ಬ್ರೇಕಿಂಗ್ ನ್ಯೂಸ್
12-08-24 12:14 am Mangaluru Correspondent ಕ್ರೈಂ
ಉಳ್ಳಾಲ, ಆ.11: ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ ನನ್ನ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನ ವಿಕೆ ಫರ್ನಿಚರ್ ಬಳಿ ತಂಡವೊಂದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದೆ.
ಸಮೀರ್ ಭಾನುವಾರ ರಾತ್ರಿ ತಾಯಿ ಜತೆ ಕಾರಿನಲ್ಲಿ ಕಲ್ಲಾಪಿನ ಫಾಸ್ಟ್ ಫುಡ್ ವೊಂದಕ್ಕೆ ಉಪಹಾರಕ್ಕೆ ತೆರಳಿದ್ದ ವೇಳೆ ದಾಳಿ ನಡೆದಿದೆ ಎನ್ನಲಾಗಿದೆ.ಸಮೀರ್ ಕಾರು ಇಳಿಯುತ್ತಿದ್ದ ವೇಳೆ ಮತ್ತೊಂದು ಕಾರು ಬೆನ್ನಟ್ಟಿ ಬಂದಿದ್ದು ಅದರಲ್ಲಿದ್ದ ಮೂವರ ತಂಡವು ಮಾರಕಾಸ್ತ್ರಗಳಿಂದ ಸಮೀರ್ ನನ್ನ ಬೆನ್ನಟ್ಟಿದ್ದು,ಈ ವೇಳೆ ಸಮೀರ್ ತಪ್ಪಿಸಿಕೊಂಡು ರೈಲ್ವೇ ಹಳಿ ಕಡೆಗೆ ಓಡಿರುವುದಾಗಿ ತಾಯಿ ಹೇಳಿಕೆ ನೀಡಿದ್ದರು.
ಘಟನೆ ನಡೆಯುತ್ತಿದ್ದಂತೆ ಕಲ್ಲಾಪು ಜಂಕ್ಷನ್ ನಲ್ಲಿ ಜನಸ್ತೋಮವೇ ನೆರೆದಿದ್ದು ತಪ್ಪಿಸಿ ಕೊಂಡಿರುವ ರೌಡಿಶೀಟರ್ ಸಮೀರ್ ಗಾಗಿ ಹುಡುಕಾಟ ನಡೆಸಿದ್ದರು.
ತಡರಾತ್ರಿ ಸಮೀರ್ ಮೃತ ದೇಹವು ವಿಕೆ ಫರ್ನಿಚರ್ ಬಳಿಯ ಪೊದೆಯಲ್ಲಿ ಸಿಕ್ಕಿದೆ.ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸಮೀರ್ ಮತ್ತು ತಂಡವು ಇತ್ತೀಚಿಗಷ್ಟೆ ದರೋಡೆ ಪ್ರಕರಣವೊಂದರಲ್ಲಿ ಜೈಲು ಪಾಲಾಗಿದ್ದು ಎರಡು ದಿನಗಳ ಹಿಂದಷ್ಟೆ ಸಮೀರ್ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಸಮೀರ್ ನನ್ನು ಜೈಲಿನಲ್ಲಿ ಕಳೆದ ತಿಂಗಳು ತಂಡವೊಂದು ಕೊಲೆಗೆ ಯತ್ನಿಸಿದ್ದು ಅಲ್ಲಿ ಸಮೀರ್ ಬಚಾವಾಗಿದ್ದ. ಜೈಲಿನಿಂದ ಹೊರ ಬರುತ್ತಲೇ ದುಷ್ಕರ್ಮಿಗಳು ಆತನನ್ನು ಕೊಂದೇ ಮುಗಿಸಿದ್ದಾರೆ.
Ullal natorious rowdy Sameer alias Kadapar Sameer murdered brutally by rival gang in Mangalore. Sameer was on his way to his mother house near kallapu during which rival team has chased and attacked him
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm