಯನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೈಮೇಲೆ ದೈವ ಬಂದಂತೆ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಿದ್ದ ಆರೋಪಿ ಲಕ್ಷ್ಮಣನನ್ನು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬಂಧಿಸಿ ಎರಡೇಟು ಬಿಗಿದು ಹಿಡಿದ ಚಳಿಯನ್ನು ಬಿಡಿಸಿದ್ದಾರೆ. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Kundapura Udupi Man assaults wife with sickle, arrested by police. In a shocking incident, a man assaulted his wife with a sickle at Basrur under the Kandloor police station limits on Saturday night. The wife, seriously injured, has been admitted to the hospital. Anita (38), a native of Soraba, is the victim. Her husband, Laxmana (40), is the accused.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 02:18 pm
HK News Desk
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm