ಬ್ರೇಕಿಂಗ್ ನ್ಯೂಸ್
04-08-24 10:48 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 4: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಬಗ್ಗೆ ಅಪರಿಚಿತ ವ್ಯಕ್ತಿಯ ಮಾತು ಕೇಳಿ ಮಹಿಳೆಯೊಬ್ಬರು 1.65 ಕೋಟಿ ರೂಪಾಯಿ ಹಣ ಕಳಕೊಂಡಿದ್ದು ತಾನು ಮೋಸಕ್ಕೀಡಾದ ಬಗ್ಗೆ ಮಂಗಳೂರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಮಹಿಳೆ ಷೇರು ಮಾರುಕಟ್ಟೆಯ ಬಗ್ಗೆ ತಿಳಿದುಕೊಳ್ಳಲು ಇನ್ಸ್ ಟಾ ಗ್ರಾಮಿನಲ್ಲಿ ಸರ್ಚ್ ಮಾಡಿದ್ದರು. ಈ ವೇಳೆ, ಅಂಕಿತಾ ಪಟೇಲ್ ಹೆಸರಿನ ಅಪರಿಚಿತ ವ್ಯಕ್ತಿ ವಾಟ್ಸಪ್ ನಲ್ಲಿ ಚಾಟ್ ಮಾಡಿ, ಷೇರ್ ಮಾರ್ಕೆಟ್ ಕುರಿತ ಗ್ರೂಪಿಗೆ ಜಾಯಿನ್ ಮಾಡಿಸಿದ್ದ. ಆನಂತರ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಪ್ರೇರಣೆ ನೀಡಿದ್ದ.
ನಂತರ, Fidelity pearl of south Asia ಎಂಬ ಷೇರು ಮಾರುಕಟ್ಟೆ ವಾಟ್ಸಪ್ ಗ್ರೂಪಿಗೆ ಜಾಯಿನ್ ಮಾಡಿಸಿದ್ದರು. ಅದರಲ್ಲಿ ಹೂಡಿಕೆ ಮಾಡುವಂತೆ ಅಪರಿಚಿತ ವ್ಯಕ್ತಿ ತಿಳಿಸಿದಂತೆ, ಫಿಡೆಲಿಟಿ ಏಪ್ ಡೌನ್ಲೋಡ್ ಮಾಡಿ ತನ್ನ ಎಚ್ ಡಿಎಫ್ ಸಿ ಬ್ಯಾಂಕಿನಿಂದ ಜೂನ್ 26ರಿಂದ ಜುಲೈ 31ರ ನಡುವೆ ಹಂತ ಹಂತವಾಗಿ ಒಟ್ಟು 1,65,92,293 ರೂ. ಮೊತ್ತವನ್ನು ವರ್ಗಾವಣೆ ಮಾಡಿದ್ದರು.
ಹೂಡಿಕೆ ಮಾಡಿದ ಹಣವನ್ನು ಹಿಂತಿರುಗಿ ಪಡೆಯಲು ಯತ್ನಿಸಿದಾಗ ಸಾಧ್ಯವಾಗಲಿಲ್ಲ. ಅದು ತಿಳಿಯುತ್ತಿದ್ದನಂತೆ ಮಹಿಳೆಗೆ ಮೋಸದ ಅರಿವಾಗಿದ್ದು ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ವ್ಯಕ್ತಿ ಹೇಳಿದಂತೆ ಬೇರೆ ಬೇರೆ ಖಾತೆಗಳಿಗೆ IMPS ಮತ್ತು RTGS ಮೂಲಕ ಮಹಿಳೆ ಹಣ ವರ್ಗಾವಣೆ ಮಾಡಿದ್ದರು. ಈ ಹಣ ಹೂಡಿಕೆ ರೂಪದಲ್ಲಿ ಫಿಡೆಲಿಟಿ ಏಪ್ ನಲ್ಲಿ ತೋರಿಸುತ್ತಿತ್ತು. ಆದರೆ ಹೂಡಿಕೆ ಮಾಡಿದ ಹಣವನ್ನು ಹಿಂತಿರುಗಿ ಪಡೆಯುವ ಅವಕಾಶ ಇರಲಿಲ್ಲ. ಈ ರೀತಿ ಹಲವಾರು ಸಾರ್ವಜನಿಕರನ್ನು ವಂಚಕರು ನೇರವಾಗಿ ಸಂಪರ್ಕಿಸಿ ಮೋಸದ ಜಾಲಕ್ಕೆ ಸಿಲುಕಿಸುತ್ತಾರೆ. ಅತಿ ಹೆಚ್ಚು ಲಾಭ ಕೊಡಿಸುವ ಭರವಸೆಯನ್ನೂ ಕೊಡುತ್ತಾರೆ. ಮೋಸದ ಅರಿವಿರದೆ ಹಣ ಹೂಡಿಕೆ ಮಾಡಿದವರನ್ನು ಮತ್ತಷ್ಟು ಹೂಡಿಕೆ ಮಾಡುವಂತೆ ಪ್ರೇರಣೆ ನೀಡುತ್ತಾರೆ. ಇದೇ ಕಾರಣಕ್ಕೆ ಏಪ್ ನಲ್ಲಿ ಹೂಡಿಕೆ ಮಾಡಿದ ಮೊತ್ತ ಹೆಚ್ಚು ಅಪ್ ಆದ ರೀತಿ ಕಾಣಿಸುತ್ತಾರೆ. ಆಮೂಲಕ ಹಣ ಇದ್ದವರನ್ನು ಮತ್ತಷ್ಟು ಹೂಡಿಕೆ ಮಾಡಲು ಪ್ರೇರೇಪಿಸುತ್ತದೆ. ಇದೊಂದು ಸೈಬರ್ ವಂಚಕರ ಜಾಲವಾಗಿದ್ದು ತಂಡವಾಗಿ ಕಾರ್ಯ ನಿರ್ವಹಿಸುತ್ತದೆ. ಉತ್ತರ ಭಾರತದ ಮೂಲೆಯಲ್ಲಿ ಕುಳಿತು ಈ ಕೃತ್ಯ ಎಸಗುತ್ತಿದ್ದು ಇವರನ್ನು ಪತ್ತೆ ಮಾಡಲು ಪೊಲೀಸರೂ ಸರ್ವ ಪ್ರಯತ್ನ ಹಾಕದೇ ಇರುವುದು ಮತ್ತಷ್ಟು ವಂಚನೆಗೆ ದಾರಿಯಾಗಿಸಿದೆ.
Mangalore Share market fraud, women looses 1.65 crore money. Fidelity Pearl of South Asia company share market Fraud exposed. A case has been registered at cyber crime police station.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm