ಬ್ರೇಕಿಂಗ್ ನ್ಯೂಸ್
04-08-24 12:42 pm Udupi Correspondent ಕ್ರೈಂ
ಉಡುಪಿ, ಆಗಸ್ಟ್ 4: ಕುಡಿದ ಮತ್ತಿನಲ್ಲಿ ತನ್ನ ಹೆಂಡತಿಯ ಕುತ್ತಿಗೆಯನ್ನೇ ಕತ್ತಿಯಿಂದ ಕಡಿದು ಬಳಿಕ ಪತಿರಾಯ ಮನೆಯಲ್ಲಿ ಡ್ಯಾನ್ಸ್ ಮಾಡುತ್ತ ವಿಕೃತಿ ಮೆರೆದ ಘಟನೆ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಹಲ್ಲೆಗೀಡಾದವರನ್ನು ಅನಿತಾ (38) ಎಂದು ಗುರುತಿಸಲಾಗಿದ್ದು, ಪತಿ ಲಕ್ಷ್ಮಣ ಕತ್ತಿಯಿಂದ ಹಲ್ಲೆಗೈದು ಅಟ್ಟಹಾಸ ಮೆರೆದಿದ್ದಾನೆ. ಗಂಭೀರ ಗಾಯಗೊಂಡ ಅನಿತಾಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ಇವರು ಕುಂದಾಪುರ ತಾಲೂಕಿನ ಬಸ್ರೂರು ಕಾಶಿ ಮಠ, ರೆಸಿಡೆನ್ಶಿಯಲ್ ಬ್ಲಾಕ್ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇವರು ನಾಲ್ಕು ತಿಂಗಳ ಹಿಂದಷ್ಟೇ ಕಾಶಿ ಮಠಕ್ಕೆ ಸೇರಿದ ತೋಟ ನೋಡಿಕೊಳ್ಳಲು ಉಡುಪಿ ಜಿಲ್ಲೆಗೆ ಬಂದಿದ್ದರು. ನಿನ್ನೆ ರಾತ್ರಿ ಕುಡಿದ ಮತ್ತಿನಲ್ಲಿ ಪತಿ ಲಕ್ಷ್ಮಣ ಪತ್ನಿಯ ಕುತ್ತಿಗೆ ಕಡಿದು ಮಾರಣಾಂತಿಕ ಗಾಯಗೊಳಿಸಿದ್ದಲ್ಲದೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಅನಿತಾಳನ್ನು ಹಾಗೆಯೇ ಬಿಟ್ಟು ಮನೆಯ ಬಾಗಿಲ ಚಿಲಕ ಹಾಕಿ ಹಾಲ್ ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತ ವಿಕೃತಿ ಮೆರೆದಿದ್ದಾನೆ.








ಕೆಲ ಕ್ಷಣಗಳಲ್ಲೆ ಸ್ಥಳೀಯರಿಗೆ ವಿಚಾರ ತಿಳಿದಿದ್ದು ಕೂಡಲೇ ಕಿಟಕಿ ಒಡೆದು ಅಡುಗೆ ಕೋಣೆಯಲ್ಲಿ ಬಿದ್ದಿದ್ದ ಮಹಿಳೆಯನ್ನು ಹೊರತಂದಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿ ಮಹಿಳೆಯನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೈಮೇಲೆ ದೈವ ಬಂದಂತೆ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಿದ್ದ ಆರೋಪಿ ಲಕ್ಷ್ಮಣನನ್ನು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬಂಧಿಸಿ ಎರಡೇಟು ಬಿಗಿದು ಹಿಡಿದ ಚಳಿಯನ್ನು ಬಿಡಿಸಿದ್ದಾರೆ. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Kundapura Udupi Man assaults wife with sickle, arrested by police. In a shocking incident, a man assaulted his wife with a sickle at Basrur under the Kandloor police station limits on Saturday night. The wife, seriously injured, has been admitted to the hospital. Anita (38), a native of Soraba, is the victim. Her husband, Laxmana (40), is the accused.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm