ಬ್ರೇಕಿಂಗ್ ನ್ಯೂಸ್
19-08-24 10:35 pm Mangalore Correspondent ಕ್ರೈಂ
ಉಳ್ಳಾಲ, ಆ.19: ಜಿಲ್ಲೆಯಲ್ಲಿ ಮರಳುಗಾರಿಕೆ ನಿಷೇಧದ ನಡುವೆಯೂ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾತ್ರ ನಿತ್ಯ, ನಿರಂತರವಾಗಿ ಅಕ್ರಮವಾಗಿ ಮರಳು ಸಾಗಾಟ ನಡೆಯುತ್ತಲೇ ಇದೆ. ಉಚ್ಚಿಲದ ಅಜ್ಜಿನಡ್ಕ ಗುಡ್ಡೆ ಎಂಬಲ್ಲಿನ ಸಮತಟ್ಟಾದ ಗುಡ್ಡ ಪ್ರದೇಶದಲ್ಲಿ ಟನ್ ಗಟ್ಟಲೆ ಮರಳನ್ನು ದಾಸ್ತಾನು ಇರಿಸಲಾಗಿದ್ದು ನಸುಕಿನ ಜಾವ ಇಲ್ಲಿಂದ ಮರಳು ಸರಬರಾಜು ನಡೆಯುತ್ತಿದ್ದು ಇದರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಉಳ್ಳಾಲ ಪೊಲೀಸರು ತಮಗೇನೂ ತಿಳಿಯದ ರೀತಿ ಮರಳು ಮಾಫಿಯಾಕ್ಕೆ ಬೆದರಿ ಮಂಡಿ ಊರಿ ಸುಮ್ಮನಾಗಿದ್ದಾರೆ.
ಉಳ್ಳಾಲ ಠಾಣೆ ವ್ಯಾಪ್ತಿಯ ಉಚ್ಚಿಲ-ಬಟ್ಟಪ್ಪಾಡಿ, ತಲಪಾಡಿ, ಕೋಟೆಪುರ ಸಮುದ್ರ,ನದಿ ತೀರದಿಂದ ನಿತ್ಯವೂ ಅಕ್ರಮವಾಗಿ ಮರಳು ಎತ್ತಲಾಗುತ್ತಿದೆ. ಮುಂಜಾನೆ ನಸುಕಿನ ಜಾವ ತೊಕ್ಕೊಟ್ಟು ಓವರ್ ಬ್ರಿಡ್ಜ್ ನ ಹೆದ್ದಾರಿಯ ವಿರುದ್ಧ ಧಿಕ್ಕಿನಲ್ಲಿ ಮರಳುಗಾರಿಕೆಯ ಲಾರಿಗಳು ಬುಸುಗುಟ್ಟಿ ಧಾವಿಸುತ್ತಿದ್ದರೂ ಇವರ ವಿರುದ್ಧ ಉಳ್ಳಾಲ ಪೊಲೀಸರಾಗಲಿ, ಸಂಚಾರಿ ಪೊಲೀಸರಾಗಲೀ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಮರಳು ಮಾಫಿಯಾಕ್ಕೆ ಪೊಲೀಸರೇ ಬೆದರಿ ಬಾಲ ಮುದುಡಿ ಕುಳಿತರೇ ಎಂಬಂತಿದೆ ಪರಿಸ್ಥಿತಿ.




ಉಚ್ಚಿಲ ಸಮೀಪದ ಅಜ್ಜಿನಡ್ಕದ ಗುಡ್ಡೆ ಕೊಪ್ಪಲ್ ಎಂಬ ಸಮತಟ್ಟಾದ ಗುಡ್ಡ ಪ್ರದೇಶದಲ್ಲಿ ಮೆಟ್ರಿಕ್ ಟನ್ ಗಳಷ್ಟು ಮರಳನ್ನ ಅಕ್ರಮವಾಗಿ ದಾಸ್ತಾನು ಇರಿಸಲಾಗಿದೆ. ದಿನ ನಿತ್ಯವೂ ರಾತ್ರಿ ವೇಳೆ ಇಲ್ಲಿಗೆ ಮರಳು ಬರುತ್ತಿದ್ದು ಅಕ್ರಮವಾಗಿ ದಾಸ್ತಾನು ಇರಿಸಲಾಗುತ್ತಿದೆ. ಜಾಸ್ತಿ ಬೆಲೆ ಕೊಡುವ ಗಿರಾಕಿಗಳಿಗೆ ಇಲ್ಲಿಂದ ಮರಳನ್ನ ಲಾರಿಗಳಲ್ಲಿ ಸಾಗಾಟ ನಡೆಸಲಾಗುತ್ತಿದೆ. ಅಜ್ಜಿನಡ್ಕದ ಮುಖ್ಯ ರಸ್ತೆ ಬದಿಯಲ್ಲೇ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದರೂ ಉಳ್ಳಾಲ ಪೊಲೀಸರ ಕಣ್ಣಿಗೆ ಮಾತ್ರ ಇದು ಕಂಡೇ ಇಲ್ಲ. ಬಡ ವರ್ಗದವರಿಗೆ ಕಟ್ಟಡ ನಿರ್ಮಾಣ ಮಾಡಲು ಮರಳೇ ಸಿಗದ ಸಮಯದಲ್ಲಿ ಉಳ್ಳವರಿಗೆ ಈ ರೀತಿ ಅಕ್ರಮವಾಗಿ ದಾಸ್ತಾನು ಇರಿಸಿದ ಮರಳು ಪೂರೈಕೆ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.
ಅಕ್ರಮ ಮರಳುಗಾರಿಕೆಯ ವಿರುದ್ಧ ಕ್ರಮಕ್ಕೇನೋ ಸ್ಥಳೀಯರು ಆಗ್ರಹಿಸಿದ್ದಾರೆ. ಆದರೆ ಕ್ರಮ ಕೈಗೊಳ್ಳುವವರು ಯಾರು ಎನ್ನೋದು ಯಕ್ಷಪ್ರಶ್ನೆ.
Mangalore Illegal sand sale at Ajjinadka in ulllal, police take no action. Ajjinadka near uchila is filled with illegal sand and customers throng to purchase sand
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am