ಬ್ರೇಕಿಂಗ್ ನ್ಯೂಸ್
20-08-24 11:21 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 20: ಎರಡು ಕಾಲೇಜು ತಂಡಗಳ ನಡುವಿನ ಫುಟ್ಬಾಲ್ ಪಂದ್ಯಾಟದಲ್ಲಿ ಕಿರಿಕ್ ಉಂಟಾಗಿ ಒಂದು ತಂಡ ಐದಾರು ವಿದ್ಯಾರ್ಥಿಗಳನ್ನು ಅಪಹರಿಸಿ ವಿವಸ್ತ್ರಗೊಳಿಸಿ ಹಲ್ಲೆಗೈದ ಘಟನೆ ನಡೆದಿದ್ದು ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಿದ್ದಾರೆ.
ಮಂಗಳೂರಿನ ನೆಹರು ಮೈದಾನದಲ್ಲಿ ಯೆನಪೋಯ ಮತ್ತು ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಆಗಸ್ಟ್ 14ರಂದು ಫುಟ್ಬಾಲ್ ಟೂರ್ನಮೆಂಟ್ ನಡೆದಿತ್ತು. ಈ ವೇಳೆ, ಮಹಮ್ಮದ್ ಶುರೈ, ಮಹಮ್ಮದ್ ಅಫ್ರಾನ್, ಇಬ್ರಾಹಿಂ ಖಲೀಲ್ ಮತ್ತು ಮಹಮ್ಮದ್ ಜುನೈದ್ ಎಂಬವರು ಯೆನಪೋಯ ತಂಡಕ್ಕೆ ಬೆಂಬಲಿಸಿದ ದ್ವೇಷದಲ್ಲಿ ಮತ್ತೊಂದು ತಂಡದ ವಿದ್ಯಾರ್ಥಿಗಳು ಇವರನ್ನು ಅಪಹರಿಸಿದ್ದಾರೆ. ಆಗಸ್ಟ್ 19ರ ಸೋಮವಾರ ಸಂಜೆ ಇವರನ್ನು ಪಾಂಡೇಶ್ವರದ ಫೋರಂ ಮಾಲ್ ಬಳಿಯಿಂದ ಕಾರಿನಲ್ಲಿ ಅಪಹರಿಸಿದ್ದು ಮಹಾಕಾಳಿ ಪಡ್ಪು ಎಂಬಲ್ಲಿಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ದಿಯಾನ್, ಅನ್ನೈ, ತಸ್ಮಿನ್, ಸಲ್ಮಾನ್, ಅನಾಸ್ ಮತ್ತಿತರರು ಸೇರಿ ಹಲ್ಲೆಗೈದಿದ್ದಾಗಿ ಮೊಹಮ್ಮದ್ ಶುರೈ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಮಹಾಕಾಳಿ ಪಡ್ಪು ಮತ್ತು ಪಡೀಲ್ ಗೆ ಕರೆದೊಯ್ದು ಹಲ್ಲೆ ನಡೆಸಿದ್ದಲ್ಲದೆ, ಯದ್ವಾತದ್ವಾ ಹೊಡೆದು ಸಿಗರೇಟ್ ನಿಂದ ಸುಟ್ಟು ಚಿತ್ರಹಿಂಸೆ ನೀಡಿದ್ದಾರೆ. ಮಂಗಳೂರು ನಗರದ ಎರಡು ಕಡೆ ಕರೆದೊಯ್ದು ಹಲ್ಲೆ ಕೃತ್ಯ ನಡೆಸಲಾಗಿದ್ದು ಹಲ್ಲೆ ಬಳಿಕ ವಿದ್ಯಾರ್ಥಿಗಳ ಪ್ಯಾಂಟ್ ಶರ್ಟ್ ತೆಗೆಸಿ ಒಳ ಚಡ್ಡಿಯಲ್ಲಿ ನಿಲ್ಲಿಸಿ ಬಸ್ಕಿ ತೆಗೆಸಿದ್ದಾರೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು ಆರೋಪಿಗಳು ಇದರ ವಿಡಿಯೋ ಮಾಡಿ ತಮ್ಮ ವಾಟ್ಸಪ್ ಗ್ರೂಪಿನಲ್ಲಿ ಷೇರ್ ಮಾಡಿದ್ದರು. ವಿಡಿಯೋ ಆಧರಿಸಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು ಇತರ ಆರೋಪಿಗಳಿಗೆ ಶೋಧ ನಡೆಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಿದ್ಯಾರ್ಥಿಗಳನ್ನು ವಿವಸ್ತ್ರಗೊಳಿಸಿ ಕ್ಷಮೆ ಕೇಳುವಂತೆ ಹೇಳಿ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ.
ಆರೋಪಿಗಳ ಪೈಕಿ ದಿಯಾನ್ ಮತ್ತು ಸಲ್ಮಾನ್ ಎಂಬಿಬ್ಬರನ್ನು ಬಂಧಿಸಲಾಗಿದೆ. ಇನ್ನಿಬ್ಬರು 17 ವರ್ಷದ ಹುಡುಗರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
Mangalore Clash between two college students over a football tournament, three students were kidnapped and tortured the whole night. The miscrenats have also made the video go viral on social media. Pandeshwar Police have arrested two people in this case.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am