ಬ್ರೇಕಿಂಗ್ ನ್ಯೂಸ್
19-08-24 10:35 pm Mangalore Correspondent ಕ್ರೈಂ
ಉಳ್ಳಾಲ, ಆ.19: ಜಿಲ್ಲೆಯಲ್ಲಿ ಮರಳುಗಾರಿಕೆ ನಿಷೇಧದ ನಡುವೆಯೂ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾತ್ರ ನಿತ್ಯ, ನಿರಂತರವಾಗಿ ಅಕ್ರಮವಾಗಿ ಮರಳು ಸಾಗಾಟ ನಡೆಯುತ್ತಲೇ ಇದೆ. ಉಚ್ಚಿಲದ ಅಜ್ಜಿನಡ್ಕ ಗುಡ್ಡೆ ಎಂಬಲ್ಲಿನ ಸಮತಟ್ಟಾದ ಗುಡ್ಡ ಪ್ರದೇಶದಲ್ಲಿ ಟನ್ ಗಟ್ಟಲೆ ಮರಳನ್ನು ದಾಸ್ತಾನು ಇರಿಸಲಾಗಿದ್ದು ನಸುಕಿನ ಜಾವ ಇಲ್ಲಿಂದ ಮರಳು ಸರಬರಾಜು ನಡೆಯುತ್ತಿದ್ದು ಇದರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಉಳ್ಳಾಲ ಪೊಲೀಸರು ತಮಗೇನೂ ತಿಳಿಯದ ರೀತಿ ಮರಳು ಮಾಫಿಯಾಕ್ಕೆ ಬೆದರಿ ಮಂಡಿ ಊರಿ ಸುಮ್ಮನಾಗಿದ್ದಾರೆ.
ಉಳ್ಳಾಲ ಠಾಣೆ ವ್ಯಾಪ್ತಿಯ ಉಚ್ಚಿಲ-ಬಟ್ಟಪ್ಪಾಡಿ, ತಲಪಾಡಿ, ಕೋಟೆಪುರ ಸಮುದ್ರ,ನದಿ ತೀರದಿಂದ ನಿತ್ಯವೂ ಅಕ್ರಮವಾಗಿ ಮರಳು ಎತ್ತಲಾಗುತ್ತಿದೆ. ಮುಂಜಾನೆ ನಸುಕಿನ ಜಾವ ತೊಕ್ಕೊಟ್ಟು ಓವರ್ ಬ್ರಿಡ್ಜ್ ನ ಹೆದ್ದಾರಿಯ ವಿರುದ್ಧ ಧಿಕ್ಕಿನಲ್ಲಿ ಮರಳುಗಾರಿಕೆಯ ಲಾರಿಗಳು ಬುಸುಗುಟ್ಟಿ ಧಾವಿಸುತ್ತಿದ್ದರೂ ಇವರ ವಿರುದ್ಧ ಉಳ್ಳಾಲ ಪೊಲೀಸರಾಗಲಿ, ಸಂಚಾರಿ ಪೊಲೀಸರಾಗಲೀ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಮರಳು ಮಾಫಿಯಾಕ್ಕೆ ಪೊಲೀಸರೇ ಬೆದರಿ ಬಾಲ ಮುದುಡಿ ಕುಳಿತರೇ ಎಂಬಂತಿದೆ ಪರಿಸ್ಥಿತಿ.




ಉಚ್ಚಿಲ ಸಮೀಪದ ಅಜ್ಜಿನಡ್ಕದ ಗುಡ್ಡೆ ಕೊಪ್ಪಲ್ ಎಂಬ ಸಮತಟ್ಟಾದ ಗುಡ್ಡ ಪ್ರದೇಶದಲ್ಲಿ ಮೆಟ್ರಿಕ್ ಟನ್ ಗಳಷ್ಟು ಮರಳನ್ನ ಅಕ್ರಮವಾಗಿ ದಾಸ್ತಾನು ಇರಿಸಲಾಗಿದೆ. ದಿನ ನಿತ್ಯವೂ ರಾತ್ರಿ ವೇಳೆ ಇಲ್ಲಿಗೆ ಮರಳು ಬರುತ್ತಿದ್ದು ಅಕ್ರಮವಾಗಿ ದಾಸ್ತಾನು ಇರಿಸಲಾಗುತ್ತಿದೆ. ಜಾಸ್ತಿ ಬೆಲೆ ಕೊಡುವ ಗಿರಾಕಿಗಳಿಗೆ ಇಲ್ಲಿಂದ ಮರಳನ್ನ ಲಾರಿಗಳಲ್ಲಿ ಸಾಗಾಟ ನಡೆಸಲಾಗುತ್ತಿದೆ. ಅಜ್ಜಿನಡ್ಕದ ಮುಖ್ಯ ರಸ್ತೆ ಬದಿಯಲ್ಲೇ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದರೂ ಉಳ್ಳಾಲ ಪೊಲೀಸರ ಕಣ್ಣಿಗೆ ಮಾತ್ರ ಇದು ಕಂಡೇ ಇಲ್ಲ. ಬಡ ವರ್ಗದವರಿಗೆ ಕಟ್ಟಡ ನಿರ್ಮಾಣ ಮಾಡಲು ಮರಳೇ ಸಿಗದ ಸಮಯದಲ್ಲಿ ಉಳ್ಳವರಿಗೆ ಈ ರೀತಿ ಅಕ್ರಮವಾಗಿ ದಾಸ್ತಾನು ಇರಿಸಿದ ಮರಳು ಪೂರೈಕೆ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.
ಅಕ್ರಮ ಮರಳುಗಾರಿಕೆಯ ವಿರುದ್ಧ ಕ್ರಮಕ್ಕೇನೋ ಸ್ಥಳೀಯರು ಆಗ್ರಹಿಸಿದ್ದಾರೆ. ಆದರೆ ಕ್ರಮ ಕೈಗೊಳ್ಳುವವರು ಯಾರು ಎನ್ನೋದು ಯಕ್ಷಪ್ರಶ್ನೆ.
Mangalore Illegal sand sale at Ajjinadka in ulllal, police take no action. Ajjinadka near uchila is filled with illegal sand and customers throng to purchase sand
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm