ಬ್ರೇಕಿಂಗ್ ನ್ಯೂಸ್
18-08-24 10:24 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 18: ಮುಡಿಪು ಸಮೀಪದ ಮುದುಂಗಾರು ಕಟ್ಟೆ ಬಳಿ ಮಹಿಳೆಯೊಬ್ಬರ ಬಂಗಾರದ ಸರ ಕಸಿದು ಪರಾರಿಯಾಗಿದ್ದ ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನರಿಂಗಾನ ಗ್ರಾಮದ ನವಾಝ್ ಯಾನೆ ನವ್ವ(32) ಹಾಗೂ ಮಹಮ್ಮದ್ ನಿಯಾಫ್ ಯಾನೆ ನಿಯಾ(28) ಎಂದು ಗುರುತಿಸಲಾಗಿದೆ.
ಮುದುಂಗಾರು ಕಟ್ಟೆ ಕಲ್ಲಾಪು ನಿವಾಸಿ ಯಮುನಾ ಎಂಬ ವೃದ್ಧ ಮಹಿಳೆ ಮೊನ್ನೆ ಶುಕ್ರವಾರ ಮುದುಂಗಾರು ಕಟ್ಟೆ ಶಾಲಾ ಹಿಂಭಾಗದಲ್ಲಿ ಸೊಪ್ಪು ಕೊಯ್ಯುತ್ತಿದ್ದಾಗ ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಬಂದ ಇಬ್ಬರು ಆಗಂತುಕರು ಮಹಿಳೆಯ ಸುಮಾರು ಒಂದುವರೆ ಪವನ್ ತೂಕದ ಬಂಗಾರದ ಸರ ಕಸಿದು ಪರಾರಿಯಾಗಿದ್ದರು. ಈ ಸಂದರ್ಭದಲ್ಲಿ ಮಹಿಳೆ ಬೊಬ್ಬೆ ಹಾಕಿದ್ದರೂ ಸ್ಥಳದಲ್ಲಿ ಯಾರೂ ಇರಲಿಲ್ಲ. ಬಳಿಕ ಮಹಿಳೆಯ ಮನೆಯವರು ಕೊಣಾಜೆ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದರು. ಸಿಸಿ ಟಿವಿಗಳ ಪರಿಶೀಲನೆ ವೇಳೆ ಕಳ್ಳರ ಸುಳಿವು ಸಿಕ್ಕಿತ್ತು.
ಕಳ್ಳತನ ನಡೆದ ಎರಡೇ ದಿನದಲ್ಲಿ ಕೊಣಾಜೆ ಪೊಲೀಸರಾದ ಪಿಎಸ್ಐ ವಿನೋದ್, ಸಿಬ್ಬಂದಿಗಳಾದ ಸಂತೋಷ್ ಕೆಸಿ, ಬಸವನ ಗೌಡ ಹಾಗೂ ಸುರೇಶ್ ಅವರು ಸರ ಕಳ್ಳತನ ನಡೆಸಿದ್ದ ಆರೋಪಿಗಳನ್ನು ಭಾನುವಾರ ಕೈರಂಗಳ ಗ್ರಾಮದ ವಿದ್ಯಾನಗರ ಬಸ್ ನಿಲ್ದಾಣದ ಬಳಿ ಬಂಧಿಸಿದ್ದಾರೆ. ಆರೋಪಿಗಳಿಂದ ಹತ್ತು ಗ್ರಾಂ ಬಂಗಾರ ಹಾಗೂ ಡಿಯೋ ಸ್ಕೂಟರನ್ನು ವಶಪಡಿಸಿಕೊಂಡಿಸಿದ್ದಾರೆ.
ಆರೋಪಿಗಳಲ್ಲಿ ನವಾಝ್ ಎಂಬಾತನ ವಿರುದ್ದ ಕೊಣಾಜೆ ಠಾಣೆಯಲ್ಲಿ ಈ ಹಿಂದೆ ದರೋಡೆ ಹಾಗೂ ಗಲಾಟೆ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Two arrested from Mangalore over chain snatching by police. The arrested have been identified as Nawaz and Niyab. They snatched the gold chain of 69 year old women who was walking on the road.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm