ಬ್ರೇಕಿಂಗ್ ನ್ಯೂಸ್
19-08-24 11:01 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 19: ಯೂಟ್ಯೂಬ್ ನೋಡಿ ಖೋಟಾ ನೋಟು ಪ್ರಿಂಟ್ ಮಾಡುವುದನ್ನು ಕಲಿತು 500 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಮುದ್ರಿಸಿ ಅದನ್ನು ಮಂಗಳೂರು ನಗರದಲ್ಲಿ ಚಲಾವಣೆಗೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2.13 ಲಕ್ಷ ಮೌಲ್ಯದ 427 ಖೋಟಾ ನೋಟುಗಳನ್ನು ವಶಪಡಿಸಿದ್ದಾರೆ.
ಬಂಧಿತರನ್ನು ಕೇರಳದ ಕಾಸರಗೋಡು ಜಿಲ್ಲೆಯ ಕೊಳತ್ತೂರಿನ ವಿ.ಪ್ರಿಯೇಶ್ (38), ಕಾಸರಗೋಡು ಜಿಲ್ಲೆಯ ಮಲ್ಲ ಗ್ರಾಮದ ಮುಳಿಯಾರಿನ ವಿನೋದ್ ಕುಮಾರ್ ಕೆ. (33), ಪೆರಿಯಾದ ಕುನಿಯಾ ವಡಂಕುರದ ಅಬ್ದುಲ್ ಖಾದರ್ ಎಸ್.ಎ (58) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಬೆಳಿಯೂರು ಕಟ್ಟೆಯ ಆಯೂಬ್ ಖಾನ್ (51) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸುಮಾರು 2.13 ಲಕ್ಷ ಮೌಲ್ಯದ 500 ಮುಖಬೆಲೆಯ ಖೋಟಾ ನೋಟುಗಳನ್ನು ವಶಪಡಿಸಲಾಗಿದೆ. ಇವರು ಕಾಸರಗೋಡಿನಲ್ಲಿ ನಕಲಿ ನೋಟುಗಳನ್ನು ಮುದ್ರಿಸಿ ತಂದು ಮಂಗಳೂರು ನಗರದ ಕ್ಲಾಕ್ ಟವರ್ ವೃತ್ತದ ಬಳಿಯ ಲಾಡ್ಜ್ ಒಂದರಲ್ಲಿದ್ದು ಚಲಾವಣೆಗೆ ಯತ್ನಿಸುತ್ತಿದ್ದರು. ಎಷ್ಟು ಮೊತ್ತದ ನಕಲಿ ನೋಟು ಚಲಾವಣೆ ಆಗಿದೆ ಮತ್ತು ಎಷ್ಟು ಸಮಯದಿಂದ ಮೋಸದ ಕೃತ್ಯ ನಡೆಯುತ್ತಿದೆ ಎನ್ನುವ ಬಗ್ಗೆ ತನಿಖೆ ನಡೆಯಬೇಕಷ್ಟೆ.
ಪ್ರಿಯೇಶ್ ಕಾಸರಗೋಡು ಜಿಲ್ಲೆಯ ಚೆರ್ಕಳದಲ್ಲಿ ಮುದ್ರಣಾಲಯವನ್ನು ಹೊಂದಿದ್ದು, ಅಲ್ಲಿ ಖೋಟಾ ನೋಟುಗಳನ್ನು ಮುದ್ರಿಸುತ್ತಿದ್ದ. ಅದಕ್ಕೆ ಬೇಕಾದ ಕಚ್ಚಾ ಸಾಮಾಗ್ರಿಗಳನ್ನು ಕೇರಳದ ಕೋಯಿಕ್ಕೋಡ್ ಮತ್ತು ದೆಹಲಿಯಿಂದ ಖರೀದಿಸಿ ತರುತ್ತಿದ್ದ. ಸಾಲದ ಸುಳಿಗೆ ಸಿಲುಕಿದ್ದ ಆತ ಖೋಟಾ ನೋಟುಗಳನ್ನು ತಯಾರಿಸುವ ವಿಧಾನವನ್ನು ಯೂಟ್ಯೂಬ್ನಲ್ಲಿ ವೀಕ್ಷಿಸಿದ್ದ. ಸುಲಭದಲ್ಲಿ ಹಣ ಸಂಪಾದಿಸುವ ಉದ್ದೇಶದಿಂದ ನಾಲ್ಕು ತಿಂಗಳಿನಿಂದ ಈ ಕೃತ್ಯದಲ್ಲಿ ತೊಡಗಿದ್ದ. ಆತನಿಗೆ ಮಲ್ಲ ನಿವಾಸಿ ವಿನೋದ್ ಪರಿಚಯವಿತ್ತು. ವಿನೋದ್ ಮೂಲಕ ಅಬ್ದುಲ್ ಖಾದರ್ ಹಾಗೂ ಆನಂತರ ಆಯೂಬ್ ಖಾನ್ ಪರಿಚಯವಾಗಿದ್ದರು. ಆರೋಪಿಗಳು ಖೋಟಾ ನೋಟುಗಳನ್ನು ಪ್ರಿಯೇಶ್ನಿಂದ ತರಿಸಿಕೊಂಡು ನಗರದಲ್ಲಿ ಚಲಾವಣೆ ಮಾಡಲು ಯತ್ನಿಸಿದ್ದರು. ಪ್ರಿಯೇಶ್ ₹ 25 ಸಾವಿರ ಪಡೆದು, ಪ್ರತಿಯಾಗಿ ₹ 500 ಮುಖ ಬೆಲೆಯ ಒಂದು ಲಕ್ಷ ಮೌಲ್ಯದ ಖೋಟಾ ನೋಟು ನೀಡಲು ಒಪ್ಪಿದ್ದ. ಈ ಜಾಲದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಮುದ್ರಿಸಿದ್ದ ಖೋಟಾ ನೋಟುಗಳು ಅಸಲಿ ನೋಟಿನಂತೆಯೇ ತೋರುತ್ತಿದ್ದು ಬರಿಗಣ್ಣಿನಲ್ಲಿ ಪತ್ತೆಹಚ್ಚುವುದು ಬಹಳ ಕಷ್ಟ. ಗುಣಮಟ್ಟದ ಕಾಗದ ಹಾಗೂ ಶಾಯಿಯನ್ನು ಬಳಸಿ ನೋಟು ಮುದ್ರಿಸಲಾಗಿದೆ ಎಂದು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮಸುಂದರ್, ಪಿಎಸ್ಐಗಳಾದ ಸುದೀಪ್, ನರೇಂದ್ರ, ಎಎಸ್ಐ ಮೋಹನ್ ಕೆವಿ, ರಾಮ ಪೂಜಾರಿ, ಸುಜನ್ ಶೆಟ್ಟಿ, ಶೀನಪ್ಪ ಮತ್ತಿತರ ಸಿಬಂದಿ ಪಾಲ್ಗೊಂಡಿದ್ದರು.
Mangalore Four arrested for fake note currencies printing by CCB police. 2.13 lakhs cash has been seized with mobile phones
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm